BJP 2nd Candidates List: ಬಿಜೆಪಿ ಎರಡನೇ ಪಟ್ಟಿ ಇಂದು ಬಿಡುಗಡೆ ನಿರೀಕ್ಷೆ
ಬೆಂಗಳೂರು ಮಾರ್ಚ್ 13: ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಗೆ ತಡವಾಗುತ್ತಿದ್ದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಈಗಾಗಲೇ ಪಟ್ಟಿ ಸಿದ್ಧವಾಗಿದ್ದು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗಬೇಕಿದೆ. ಆದರೆ ಪಟ್ಟಿ ಬಿಡುಗಡೆಗೆ ಇಂದು ನಾಳೆ ಎನ್ನುತ್ತ ಕ್ಷೇತ್ರಗಳಲ್ಲಿ ಆಗುವ ಬದಲಾವಣೆಗಳನ್ನು ಬಿಜೆಪಿ ಸೂಕ್ಷ್ಮವಾಗಿ ಅವಲೋಕಿಸುತ್ತಿರುವಂತೆ ಕಾಣಿಸುತ್ತಿದೆ.
ರಾಜ್ಯದ ಅಭ್ಯರ್ಥಿಗಳನ್ನು ಒಳಗೊಳ್ಳಲಿರುವ ಬಿಜೆಪಿಯ ಎರಡನೇ ಪಟ್ಟಿ ಬುಧವಾರ/ಗುರುವಾರ ಬಿಡುಗಡೆ ಆಗುವ ನಿರೀಕ್ಷೆಯಿದ್ದು, ಚುನಾವಣಾ ರಾಜ ಕಾರಣದಿಂದ ನಿವೃತ್ತಿ ಫೋಷಿಸಿರುವ ನಾಲ್ವರನ್ನು ಹೊರತುಪಡಿಸಿ ಇತರ ಹಾಲಿ ಸಂಸದರ ಪೈಕಿ ಅರ್ಧಕ್ಕಿಂತ ಹೆಚ್ಚು ಅಂದರೆ, ಸುಮಾರು 12 ಮಂದಿಗೆ ಮತ್ತೊಮ್ಮೆ ಟಿಕೆಟ್ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯದ ಒಟ್ಟು 28 ಹಾಲಿ ಸಂಸದರ ಪೈಕಿ 25 ಬಿಜೆಪಿಯ ಸಂಸದರಿದ್ದಾರೆ. ಇವರಲ್ಲಿ ಚಾಮರಾಜನಗರದ ವಿ.ಶ್ರೀನಿವಾಸ ಪ್ರಸಾದ್, ಚಿಕ್ಕಬಳ್ಳಾಪುರದ ಬಿ.ಎಸ್.ಬಸವರಾಜು ವಯೋ ಕಾರಣದಿಂದ ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವುದಾಗಿ ಈಗಾಗಲೇ ಘೋಷಿಸಿದ್ದಾರೆ.
ಹಾವೇರಿಯ ಶಿವಕುಮಾರ್ ಉದಾಸಿ ಅವರಿಗೆ ವಯಸ್ಸು ಇದ್ದರೂ ಕೂಡ ವೈಯಕ್ತಿಕ ಕಾರಣದಿಂದಾಗಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಮದು ಸ್ಪಷ್ಟಪಡಿಸಿದ್ದಾರೆ. ಇನ್ನುಳಿಯುವ 21 ಸಂಸದರ ಪೈಕಿ12 ಮಂದಿಗೆ ಟಿಕೆಟ್ ಸಿಗುತ್ತಾ ಎಂಬುದರ ಬಗ್ಗೆ ಚರ್ಚೆ ಬಿಜೆಪಿ ಪಾಳೆಯದಲ್ಲಿ ಗಂಭೀರವಾಗಿ ಕೇಳಿಬರುತ್ತಿದೆ.

ಹೀಗೆ ಚರ್ಚೆಗೆ ಒಳಪಟ್ಟವರೆಂದರೆ ಮೈಸೂರಿನ ಪ್ರತಾಪ್ ಸಿಂಹ, ಬೆಂಗಳೂರು ಉತ್ತರದಡಿ ವಿ ಸದಾನಂದ ಗೌಡ, ಕೋಲಾರದ ಮುನಿಸ್ವಾಮಿ, ದಕ್ಷಿಣ ಕನ್ನಡದ ನಳಿನ್ಕುಮಾರ್ ಕಟೀಲ್, ಕೇಂದ್ರ ಸಚಿವರಾಗಿರುವ ಚಿತ್ರದುರ್ಗದ ಎ.ನಾರಾಯಣಸ್ವಾಮಿ, ದಾವಣಗೆರೆಯ ಜಿ.ಎಂ.ಸಿದ್ದೇಶ್ವರ್, ಉತ್ತರ ಕನ್ನಡದ ಅನಂತಕುಮಾರ್ ಹೆಗಡೆ, ಬೆಳಗಾವಿಯ ಮಂಗಳಾ ಅಂಗಡಿ, ವಿಜಯಪುರದ ರಮೇಶ್ ಜಿಗಜಿಣಗಿ, ಕೇಂದ್ರ ಸಚಿವರಾಗಿರುವ ಬೀದರ್ನ ಭಗವಂತ ಖೂಬಾ, ಬಳ್ಳಾರಿಯ ದೇವೇಂದ್ರಪ್ಪ ಹಾಗೂ ಕೊಪ್ಪಳದ ಕರಡಿ ಸಂಗಣ್ಣ.
ಬಿಜೆಪಿ ವರಿಷ್ಠರು ಸಂಸದರ ಸಾಧನೆಯನ್ನು ಪರಿಗಣಿಸುವುದರ ಜೊತೆಗೆ ಕೆಲವು ಕ್ಷೇತ್ರಗಳಲ್ಲಿ ಹೊಸ ಪ್ರಯೋಗದ ಮೂಲಕ ಹೊಸಬರಿಗೆ ಅವಕಾಶ ಕಲ್ಪಿಸಲು ಚಿಂತನೆ ನಡೆಸಿದೆ. ಆದರೆ ಕಳೆದ ವಿಧಾನಸಭಾ ಚುನಾವಣೆಯ ಅನುಭವದ ಆಧಾರದ ಮೇಲೆ ಈ ಬಾರಿ ಹೊಸ ಪ್ರಯೋಗ ಮಾಡುವುದು ಬೇಡ ಎಂಬ ಅಭಿಪ್ರಾಯವನ್ನು ಪಕ್ಷದ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು ಈಗಾಗಲೇ ವರಿಷ್ಠಗೆ ತಿಳಿಸಿದ್ದಾರೆ.
ಆದರೂ, ಹಾಲಿ ಸಂಸದರ ಪೈಕಿ ಬಹುತೇಕರಿಗೆ ಟಿಕೆಟ್ ಸಿಗುತ್ತಾ ಎಂಬುದರ ಬಗ್ಗೆ ಖಾತರಿಯಿಲ್ಲ. ರಾಜ್ಯ ಬಿಜೆಪಿಯ ನಾಯಕರನ್ನು ಒಳಗೊಂಡಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ದೆಹಲಿಯಲ್ಲಿ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆದಿದ್ದರೂ ಕೆಲವು ಕ್ಷೇತ್ರಗಳ ಬಗ್ಗೆ ಒಮ್ಮತಾಭಿಪ್ರಾಯಕ್ಕೆ ಬರಲು ಸಾಧ್ಯವಾಗಲಿಲ್ಲ. ಹೀಗಾಗಿಯೇ ಈ ಪಟ್ಟಿಯಲ್ಲಿ ಸುಮಾರು 18-20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಇನ್ನುಳಿಯುವ ಕ್ಷೇತ್ರಗಳಿಗೆ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ದೆಹಲಿಗೆ ತೆರಳಿದ್ದ ರಾಜ್ಯ ನಾಯಕರ ಪೈಕಿ ಯಡಿಯೂರಪ್ಪ, ಮಾಜಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಮಂಗಳವಾರ ಬೆಂಗಲೂರಿಗೆ ವಾಪಾಸಾದರು. ಆದರೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದೆಹಲಿಯಲ್ಲೇ ವಾಸ್ತವ್ಯ ಮುಂದುವರೆಸಿ ಕೊನೆ ಕ್ಷಣದ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ.
ಒಟ್ಟಿನಲ್ಲಿ ಈ ಬಾರಿ ಲೋಕಸಭಾ ಚುನಾವಣೆ ಭಾರೀ ಕುತೂಹಲವನ್ನು ಹುಟ್ಟಿಸಿದ್ದು, ಹೈಕಮಾಂಡ್ ಯಾಋಇಗೆ ಮಣೆ ಹಾಕಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications