Vokkaliga and Congress: ಒಕ್ಕಲಿಗ ಮಠಗಳಿಗೆ ಕಾಂಗ್ರೆಸ್ ನಾಯಕರು ದೌಡು... ಅಂತರಿಕ ಸಮೀಕ್ಷೆಯಲ್ಲಿ ಅಂತದ್ದೇನಿದೆ?
ಬೆಂಗಳೂರು, ಏಪ್ರಿಲ್.06: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಪಕ್ಷಗಳು ಸೋಲು ಗೆಲುವಿನ ಬಗ್ಗೆ ತಮ್ಮಲ್ಲೇ ಆಂತರಿಕ ಸಮೀಕ್ಷೆ ನಡೆಸುತ್ತಿದ್ದಾರೆ. ಇವುಗಳ ಅಧಾರದಲ್ಲಿ ರಾಜಕೀಯ ನಾಯಕರು ತಮ್ಮ ಚುನಾವಣಾ ರಣತಂತ್ರ ಹೆಣೆಯುತ್ತಿದ್ದಾರೆ. ಇತ್ತೀಚೆಗಿನ ಕಾಂಗ್ರೆಸ್ ಆಂತರಿಕ ಸಮೀಕ್ಷೆ ಪಕ್ಷಕ್ಕೆ ದೊಡ್ಡ ಶಾಕ್ ನೀಡಿದೆ.
ಕಾಂಗ್ರೆಸ್ ಅನ್ನು ಸೋಲಿಸಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಗೊತ್ತೆ ಇದೆ. ಈ ಸಮಯದಲ್ಲಿ, 90 ರಷ್ಟು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ತಮ್ಮ ಪಕ್ಷಗಳ ಮೈತ್ರಿಯಿಂದ ಸಂತಸಗೊಂಡಿದ್ದಾರೆ. ಇದು ಹಳೆ ಮೈಸೂರಿನ ಒಕ್ಕಲಿಗ ಭದ್ರಕೋಟೆಯಲ್ಲಿ ಕಾಂಗ್ರೆಸ್ಗೆ ಮಾರಕವಾಗಬಹುದು ಎಂಬ ವಿಚಾರ ಸಮೀಕ್ಷೆಯೊಂದರಲ್ಲಿ ತಿಳಿಸಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ನಾಯಕರು ಒಕ್ಕಲಿಗ ಮಠಗಳತ್ತು ಮುಖ ಮಾಡಿದ್ದು, ಕಾಂಗ್ರೆಸ್ ಪಕ್ಷ ಒಕ್ಕಲಿಗ ಸಮುದಾಯದ ವಿರುದ್ಧವಲ್ಲ ಎಂದು ಸಾಬೀತುಪಡಿಸಲು ಹೊರಟಿದೆ.

ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಪ್ರಾಬಲ್ಯವಿದೆ ಎಂದು ಹೇಳಿಕೊಳ್ಳುತ್ತಲೇ ಇದ್ದಾರೆ. ಆದರೆ, ಒಕ್ಕಲಿಗ ಸಮುದಾಯದ ಮತದಾರರು ಎಲ್ಲಿಗೆ ಹೋಗುವುದು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಇದಕ್ಕಾಗಿಯೇ ಕಾಂಗ್ರೆಸ್ ಅವರನ್ನು ತನ್ನತ್ತ ಸೆಳೆಯಲು ಏನು ಬೇಕಾದರೂ ಮಾಡುತ್ತಿದೆ. ಜೆಡಿಎಸ್ ಕೂಡ ತನ್ನ ಉಳಿವಿಗಾಗಿ ಈ ಕ್ಷೇತ್ರದಲ್ಲಿ ಭರ್ಜರಿ ರಣತಂತ್ರ ಹೆಣೆಯುತ್ತಿದೆ.
ಒಕ್ಕಲಿಗ ಸಮುದಾಯದ ಪರವಾಗಿಯೇ ಕಾಂಗ್ರೆಸ್ ಇದೆ ಎಂಬುದನ್ನು ತಿಳಿಸಲು, ಇತ್ತೀಚೆಗೆ ತಡರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೋಲಾರದ ಕಾಂಗ್ರೆಸ್ ಅಭ್ಯರ್ಥಿ ಕೆ ವಿ ಗೌತಮ್ ಸೇರಿದಂತೆ ಇತರೆ ಅಭ್ಯರ್ಥಿಗಳು ಆದಿ ಚುಂಚನಗಿರಿ ಮಠದ ಮುಖ್ಯಸ್ಥ ನಿರ್ಮಲಾನಂದನಾಥ ಸ್ವಾಮಿಗಳ ಬಳಿ ಆಶೀರ್ವಾದ ಪಡೆದಿದ್ದಾರೆ. ಇತ್ತ, ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಕೂಡ ಆಶೀರ್ವಾದ ಪಡೆದಿದ್ದಾರೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ 30 ರಿಂದ 35 ರಷ್ಟು ಒಕ್ಕಲಿಗರು ತಮ್ಮದೆ ಸಮುದಾಯದ ಎಂ ಲಕ್ಷ್ಮಣ್ ಬಗ್ಗೆ ಒಲವು ತೋರಿದ್ದಾರೆ. ಈ ಕ್ಷೇತ್ರದಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತರು ಕಾಂಗ್ರೆಸ್ಗೆ ಓಟು ನೀಡುವ ಕಾರಣ ಫಲಿತಾಂಶ ಏನು ಬೇಕಾದರೂ ಆಗಬಹುದು ಎನ್ನುತ್ತಾರೆ ಕಾಂಗ್ರೆಸ್ ನಾಯಕರು.

ಒಕ್ಕಲಿಗರು, ಬಂಟ್ಸ್ ಮತ್ತು ರೆಡ್ಡಿ ಸೇರಿದಂತೆ ಸಮುದಾಯದ ನಾಯಕರಿಗೆ ಕಾಂಗ್ರೆಸ್ ಎಂಟು ಟಿಕೆಟ್ ನೀಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಮೂಲಕ ಪಕ್ಷ ಈ ಸಮುದಾಯಗಳ ಪರವಾಗಿದೆ ಎಂಬುದನ್ನು ಒತ್ತಿ ಹೇಳಿದ್ದಾರೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಕಾರಣದಿಂದ ಸಾಕಷ್ಟು ಜನ ಕಾಂಗ್ರೆಸ್ ಕಡೆಗೆ ಒಲವು ತೋರಿಸಿದ್ದಾರೆ. ಮಿದನ್ನು ಬಹಿರಂಗವಾಗಿಯೂ ಹೇಳಿಕೊಂಡಿದ್ದಾರೆ.
ಇದಲ್ಲದೆ ಬಹುತೇಕ ಕ್ಷೇತ್ರಗಳಲ್ಲಿ ಇದೇ ಪರಿಸ್ಥಿತಿ ಇರುವ ಕಾರಣ ಬೆಂಗಳೂರು ದಕ್ಷಿಣ ಅಭ್ಯರ್ಥಿ ಸೌಮ್ಯರೆಡ್ಡಿ, ಬೆಂಗಳೂರು ಉತ್ತರ ಅಭ್ಯರ್ಥಿ ಪ್ರೊ.ರಾಜೇಗೌಡ, ತುಮಕೂರಿನ ಎಸ್ಪಿ ಮುದ್ದಹನುಮೇಗೌಡ ಸೇರಿದಂತೆ ಒಕ್ಕಲಿಗ ಮುಖಂಡರು ಹಾಗೂ ಅಭ್ಯರ್ಥಿಗಳು ಸ್ವಾಮೀಜಿಯವರನ್ನು ಭೇಟಿ ಮಾಡಿದ್ದಾರೆ.
ಇದರ ಜೊತೆಗೆ ಇನ್ನೊಂದು ಗಮನಿಸಬೇಕಾದ ವಿಷಯವೆಂದರೆ, ಮಂಡ್ಯದಿಂದ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ. ಅವರು ಕೂಡ ಹಳೆ ಮೈಸೂರು ಭಾಗದಲ್ಲಿ ಚುನಾವಣೆ ಮೇಲೆ ತೀವ್ರ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ. ಇದಲ್ಲದೇ ಮಂಡ್ಯ ಚುನಾವಣಾ ಫಲಿತಾಂಶದಲ್ಲಿಯೂ ಹೆಚ್ಚುಕಡಿಮೆ ಆಗುವ ಸಂಭವವಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್











Click it and Unblock the Notifications