Sadananda Gowda: ಬಂಡಾಯ ಏಳುವಂತಿರುವ ಡಿ.ವಿ ಸದಾನಂದ ಗೌಡರಿಗೆ ಡಿಕೆ ಶಿವಕುಮಾರ್ ಗಾಳ!
ಬೆಂಗಳೂರು, ಮಾರ್ಚ್ 18: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ ಸಂಕಷ್ಟಕ್ಕೆ ಸಿಲುಕಿದೆ. ತಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ. ತಮ್ಮ ಮನೆಗೆ ಅನ್ಯಾಯವಾಗಿದೆ.. ಹೀಗೆ ಹಲವು ಕಾರಣಗಳನ್ನಿಟ್ಟುಕೊಂಡು ಬಿಜೆಪಿಯ ಪ್ರಮುಖ ನಾಯಕರು ಒಳಗೊಳಗೆ ಕೆಂಡಕಾರುತ್ತಿದ್ದಾರೆ. ಆದರೆ, ಕೆಎಸ್ ಈಶ್ವರಪ್ಪ ಮಾತ್ರ ಬಹಿರಂಗವಾಗಿ ಬಂಡಾಯ ನಿಂತಿದ್ದಾರೆ.
ಈ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರಿಗೆ ಟಿಕೆಟ್ ಮಿಸ್ ಆಗಿದ್ದು, ಬಂಡಾಯ ಏಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಅದೇ ಕಾರಣಕ್ಕೆ ಅವರನ್ನು ತಮ್ಮತ್ತ ಸೆಳೆಯಲು ಕಾಂಗ್ರೆಸ್ ಕೂಡ ಪ್ರಯತ್ನ ಪಡುತ್ತಿದೆ. ಒಕ್ಕಲಿಗ ನಾಯಕರಾಗಿರುವ ಅವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಫರ್ ನೀಡಿದ್ದಾರೆ.

ಮಾಜಿ ಸಿಎಂಗೆ ಹಾಲಿ ಡಿಸಿಎಂ ಗಾಳ!
ಉತ್ತರ ಭಾರತದಲ್ಲಿ ಟಿಕೆಟ್ ಹಂಚಿಕೆ ಮಾಡಿದಂತೆಯೇ ರಾಜ್ಯದಲ್ಲಿಯೂ ಕೂಡ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ 28 ಸ್ಥಾನಗಳನ್ನು ಗೆಲ್ಲಲೇಬೇಕೆಂದು ಮಾಸ್ಟರ್ ಪ್ಲ್ಯಾನ್ ಮಾಡಿ ಟಿಕೆಟ್ ಹಂಚಿಕೆ ಮಾಡಲಾಗಿದೆ. ಆದರೆ, ಇದು ಕರ್ನಾಟಕದಲ್ಲಿ ವರ್ಕ್ ಆದ ಹಾಗೆ ಕಾಣಿಸುತ್ತಿಲ್ಲ. ಹಲವು ನಾಯಕರು ಟಿಕೆಟ್ ಹಂಚಿಕೆ ಬಗ್ಗೆ ನೇರವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಈ ಬಾರಿ ಟಿಕೆಟ್ ಮಿಸ್ ಆಗಿದೆ. ಅದೇ ಜಾಗದಲ್ಲಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರನ್ನು ನಿಲ್ಲಿಸಲಾಗಿದೆ. ಮೊದಲು ರಾಜಕೀಯದಿಂದ ದೂರ ಇರುತ್ತೇನೆ ಎಂದಿದ್ದ ಸದಾನಂದ ಗೌಡರು ಬಳಿಕ ನಾನು ಟಿಕೆಟ್ ಆಕಾಂಕ್ಷಿ ಎಂದು ಬಾಂಬ್ ಹಾಕಿದ್ದರು. ಆದರೂ ಟಿಕೆಟ್ ಕೊಟ್ಟಿಲ್ಲ. ಟಿಕೆಟ್ ಕೈತಪ್ಪಿರುವುದರಿಂದ ಅಸಮಾಧಾನಗೊಂಡಿದ್ದಾರೆ. ಅವರಿಗೆ ಡಿಕೆ ಶಿವಕುಮಾರ್ ಆಫರ್ ನೀಡಿದ್ದಾರೆ.

ಟಿಕೆಟ್ ಹಂಚಿಕೆ ಬಳಿಕ ಸ್ವಪಕ್ಷದ ಮೇಲೆ ಲಿಂಗಾಯತ, ಕುರುಬ ಸಮುದಾಯ ಬಂಡಾಯವೆದ್ದಿದೆ. ಈಗ ಡಿವಿ ಸದಾನಂದಗೌಡರು ಕೂಡ ಬಂಡಾಯವೆದ್ದರೆ ರಾಜ್ಯದ ಪ್ರಮುಖ ಸಮುದಾಯವೊಂದರ ಬಂಡಾಯವನ್ನು ಬಿಜೆಪಿ ಎದುರಿಸಬೇಕಿದೆ. ಇದನ್ನೇ ಎನ್ಕ್ಯಾಚ್ ಮಾಡಿಕೊಳ್ಳಲು ಕಾಂಗ್ರೆಸ್ ಮುಂದಾಗಿದ್ದು, ಸದಾನಂದ ಗೌಡರನ್ನು ಪಕ್ಷಕ್ಕೆ ಎಳೆದು ತರುವ ಕೆಲಸ ತೆರೆಮರೆಯಲ್ಲಿ ನಡೆಯುತ್ತಿದೆ.
ಡಿ.ವಿ ಸದಾನಂದ ಗೌಡ ಅವರು ಕಾಂಗ್ರೆಸ್ನಿಂದ ಸ್ಪರ್ಧಿಸಿದರೆ ಒಕ್ಕಲಿಗ ಮತಗಳನ್ನು ಪಕ್ಷಕ್ಕೆ ಸೆಳೆಯಬಹುದು ಎಂಬುದು ಡಿಕೆ ಶಿವಕುಮಾರ್ ಲೆಕ್ಕಾಚಾರ. ಟಿಕೆಟ್ ಘೋಷಿಸದ ಬೆಂಗಳೂರು ಉತ್ತರ, ಮೈಸೂರು, ದಕ್ಷಿಣ ಕನ್ನಡ ಈ ಮೂರರಲ್ಲಿ ಯಾವುದಾರು ಕ್ಷೇತ್ರದಿಂದ ಡಿ.ವಿ ಸದಾನಂದ ಗೌಡ ಅವರನ್ನು ಕಣಕ್ಕಿಳಿಸುವ ಯೋಚನೆಯಲ್ಲಿದೆ ಕಾಂಗ್ರೆಸ್. ಈ ಬಗ್ಗೆ ಅವರಿಗೆ ಆಫರ್ ನೀಡಲಾಗಿದೆ. ಹೀಗಾಗಿ ಇಷ್ಟು ವರ್ಷ ಎಲ್ಲವನ್ನೂ ಕೊಟ್ಟಿರುವ ಪಕ್ಷವನ್ನು ಬಿಟ್ಟು ಡಿ.ವಿ ಸದಾನಂದ ಗೌಡ ಕೈ ಹಿಡಿತಾರಾ ಎಂಬುದನ್ನು ಕಾದುನೋಡಬೇಕಿದೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ











Click it and Unblock the Notifications