Dingaleshwar Swamiji: ಕೋಟಿ ಒಡೆಯ ದಿಂಗಾಲೇಶ್ವರ ಸ್ವಾಮೀಜಿಯ ಆಸ್ತಿ ವಿವರ ತಿಳಿಯಿರಿ
ಬೆಂಗಳೂರು, ಏಪ್ರಿಲ್ 18: ಗದಗ ಜಿಲ್ಲೆಯ ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಗುರುವಾರ ನಾಮಪತ್ರ ಸಲ್ಲಿಸಿರುವ ದಿಂಗಾಲೇಶ್ವರ ಸ್ವಾಮೀಜಿ 9.74 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ.
ದಿಂಗಾಲೇಶ್ವರ ಸ್ವಾಮೀಜಿ ಆಸ್ತಿಯಲ್ಲಿ 1.22 ಕೋಟಿ ರೂ. ಚರಾಸ್ತಿಯಾಗಿದ್ದರೆ, 8.52 ಕೋಟಿ ರೂ. ಸ್ಥಿರಾಸ್ತಿಯನ್ನು ಘೋಷಿಸಿದ್ದಾರೆ. ವಿವಿಧ ಕಡೆ 39.68 ಲಕ್ಷ ರೂ. ಸಾಲವನ್ನು ದಿಂಗಾಲೇಶ್ವರ ಸ್ವಾಮೀಜಿ ಹೊಂದಿದ್ದು, ಮೂರು ಪ್ರಕರಣಗಳು ಸ್ವಾಮೀಜಿ ಮೇಲೆ ಇವೆ.

ನಾಮಪತ್ರ ಅಫಿಡವಿಟ್ನಲ್ಲಿ ತಿಳಿಸಿರುವಂತೆ ದಿಂಗಾಲೇಶ್ವರ ಸ್ವಾಮೀಜಿ ಕೈಯಲ್ಲಿ ಸದ್ಯ 1 ಲಕ್ಷದ 25 ಸಾವಿರ ರೂ. ನಗದು ಇದೆ. ವಿವಿಧ ಬ್ಯಾಂಕ್ ಖಾತೆಗಳಲ್ಲಿ 11 ಲಕ್ಷಕ್ಕೂ ಅಧಿಕ ಹಣ ಇದೆ. ಸುಮಾರು 4.75 ಲಕ್ಷ ರೂ. ಮೌಲ್ಯದ ಶೇರುಗಳು ಹಾಗೂ ಬಾಂಡ್ಗಳನ್ನು ವಿವಿಧ ಸಹಕಾರಿ ಬ್ಯಾಂಕ್ಗಳಲ್ಲಿ ಹೊಂದಿದ್ದಾರೆ.
ಅಫಿಡವಿಟ್ನಲ್ಲಿ ಘೋಷಿಸಿರುವಂತೆ ಸ್ವಾಮೀಜಿ ಅವರು ಎರಡು ಟೊಯೊಟೊ ಇನೋವಾ ಕಾರು, ಒಂದು ಟ್ರಾಕ್ಟರ್ ಹಾಗೂ ಒಂದು ಬಸ್ ಅನ್ನು ಹೊಂದಿದ್ದಾರೆ. ಜೊತೆಗೆ 4.35 ಲಕ್ಷ ರೂ. ಮೌಲ್ಯದ 7 ಕೆಜಿ 820 ಗ್ರಾಂ ಬೆಳ್ಳಿ ಹೊಂದಿದ್ದು, 1,17 ಲಕ್ಷ ರೂ. ಮೌಲ್ಯದ 18.9 ಗ್ರಾಂ ಚಿನ್ನವನ್ನು ಹೊಂದಿದ್ದಾರೆ. ಈ ಮೂಲಕ ಒಟ್ಟು 1.22 ಕೋಟಿ ರೂ. ಚರಾಸ್ತಿಯನ್ನು ದಿಂಗಾಲೇಶ್ವರ ಸ್ವಾಮೀಜಿ ಘೋಷಿಸಿಕೊಂಡಿದ್ದಾರೆ.
ಸ್ಥಿರಾಸ್ತಿಯನ್ನು ಗಮನಿಸಿದರೆ, 23 ಎಕರೆ 17 ಗುಂಟೆ ಕೃಷಿ ಭೂಮಿಯನ್ನು ಹೊಂದಿದ್ದು, 19 ಕಡೆ ಕೃಷಿಯೇತರ ಭೂಮಿ ಹೊಂದಿದ್ದಾರೆ. ಜೊತೆಗೆ ಶಾಲಾ ಕಟ್ಟಡ ಕೂಡ ಇದ್ದು, ಒಟ್ಟು, 8.52 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಹೊಂದಿದ್ದಾರೆ.
ದಿಂಗಾಲೇಶ್ವರ ಸ್ವಾಮೀಜಿ 39.68 ಲಕ್ಷ ರೂ. ಸಾಲವನ್ನು ಹೊಂದಿದ್ದಾರೆ. ಅದರ ಜೊತೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಮೂರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಮೂರು ಕೂಡ ಜಾತಿ ನಿಂದನೆ ಹಾಗೂ ಹಲ್ಲೆ ನಡೆಸಿರುವುದಕ್ಕೆ ಸಂಬಂಧಿಸಿದ್ದು ಎಂದು ನಾಮಪತ್ರ ಸಲ್ಲಿಕೆಯಲ್ಲಿ ತಿಳಿಸಲಾಗಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications