‘ದೇಶ ಸುರಕ್ಷಿತವಾಗಿರಲು ನರೇಂದ್ರ ಮೋದಿ ಅವರೇ ಪ್ರಧಾನಿ ಆಗಬೇಕು!’
ಹೊಸಕೋಟೆ: ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಬರ ಗ್ಯಾರಂಟಿಯನ್ನ, ಭಯೋತ್ಪಾದನೆ ಗ್ಯಾರಂಟಿ, ರೈತರ ಆತ್ಮಹತ್ಯೆ ಗ್ಯಾರಂಟಿಗಳನ್ನ ನೀಡಿದೆ. ಹೀಗಾಗಿ ಇಡೀ ರಾಜ್ಯ & ದೇಶ ಸುರಕ್ಷಿತವಾಗಿ ಇರಲು ನರೇಂದ್ರ ಮೋದಿ ಅವರನ್ನ ಮತ್ತೆ ಪ್ರಧಾನಿಯಾಗಿಸಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಕೆ. ಸುಧಾಕರ್, ಕಾಂಗ್ರೆಸ್ ನಾಯಕರು ಚುನಾವಣಾ ಗಿಮಿಕ್ ಮಾಡುವಲ್ಲಿ ನಿಸ್ಸೀಮರು. ಸೋಲು ಸ್ಪಷ್ಟವಾಗಿ ಕಾಣುತ್ತಿರುವ ಹಿನ್ನೆಲೆ, ಅಪಪ್ರಚಾರ ಮಾಡುತ್ತಿದ್ದಾರೆ. ಹೇಳಲು ಯಾವುದೇ ಸಾಧನೆ ಇಲ್ಲದೆ ಇದ್ದಾಗ ಚಾರಿತ್ರ್ಯ ವಧೆ, ತೇಜೋವಧೆ ಮಾಡುತ್ತಿದ್ದಾರೆ. ಮತದಾರ ಬಂಧುಗಳು ಇವ್ಯಾವುದಕ್ಕೂ ಕಿವಿಗೊಡಬೇಡಿ ಎಂದು ಡಾ. ಕೆ. ಸುಧಾಕರ್ ಅವರು ಇದೇ ವೇಳೆ ಮನವಿ ಮಾಡಿದರು.

ಹುಬ್ಬಳ್ಳಿ ನೇಹಾ ಘಟನೆ ಪ್ರಸ್ತಾಪ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬರ ಗ್ಯಾರಂಟಿ, ರೈತರ ಆತ್ಮಹತ್ಯೆ ಗ್ಯಾರಂಟಿ, ಭಯೋತ್ಪಾದನೆ ಗ್ಯಾರಂಟಿ, ಖಜಾನೆ ಖಾಲಿ ಗ್ಯಾರಂಟಿ, ಕೋಮುವಾದ ಗ್ಯಾರಂಟಿಗಳೇ ಸಿಗುತ್ತಿದೆ ಎಂದು ಇದೇ ವೇಳೆ ವಾಗ್ದಾಳಿ ನಡೆಸಿದರು ಡಾ. ಕೆ. ಸುಧಾಕರ್. ಹಾಗೇ, ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆಗೆ ಲವ್ ಜಿಹಾದ್ ಕಾರಣ ಎಂದು ಅವರ ತಂದೆಯೇ ಹೇಳಿದ್ದಾರೆ. ಆದರೆ ಕಾಂಗ್ರೆಸ್ ನಾಯಕರಿಗೆ ಮಾತ್ರ, ತುಷ್ಟೀಕರಣ ರಾಜಕಾರಣದಿಂದ ಮತ ಪಡೆಯುವುದು ಮಾತ್ರ ಮುಖ್ಯ. ಸಮ ಸಮಾಜ ನಿರ್ಮಾಣ ಅವರಿಗೆ ಮುಖ್ಯವಲ್ಲ. ಸಿಬಿಐಗೆ ಪ್ರಕರಣ ವಹಿಸಿ ಎಂದರೂ ಸಿಐಡಿಗೆ ವಹಿಸಿದ್ದು, ಇದರಿಂದ ನ್ಯಾಯ ಸಿಗುವುದೇ ಇಲ್ಲ ಎಂದು ಇದೇ ವೇಳೆ ಡಾ. ಕೆ. ಸುಧಾಕರ್ ಅವರು ಆರೋಪ ಮಾಡಿದರು.
ಭಯೋತ್ಪಾದನೆ ನಿಯಂತ್ರಣಕ್ಕೆ ಬಂದಿದೆ
ಮೋದಿ ಸರ್ಕಾರದಿಂದ ದೇಶದಲ್ಲಿ ಭಯೋತ್ಪಾದನೆ ನಿಯಂತ್ರಣಕ್ಕೆ ಬಂದಿದೆ. ಆದರೆ, ಕಾಂಗ್ರೆಸ್ ಸರ್ಕಾರದಿಂದ ಭಯೋತ್ಪಾದನೆ ಹೆಚ್ಚಿದೆ ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಲಾಗಿದೆ ನಕ್ಸಲ್ ಹಾವಳಿ ಶುರುವಾಗಿದೆ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು, ಕರ್ನಾಟಕಕ್ಕೆ 7 ಲಕ್ಷ ಕೋಟಿ ರೂಪಾಯಿಗೂ ಅಧಿಕ ಅನುದಾನ ನೀಡಿದ್ದಾರೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಜನರನ್ನು ಭಾವನಾತ್ಮಕವಾಗಿ ಸೆಳೆಯಲು ಕಾಂಗ್ರೆಸ್ ತೆರಿಗೆ ಅನ್ಯಾಯ ಎಂಬ ನಾಟಕ ಮಾಡುತ್ತಿದೆ ಎಂದು ಡಾ.ಕೆ.ಸುಧಾಕರ್ ದೂರಿದ್ದಾರೆ.
ಖಾಲಿ ಚೊಂಬು ಎಂದು ಹೇಳುವ ಕಾಂಗ್ರೆಸ್ ನ ಸರ್ಕಾರ ಗ್ಯಾರಂಟಿಗಳಿಂದಾಗಿ ಅನುದಾನವಿಲ್ಲದೆ ಖಾಲಿ ಚೊಂಬನ್ನೇ ಜನರಿಗೆ ನೀಡಿದೆ. ಒಂದೇ ಒಂದು ಅಭಿವೃದ್ಧಿ ಕೆಲಸ ರಾಜ್ಯದಲ್ಲಿ ನಡೆದಿಲ್ಲ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅನೇಕ ಪ್ರದೇಶ ಹಿಂದುಳಿದಿದ್ದು, ಇಲ್ಲಿನ ಅಭಿವೃದ್ಧಿಗೂ ಏನೂ ಮಾಡಿಲ್ಲ. ಆದ್ರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಳೆದ 10 ವರ್ಷಗಳಲ್ಲಿ 7 ಲಕ್ಷ ಕೋಟಿ ರೂ. ಅನುದಾನ ನೀಡಿದೆ. ಈ ಮೂಲಕ ಕಾಂಗ್ರೆಸ್ ಜನರಿಗೆ ನೀಡಿದ್ದ ಚೊಂಬನ್ನ ಅಕ್ಷಯ ಪಾತ್ರೆಯಾಗಿ ಪರಿವರ್ತನೆ ಮಾಡಿದೆ ಎಂದು, ಡಾ. ಕೆ. ಸುಧಾಕರ್ ಅವರು ಈ ವೇಳೆ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.
ವೋಟ್ ಮಾಡುವಂತೆ ಮನವಿ
ಮತದಾರರು ಮತದಾನ ಮಾಡುವುದನ್ನು ಕರ್ತವ್ಯ ಎಂದು ಪರಿಗಣಿಸಬೇಕು. ನಗರಗಳ ಜನರು ಸುಶಿಕ್ಷಿತರಾಗಿದ್ದು ರಜೆಯಲ್ಲಿ ಎಲ್ಲಿಗೂ ಪ್ರವಾಸ ಹೋಗದೆ ಕಡ್ಡಾಯವಾಗಿ ವೋಟ್ ಮಾಡಬೇಕು ಎಂದು ಇದೇ ವೇಳೆ ಮನವಿ ಮಾಡಿದರು. ದೇಶದ ಸುರಕ್ಷತೆಗೆ, ವಿಕಸಿತ ಭಾರತಕ್ಕಾಗಿ, ನರೇಂದ್ರ ಮೋದಿ ಅವರನ್ನು ಗೆಲ್ಲಿಸಬೇಕು ಎಂದು ಡಾ.ಕೆ.ಸುಧಾಕರ್ ಅವರು ಮನವಿ ಮಾಡಿದರು. ಈ ಸಮಯದಲ್ಲಿ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು ಸೇರಿದಂತೆ ಹಲವು ಮುಖಂಡರುಗಳು ಉಪಸ್ಥಿತರಿದ್ದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications