ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಧಾನದ ಬಗ್ಗೆ ಮಹತ್ವ ಮಾಹಿತಿ ಕೊಟ್ಟ ಆರ್.ಅಶೋಕ್

ಬೆಂಗಳೂರು, ಜನವರಿ 18: ಕರ್ನಾಟಕ ಬಿಜೆಪಿಯು 2023ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿಯು ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ. ಆಡಳಿತಾರೂಢ ಕಾಂಗ್ರೆಸ್‌ಗೆ ಟಕ್ಕರ್ ಕೊಡುವ ನೀಟ್ಟಿನಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಆಗಿದ್ದು, ಕಾಂಗ್ರೆಸ್‌ ನಾಯಕರಿಗೆ ಸೋಲಿನ ರುಚಿ ತೋರಿಸಲು, ರಾಜಕೀಯ ರಣತಂತ್ರ ರೂಪಿಸಿದೆ.

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಕುರಿತು ಗುರುವಾರ ಸುದ್ದಿಗಾರ ಜೊತೆ ಮಾನತಾಡಿರುವ ವಿಪಕ್ಷ ನಾಯಕ ಆರ್. ಅಶೋಕ್ ಅವರು, ರಾಜ್ಯದಲ್ಲಿ ನಡೆಸುವ ಸಮೀಕ್ಷೆಗಳನ್ನು ಪರಿಗಣಿಸಲಾಗುವುದು. ಅಲ್ಲದೇ ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯಗಳನ್ನು ಪಡೆಯಲಾಗುವುದು. ಇದೆಲ್ಲವನ್ನು ಕೇಂದ್ರದ ವರಿಷ್ಠರ ಗಮನಕ್ಕೆ ತಂದು ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Lok Sabha Election 2024: How to Choose Candidates for Lok Poll, R Ashok What is Said

ಬಿಜೆಪಿಗೆ ಈ ಭಾರಿ 400ಕ್ಕೂ ಹೆಚ್ಚು ಸ್ಥಾನ: ವಿಶ್ವಾಸ

ಲೋಕಸಭೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಲು ವ್ಯವಸ್ಥಿತವಾದ ಸಿದ್ಧತೆ ಮಾಡಿಕೊಳ್ಳಲಾಗಿದೆ. ದಿಕ್ಕು ದೆಸೆ ಇಲ್ಲದೆ ನಾಯಕನಿಲ್ಲದ ಕಾಂಗ್ರೆಸ್‌ ಪಕ್ಷಕ್ಕೆ ಯಾವುದೇ ಅಜೆಂಡಾ ಇಲ್ಲ. ಬಿಹಾರ, ತಮಿಳುನಾಡಿನಲ್ಲಿ ಹಿಂದೂಗಳನ್ನು ನಿಂದಿಸಲಾಗುತ್ತಿದೆ. ರಾಮ ಮಂದಿರದ ಬಗ್ಗೆ ಕೀಳಾಗಿ ಮಾತನಾಡಲಾಗುತ್ತಿದೆ ಎಂದು ಬಿಜೆಪಿ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದರು.

ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗುವುದನ್ನು ತಪ್ಪಿಸಲು ಕಾಂಗ್ರೆಸ್‌ಗೆ ಸಾಧ್ಯವಿಲ್ಲ. ಜೆಡಿಎಸ್‌ ಕೂಡ ಬಿಜೆಪಿ ಜೊತೆ ಸೇರಿರುವುದರಿಂದ ಹಾಲು ಜೇನು ಬೆರೆತಂತಾಗಿದೆ. ಅಯೋಧ್ಯೆಯಲ್ಲಿ ಗೊಂಬೆ ಇತ್ತು ಎಂದು ರಾಜ್ಯದ ಸಚಿವರು ಟೀಕೆ ಮಾಡುತ್ತಾರೆ. ಹಿರಣ್ಯಕಶಿಪು ಕೂಡ ದೇವರಿದ್ದಾನೆಯೇ ಎಂದು ಪ್ರಶ್ನೆ ಮಾಡಿ ನಂತರ ಕಂಬದಿಂದಲೇ ದೇವರು ಹೊರ ಬಂದಿದ್ದ.

Lok Sabha Election 2024: How to Choose Candidates for Lok Poll, R Ashok What is Said

ಹಿಂದೂಗಳ ದಮಕ್ಕೆ ಕಾಂಗ್ರೆಸ್ ಯತ್ನ?

ಜವಾಹಲ್‌ ಲಾಲ್ ನೆಹರು ಕಾಲದಿಂದಲೂ ಕಾಂಗ್ರೆಸ್‌ ಹಿಂದೂಗಳನ್ನು ದಮನ ಮಾಡಲು ಯತ್ನಿಸುತ್ತಿದೆ. ಕರಸೇವಕರನ್ನು ಬಂಧಿಸಿರುವುದನ್ನು ವಿರೋಧಿಸಿದರೆ ನನ್ನ ಮೇಲೆಯೇ ಪ್ರಕರಣ ದಾಖಲಿಸಿದ್ದಾರೆ. ಇವರಿಗೆ ಜನ್ಮದಲ್ಲಿ ಬುದ್ಧಿ ಬರುವುದಿಲ್ಲ ಎಂದು ಹೇಳಿದರು.

ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ಮೋದಿ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ. ಅವರು ಮತ್ತೆ ಪ್ರಧಾನಿ ಆಗಬೇಕೆಂದು ದೇವೇಗೌಡರು ಬಯಸಿದ್ದಾರೆ. ಜೆಡಿಎಸ್‌ಗೆ ಎಲ್ಲೇ ಸೀಟು ಕೊಟ್ಟರೂ ಅವೆಲ್ಲವನ್ನೂ ಗೆಲ್ಲಿಸುವ ಹೊಣೆಯನ್ನು ಬಿಜೆಪಿ ಹೊರಲಿದೆ. ಅದೇ ರೀತಿ ಜೆಡಿಎಸ್ ಕೂಡ ಜವಾಬ್ದಾರಿ ಹೊರಲಿದೆ.

ಜೆಡಿಎಸ್‌ ಹಾಗೂ ಬಿಜೆಪಿ ಮನಸ್ಸುಗಳು ಒಂದಾಗಿದೆ. ಹಿಂದೆ ಕಾಂಗ್ರೆಸ್‌ನವರು ಜೆಡಿಎಸ್‌ಗೆ ವಂಚಿಸಿದ್ದರು. ಬಿಜೆಪಿಯಿಂದ ಎರಡು ಸಮೀಕ್ಷೆ ಮಾಡಿದ್ದು, ಇದು ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿಗಳನ್ನು ಆರಿಸಲಾಗುತ್ತದೆ. ಆದಷ್ಟು ಬೇಗ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಿದರು.

ಆದಿಚುಂಚನಗಿರಿ ಮಠ: ಪುಣ್ಯಸ್ಮರಣೆ ಕಾರ್ಯಕ್ರಮ

ಆದಿಚುಂಚನಗಿರಿ ಮಠದಲ್ಲಿ ಪೂಜ್ಯ ಶ್ರೀ ಬಾಲಗಂಗಾಧರನಾಥ ಸ್ವಾಮಿಗಳ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರ್.ಅಶೋಕ, ಬಾಲಗಂಗಾಧರನಾಥ ಸ್ವಾಮಿಗಳು ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಅಕ್ಷರ ನೀಡಿ ಜೀವನ ಕೊಟ್ಟಿದ್ದರು. ಅವರಿಂದ ಶಿಕ್ಷಣ ಪಡೆದ ಅನೇಕರು ಇಂದು ದೇಶ ವಿದೇಶಗಳಲ್ಲಿ ದೊಡ್ಡ ಹುದ್ದೆ ಪಡೆದು ಉತ್ತಮ ಜೀವನ ನಡೆಸುತ್ತಿದ್ದಾರೆ. ಒಕ್ಕಲಿಗ ಸಮುದಾಯಕ್ಕೂ ಅವರು ಮಾರ್ಗದರ್ಶನ ನೀಡಿದ್ದರು ಎಂದರು.

ಈ ವೇಳೆ ಶ್ರೀಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+