Lok Sabha Election: 'ವ್ಯಂಗ್ಯಚಿತ್ರ ಪ್ರದರ್ಶನ-ಕಾರ್ಯಾಗಾರ', ಆಸಕ್ತರು ದಿನಾಂಕ, ಷರತ್ತು ಗಮನಿಸಿ
ಬೆಂಗಳೂರು, ಜನವರಿ 18: ಲೋಕಸಭಾ ಚುಣಾವಣೆ 2024 ಕ್ಕೆ ಎಲ್ಲ ಪಕ್ಷಗಳು ತಯಾರಿ ನಡೆಸುತ್ತಿವೆ. ಇದರ ಪ್ರಕ್ರಿಯೆಯಲ್ಲಿ ತೊಡಗಿರುವ ಚುನಾವಣೆ ಆಯೋಗವು ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿವೆ. ಇದರ ಭಾಗವಾಗಿ ಬೆಂಗಳೂರಿನ ವಿಧಾನಸೌಧದ ಮುಂದೆ 'ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರ' ಹಮ್ಮಿಕೊಂಡಿದೆ.
ಹೌದು, ಲೋಕಸಭಾ ಚುನಾವಣೆ ಸಂಬಂಧ ಇತ್ತೀಚೆಗೆ ವ್ಯಂಗ್ಯ ಚಿತ್ರರಚನೆಗೆ ಅವಕಾಶ ನೀಡಿದೆ. ಈ ಕಾರ್ಯಕ್ರಮದಲ್ಲಿ ವೃತ್ತಿಪರ ಮತ್ತು ಹವ್ಯಾಸಿ ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು, ಕಲಾ ವಿದ್ಯಾರ್ಥಿಗಳು ಈ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ.

'ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರ'ವು ಇದೇ ಜನವರಿ 21ರಂದು ಬೆಂಗಳೂರಿನಲ್ಲಿ ಬೆಳಗ್ಗೆ 9 ಗಂಟೆಗೆ ಆರಂಭಗೊಳ್ಳಲಿದೆ. ಮುಂಬರುವ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಈ ಕಾರ್ಯಕ್ರಮ ಹಮ್ಮಿಕೊಂಡಿದೆ.
ಪ್ರಚಾರಕ್ಕೆ 25 ಚಿತ್ರ ಬಳಕೆ: ಆಯೋಗ
ಚುನಾವಣೆ, ಮತದಾನದ ಮಹತ್ವ ಸಾರುವ, ಮತದಾನ ಪ್ರಕ್ರಿಯೆಯಲ್ಲಿ ನಾಗರಿಕರು ಭಾಗವಹಿಸುವುದನ್ನು ಪ್ರೋತ್ಸಾಹಿಸುವಂತಹ ವ್ಯಂಗ್ಯಚಿತ್ರಗಳನ್ನು ರಚಿಸಬೇಕು. ಆಯ್ಕೆಯಾದ 100 ವ್ಯಂಗ್ಯಚಿತ್ರಗಳನ್ನು ಜ.21ರಂದು ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅತ್ಯುತ್ತಮ 25 ಚಿತ್ರಗಳನ್ನು ಮತದಾನ ಜಾಗೃತಿ, ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ ಹಾಗೂ ಆ ವ್ಯಂಗ್ಯಚಿತ್ರಗಳಿಗೆ ಗೌರವಧನವನ್ನು ಸಹ ನೀಡಲಾಗುತ್ತದೆ.
ಷರತ್ತು ಹಾಗು ನಿಬಂಧನೆಗಳು
* ಚಿತ್ರಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಪ್ರಚಾರ ಮತ್ತು ವ್ಯಂಗ್ಯ ಇರಬಾರದು
* ಚಿತ್ರಗಳು ಹೊಸದಾಗಿದ್ದು, ಈ ಹಿಂದೆ ಯಾವುದೇ ಪ್ರಚಾರದಲ್ಲಿ ಬಳಸಿಕೊಂಡಿರಬಾರದು.
* ಚಿತ್ರಗಳು ಸ್ವಂತ ರಚನೆಯಲ್ಲಿರಬೇಕು. (ಗ್ರಾಫಿಕ್ಸ್, ಕುಂಚ, ಪೆನ್ಸಿಲ್, ಪೆನ್ ಇತ್ಯಾದಿ) ಚಿತ್ರಗಳನ್ನು 1800X2400 ಅಳೆತೆಯ ಡಿಜಿಟಲ್ ಆವೃತ್ತಿಯಲ್ಲಿ ಸಲ್ಲಿಸಬೇಕು.
* ಆಯ್ಕೆಯಾದ ಚಿತ್ರಗಳ ಅಸಲಿ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಆಯ್ಕೆಯಾದ ಮೊದಲ 25 ಚಿತ್ರಗಳಿಗೆ ಗೌರವಧನ ನೀಡಲಾಗುವುದು.
* ಚಿತ್ರಗಳನ್ನು [email protected] ವಿಳಾಸಕ್ಕೆ ಕಳುಹಿಸ ಬೇಕು ಹಾಗೂ ಇಮೇಲ್ನಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ಮೋಬೈಲ್ ಸಂಖ್ಯೆಯನ್ನು ತಪ್ಪದೇ ನಮೂದಿಸಿರಬೇಕು.
* ಚಿತ್ರಗಳನ್ನು ಕಳುಹಿಸಲು ಕೊನೆಯ ದಿನಾಂಕ 19-01-2024 ಸಂಜೆ 5:00 ಗಂಟೆಯ ಒಳಗಾಗಿ
* ಚಿತ್ರಗಳನ್ನು ಆಯ್ಕೆ ಮಾಡುವ ಹಾಗೂ ತಿರಸ್ಕರಿಸುವ ಅಧಿಕಾರ ಮುಖ್ಯ ಚುನಾವಣಾಧಿಕಾರಿ ಕರ್ನಾಟಕ, ಇವರಿಗೆ ಇರುತ್ತದೆ.
* ಸ್ಥಳದಲ್ಲೇ ಚಿತ್ರ ರಚನೆ ಮಾಡುವ ಕಲಾವಿದರು ದಿನಾಂಕ 21-01-2024 ರಂದು ಬೆಳಗ್ಗೆ 9:00 ಗಂಟೆಗೆ ಹಾಜರಿರಬೇಕು.
ಪಾಲ್ಗೊಳ್ಳಲು ಬಯಸುವವರು ಹೆಚ್ಚಿನ ಮಾಹಿತಿಗೆ 'ಮಾಧ್ಯಮ ಘಟಕ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಶೇಷಾದ್ರಿ ರಸ್ತೆ, ಬೆಂಗಳೂರು' ಇಲ್ಲಿಗೆ ಭೇಟಿ ನೀಡಬೇಕು. ಇಲ್ಲವೇ ದೂರವಾಣಿ 9480841211 ಸಂಖ್ಯೆ ಕರೆ ಮಾಡಬಹುದು ಎಂದು ಕರ್ನಾಟಕ ರಾಜ್ಯ ಚುನಾವಣೆ ಆಯೋಗ ತಿಳಿಸಿದೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications