Grama Panchayat; ಲೋಕಸಭೆ ಚುನಾವಣೆ, ಪಿಡಿಒಗಳ ಮಹತ್ವದ ಬೇಡಿಕೆ
ಬೆಂಗಳೂರು, ಫೆಬ್ರವರಿ 18; ಲೋಕಸಭಾ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಳ್ಳುವ ಸಿಬ್ಬಂದಿಗಳ ಪಟ್ಟಿ ಮಾಡಿ, ತರಬೇತಿಯನ್ನು ಆರಂಭಿಸಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಿಂದ ರಾಜ್ಯಮಟ್ಟದ ತನಕ ವಿವಿಧ ಸಿಬ್ಬಂದಿ ಚುನಾವಣಾ ಕಾರ್ಯದಲ್ಲಿ ತೊಡಗಲಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಮಾರ್ಚ್ ಮೊದಲ ವಾರದಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ. ಚುನಾವಣಾ ಅಧಿಕಾರಿ/ ಸಿಬ್ಬಂದಿಗಳು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ತವ್ಯ ನಿರ್ವಹಿಸಬೇಕಿದೆ.

ಚುನಾವಣೆ ಹಿನ್ನಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳು ಚುನಾವಣಾ ಆಯೋಗದ ಮುಂದೆ ಬೇಡಿಕೆಯೊಂದನ್ನು ಇಟ್ಟಿದ್ದಾರೆ. ಚುನಾವಣಾ ಹಿನ್ನೆಲೆಯಲ್ಲಿ ಸ್ಥಾಪನೆ ಮಾಡುವ ಚೆಕ್ ಪೋಸ್ಟ್ಗಳಿಗೆ ಪಿಡಿಒಗಳ ಬದಲು ಬೇರೆ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂದು ಮನವಿ ಮಾಡಲಾಗಿದೆ.
ಈ ಕುರಿತು ಪಂಚಾಯತ್ ರಾಜ್ ಇಲಾಖೆ ಸಹ ಆಯೋಗಕ್ಕೆ ಕೋರಿದೆ. ಪಿಡಿಒಗಳು ಚುನಾವಣೆ ಸಮಯದಲ್ಲಿ ಮತಗಟ್ಟೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ, ಸ್ವೀಪ್ ಕಾರ್ಯಕ್ರಮ ನೋಡಿಕೊಳ್ಳುತ್ತಾರೆ. ಗ್ರಾಮ ಪಂಚಾಯಿತಿಯ ಎಲ್ಲಾ ಜವಾಬ್ದಾರಿ ಹೊತ್ತಿರುತ್ತಾರೆ ಎಂದು ತಿಳಿಸಲಾಗಿದೆ.
ಯಾವ ಕಾರಣಕ್ಕೆ ನಿಯೋಜನೆ ಬೇಡ?: ಈಗ ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಒದಗಿಸಲು, ಗಣಕೀಕೃತ ಕೆಲಸ ಕಾರ್ಯಗಳಿಗೆ ಬೆರಳಚ್ಚು ನೀಡಲು ಪಿಡಿಒಗಳ ಅಗತ್ಯವಿದೆ. ನರೇಗಾ ಕಾಮಗಾರಿ ಅನುಷ್ಠಾನಗೊಳಿಸುವ ಹೊಣೆಯೂ ಅವರ ಮೇಲಿದೆ.
ಈ ಎಲ್ಲ ಅಂಶಗಳನ್ನು ಗಮನಿಸಿ ಪಿಡಿಒಗಳನ್ನು ಪೂರ್ಣಕಾಲಿಕವಾಗಿ ನಿಯೋಜಿಸುವುದರಿಂದ ವಿನಾಯಿತಿ ನೀಡಿ, ಸಾಂದರ್ಭಿಕ/ ಅಲ್ಪಾವಧಿಯ ಚುನಾವಣಾ ಜವಾಬ್ದಾರಿಗೆ ನಿಯೋಜಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಇಲಾಖೆಯು ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
ರಾಜ್ಯದಲ್ಲಿ ಈ ಬಾರಿ ಭೀಕರ ಬರ ಆವರಿಸಿದೆ. ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020 ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿ ಸಮೀಕ್ಷೆಯ (Ground Truthing) ವರದಿಯನ್ವಯ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ 223 ತಾಲ್ಲೂಕುಗಳನ್ನು ಬರ ಪಿಡೀತ ತಾಲ್ಲೂಕುಗಳೆಂದು ಸರ್ಕಾರವು ಘೋಷಿಸಿದ್ದು, ಇದು ತಕ್ಷಣದಿಂದ ಜಾರಿಗೆ ಬಂದಿದೆ.
ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ತಕ್ಷಣ ಮಾದರಿ ಚುನಾವಣಾ ನೀತಿ ಸಂಹಿತೆ ಸಹ ಜಾರಿಗೆ ಬರುತ್ತದೆ. ಕೂಡಲೇ ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಸ್ಥಳಗಳು ಸೇರಿದಂತೆ ವಿವಿಧೆಡೆ ಅಳವಡಿಸಲಾಗಿರುವ ಜಾಹೀರಾತು, ಪ್ರಕಟಣೆ, ಬ್ಯಾನರ್ಗಳನ್ನು ತೆರವುಗೊಳಿಸಬೇಕಿದೆ.
ಚುನಾವಣಾ ಆಯೋಗದ ನಿರ್ದೇಶನವನ್ನು ಅಧಿಕಾರಿಗಳು ಪಾಲಿಸಬೇಕು. ಮಾಹಿತಿ ತಿಳಿಯದಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ತಮಗೆ ನಿಯೋಜಿಸಿರುವ ಕ್ಷೇತ್ರ ವ್ಯಾಪ್ತಿಯಲ್ಲಿ ಅಧಿಕಾರಿ/ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕು.
ಚೆಕ್ಪೋಸ್ಟ್ಗಳಲ್ಲಿ ತಪಾಸಣೆ ಮಾಡಬೇಕು. ಹಣ, ಮದ್ಯ ಸಿಕ್ಕಿಬಿದ್ದಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಕ್ರಮ ಜರುಗಿಸಬೇಕು. ಸಿ-ವಿಜಿಲ್ ಆ್ಯಪ್ ಮೂಲಕ ಮಾಹಿತಿ ದೊರೆಯಲಿದ್ದು, ಆಯಾಯ ಸಂದರ್ಭದಲ್ಲಿ ಜಿಲ್ಲಾ ಚುನಾವಣಾ ವಿಭಾಗಕ್ಕೆ ಮಾಹಿತಿ ನೀಡಬೇಕಿದೆ.
ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ. ಸುಮಾರು 3.5 ಲಕ್ಷ ಸಿಬ್ಬಂದಿಗಳನ್ನು ಈ ಬಾರಿಯ ಚುನಾವಣಾ ಕಾರ್ಯಕ್ಕೆ ನಿಯೋಜನೆ ಮಾಡಲು ತೀರ್ಮಾನಿಸಿ, ಪಟ್ಟಿ ಮಾಡಲಾಗಿದೆ. ಪರೀಕ್ಷೆಗಳು ಮುಗಿದ ಬಳಿಕ ಶಾಲೆ, ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಚುನಾವಣಾ ಕಾರ್ಯದ ತರಬೇತಿಗೆ ಸೇರ್ಪಡೆಯಾಗುತ್ತಾರೆ. ಈಗ ಬೇರೆ ಬೇರೆ ಇಲಾಖೆಗಳ ಅಧಿಕಾರಿಗಳು, ಸಿಬ್ಭಂದಿಗೆ ತರಬೇತಿ ನೀಡಲಾಗುತ್ತಿದೆ.
2019ರಲ್ಲಿ ಒಟ್ಟು 7 ಹಂತದಲ್ಲಿ ಲೋಕಸಭೆ ಚುನಾವಣೆ ನಡೆದಿತ್ತು. ಈ ಬಾರಿ ಎಷ್ಟು ಹಂತದಲ್ಲಿ ಚುನಾವಣೆ ನಡೆಸಲಾಗುತ್ತದೆ?. ಕರ್ನಾಟಕದಲ್ಲಿ ಯಾವಾಗ ಚುನಾವಣೆ ನಡೆಯಲಿದೆ? ಎಂಬುದು ಇನ್ನೂ ಅಂತಿಮವಾಗಿಲ್ಲ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications