1 ಕೋಟಿ ರೂಪಾಯಿಗೂ ಹೆಚ್ಚು ಹಣ ಪತ್ತೆ: ಬಿಜೆಪಿ ಬಗ್ಗೆ ರಾಮಲಿಂಗಾ ರೆಡ್ಡಿ ಆರೋಪ ಏನು?
2024ರ ಲೋಕಸಭೆ ಚುನಾವಣೆಗಾಗಿ ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ ಎಂಬ ಗಂಭೀರ ಆರೋಪಗಳ ನಡುವೆ ಇದೀಗ, ಬೆಂಗಳೂರಿನ ಜಯನಗರದಲ್ಲಿ ಬರೋಬ್ಬರಿ 1 ಕೋಟಿ 34 ಲಕ್ಷ ರೂಪಾಯಿ ಹಣ ಸಿಕ್ಕಿದೆ ಎಂದು ಆರೋಪ ಮಾಡಲಾಗಿದೆ. ಒಂದು ಕಡೆ ಈ ಹಣವು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ಸೇರಿದ್ದು ಎಂದು ಗಂಭೀರ ಆರೋಪ ಮಾಡುತ್ತಿದ್ದಾರೆ ಕಾಂಗ್ರೆಸ್ ನಾಯಕರು. ಇನ್ನು ಈ ಬಗ್ಗೆ ಸ್ವತಃ ರಾಮಲಿಂಗಾ ರೆಡ್ಡಿ ಅವರೇ ಟ್ವೀಟ್ ಮಾಡಿದ್ದಾರೆ.
ಹೀಗೆ ರಾಜಧಾನಿ ಬೆಂಗಳೂರಿನಲ್ಲಿ ಕೋಟಿ ಕೋಟಿ ಹಣ ಸಿಗುತ್ತಿದ್ದಂತೆ ಇಡೀ ಬೆಂಗಳೂರಿನ ಜನರು ಬೆಚ್ಚಿಬಿದ್ದಿದ್ದಾರೆ. ಈ ವಿಚಾರವು ದೇಶದ ಮೂಲೆ ಮೂಲೆಯಲ್ಲೂ ಸದ್ದು ಮಾಡಿದೆ. ಆದರೆ ಈ ಹಣವನ್ನು ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಬೆಂಬಲಿಗರು ಹಂಚಲು ತೆಗೆದುಕೊಂಡು ಹೋಗುತ್ತಿದ್ದರು ಎಂಬ ಆರೋಪ ಮಾಡಿದ್ದಾರೆ ಕಾಂಗ್ರೆಸ್ ನಾಯಕರು. ಈ ಆರೋಪದ ನಡುವೆ ಖುದ್ದು ಬೆಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸೌಮ್ಯಾ ರೆಡ್ಡಿ ಅವರ ತಂದೆ ರಾಮಲಿಂಗಾ ರೆಡ್ಡಿ ಅವರು ಟ್ವೀಟ್ ಮಾಡಿದ್ದಾರೆ. ಹಾಗಾದ್ರೆ, ರಾಮಲಿಂಗಾ ರೆಡ್ಡಿ ಅವರು ಹೇಳಿದ್ದೇನು? ಮುಂದೆ ಓದಿ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ರಾಮಲಿಂಗಾ ರೆಡ್ಡಿ ಅವರು, 'ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜಯನಗರದಲ್ಲಿ ಬಿಜೆಪಿಯ ದಾಖಲೆಯಿಲ್ಲದ ಕೋಟ್ಯಂತರ ರೂಪಾಯಿ ಹಣವನ್ನು ಚುನಾವಣೆ ಆಯೋಗ ಜಪ್ತಿ ಮಾಡಿದ್ದು, ಇದು ಬಿಜೆಪಿ ಎಲೆಕ್ಟೊರಲ್ ಬಾಂಡ್ ರೂಪದಲ್ಲಿ ಕೊಳ್ಳೆ ಹೊಡೆದ ಪಾಪದ ಹಣವಾಗಿದೆ. ಈ ಹಣವನ್ನು ಪ್ರಧಾನಿಯ ಬೆಂಗಳೂರು ಕಾರ್ಯಕ್ರಮಕ್ಕೆ ಜನ ಸೇರಿಸಲು ಬಳಸುವ ಉದ್ದೇಶದಿಂದ ಸಾಗಿಸುತ್ತಿದ್ದರೆ? ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಚುನಾವಣೆ ನಡೆಸುವುದು, ಬಹುಮತ ಬರದಿದ್ದಾಗ ನೂರಾರು ಕೋಟಿ ಹಣ ಹಾಕಿ ಶಾಸಕರು, ಸಂಸದರನ್ನು ಖರೀದಿಸುವುದು ಬಿಜೆಪಿ ಜಾಯಮಾನ.' ಎಂದಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜಯನಗರದಲ್ಲಿ ಬಿಜೆಪಿಯ ದಾಖಲೆಯಿಲ್ಲದ ಕೋಟ್ಯಂತರ ರೂಪಾಯಿ ಹಣವನ್ನು ಚುನಾವಣೆ ಆಯೋಗ ಜಪ್ತಿ ಮಾಡಿದ್ದು, ಇದು ಬಿಜೆಪಿ ಎಲೆಕ್ಟೊರಲ್ ಬಾಂಡ್ ರೂಪದಲ್ಲಿ ಕೊಳ್ಳೆ ಹೊಡೆದ ಪಾಪದ ಹಣವಾಗಿದೆ.
— Ramalinga Reddy (@RLR_BTM) April 13, 2024
ಈ ಹಣವನ್ನು ಪ್ರಧಾನಿಯ ಬೆಂಗಳೂರು ಕಾರ್ಯಕ್ರಮಕ್ಕೆ ಜನ ಸೇರಿಸಲು ಬಳಸುವ ಉದ್ದೇಶದಿಂದ ಸಾಗಿಸುತ್ತಿದ್ದರೆ?… pic.twitter.com/U6K0X78BIB
ಹಾಗೇ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಮುಂದುವರಿಸಿದ ರಾಮಲಿಂಗಾ ರೆಡ್ಡಿ ಅವರು, 'ಈಗ ಅವರ ಹಣವಂತೂ ಹೋಗಿದೆ, ಮಾನವನ್ನಾದರೂ ಉಳಿಸಿಕೊಳ್ಳಬೇಕು ಎನ್ನುವ ಕಾರಣದಿಂದ ಕಾಂಗ್ರೆಸ್ ಮೇಲೆ ಆಧಾರ ರಹಿತ ಆರೋಪವನ್ನು ಮಾಡುತ್ತಿದ್ದಾರೆ. ಈ ಬಾರಿಯ ಬೆಂಗಳೂರು ದಕ್ಷಿಣ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭಯ ಉಂಟಾಗಿದ್ದು, ಲೂಟಿ ಮಾಡಿದ ಹಣವನ್ನೆಲ್ಲ ಖರ್ಚು ಮಾಡಿಯಾದರೂ ಶತಾಯಗತಾಯ ಗೆಲ್ಲಬೇಕು ಎಂದು ಅವರ ತಂಡ ಹೊರಟಿರುವಂತಿದೆ. ನಾವು ಜನ ಬಲವನ್ನು ನಂಬಿದವರು, ಬಿಜೆಪಿಯಂತೆ ಹಣ ಬಲವನ್ನಲ್ಲ.' ಎಂದಿದ್ದಾರೆ ಸಚಿವ ರಾಮಲಿಂಗಾ ರೆಡ್ಡಿ ಅವರು.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications