ಮಂಗಳೂರು ಮನೆಯನ್ನಾದರೂ ಮಾಡ್ಕೊಳಿ: ಕುಮಾರಸ್ವಾಮಿಗೆ ಕಿರಿಕ್ ಮಾಡುತ್ತಿರುವ ಕಾಂಗ್ರೆಸ್ ಟ್ವೀಟ್
ಅದೇನ್ ಕಥೆಯೋ ಏನೋ.. ಯುಗಾದಿ ಬಾಡೂಟ ವಿಚಾರ ಕೂಡ ಈಗ ರಾಜಕೀಯದ ರಂಗು ಪಡೆದಿದೆ. ಅದ್ರಲ್ಲೂ ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆ ವಿಚಾರಕ್ಕಾಗಿ ಕಾಂಗ್ರೆಸ್ & ಬಿಜೆಪಿ ಹಾಗೂ ಜೆಡಿಎಸ್ ನಡುವೆ ಮಹಾಯುದ್ಧ ಆರಂಭ ಆಗಿದೆ. ಒಂದು ಕಡೆ ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆಯಲ್ಲಿ ಕಾರ್ಯಕರ್ತರು & ಮುಖಂಡರಿಗೆ ಬಾಡೂಟ ವ್ಯವಸ್ಥೆಯ ಮಾಡಲಾಗಿದೆ ಎಂಬ ಆರೋಪ ಮಾಡುತ್ತಿರುವಾಗಲೇ ಕರ್ನಾಟಕ ಕಾಂಗ್ರೆಸ್ ಹೊಸ ಆರೋಪದ ಬಾಂಬ್ ಸಿಡಿಸಿದೆ!
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ & ಎನ್ಡಿಎ (ಬಿಜೆಪಿ + ಜೆಡಿಎಸ್) ನಡುವೆ ಫೈಟಿಂಗ್ ನಡೆಯುತ್ತಿದೆ. ಹೀಗಾಗಿ ಎರಡು ಕಡೆ ಗೆಲುವಿಗೆ ತಿಕ್ಕಾಟ ಜೋರಾಗಿರುವ ಸಮಯದಲ್ಲೇ, ಟ್ವೀಟ್ ಮೂಲಕ ಕಾಂಗ್ರೆಸ್ ಕುಮಾರಸ್ವಾಮಿ ಅವರಿಗೆ ಚಾಲೆಂಜ್ ಹಾಕಿದೆ. ಹಾಗಾದ್ರೆ ಈಗ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಹಾಕಿದ ಸವಾಲು ಎಂತಹದ್ದು.? ಈ ಮೂಲಕ ಲೋಕಸಭೆ ಚುನಾವಣೆ ಸಮಯದಲ್ಲಿ ಶುರುವಾದ ಹೊಸ ತಿಕ್ಕಾಟ ಎಂತಹದ್ದು? 'ಮಂಗಳೂರು ಮನೆಯನ್ನಾದರೂ ಮಾಡ್ಕೊಳಿ' ಅಂತಾ ಕಾಂಗ್ರೆಸ್ ಹೇಳಿದ್ದು ಯಾಕೆ? ಸಂಪೂರ್ಣ ಮಾಹಿತಿಗೆ ಮುಂದೆ ಓದಿ.

ಕುಮಾರಸ್ವಾಮಿಗೆ ಕಾಂಗ್ರೆಸ್ ಚಾಲೆಂಜ್!
ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಚಾಲೆಂಜ್ ಹಾಕಿರುವ ಕರ್ನಾಟಕ ಕಾಂಗ್ರೆಸ್, 'ನಿಮ್ಮ ಹೆಡ್ಡಾಫೀಸ್ ಯಾವುದಾದರೆ ನಮಗೇನು ಸ್ವಾಮಿ, ತೋಟದ ಮನೆಯನ್ನಾದರೂ ಹೆಡ್ಡಾಫೀಸ್ ಮಾಡ್ಕೊಳಿ, ಬೆಂಗಳೂರು ಮನೆಯನ್ನಾದರೂ ಮಾಡ್ಕೊಳಿ, ಮಂಗಳೂರು ಮನೆಯನ್ನಾದರೂ ಮಾಡ್ಕೊಳಿ, ತಾಜ್ ವೆಸ್ಟ್ಎಂಡ್ನಾದರೂ ಮಾಡ್ಕೊಳಿ, ಹೆಡ್ಡಾಫೀಸ್ ನಾದರೂ ಮಾಡ್ಕೊಳಿ, ಬ್ರಾಂಚ್ ಆಫೀಸ್ನಾದರೂ ಮಾಡ್ಕೊಳಿ, ಅದು ನಿಮ್ಮ ಇಷ್ಟ ನಿಮ್ಮ ಕಷ್ಟ.. ನಮಗೆ ಯಾವ ಕಷ್ಟವೂ ಇಲ್ಲ, ನಷ್ಟವೂ ಇಲ್ಲ.. ಆದರೆ ಚುನಾವಣೆ ನೀತಿ ಸಂಹಿತೆಯ ಉಲ್ಲಂಘಿಸಿ ಬಾಡೂಟ ಹಾಕಿಸಲು ತಯಾರಿ ಮಾಡಿಕೊಂಡಿದ್ದೇಕೆ? ಹೇಳಿ..' ಎಂದು ಟ್ವೀಟ್ ಮೂಲಕ, ಪ್ರಶ್ನೆ ಕೇಳಿದೆ ಕರ್ನಾಟಕ ಕಾಂಗ್ರೆಸ್.
ಸೋಷಿಯಲ್ ಮೀಡಿಯಾದಲ್ಲೂ ಭರ್ಜರಿ ಚರ್ಚೆ!
ಈ ಮೂಲಕ ಕರ್ನಾಟಕ ಕಾಂಗ್ರೆಸ್ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರ ನಡುವೆ ಇದೀಗ ನೇರ ಯುದ್ಧ ಶುರುವಾದಂತೆ ಕಾಣುತ್ತಿದೆ. ಅದರಲ್ಲೂ, ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನಿರ್ಧಾರ ಕೈಗೊಂಡ ನಂತರವಂತು ತಿಕ್ಕಾಟ ಮತ್ತಷ್ಟು ಜೋರಾಗಿದೆ. ಹೀಗೆ ಲೋಕಸಭೆ ಚುನಾವಣೆ ಮುಗಿಯುವ ತನಕ, ಈ ತಿಕ್ಕಾಟ ಕೂಡ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಮತ್ತೊಂದ್ಕಡೆ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲೂ ಭಾರಿ ಚರ್ಚೆ ನಡೆಯುತ್ತಿದೆ.
ನಿಮ್ಮ ಹೆಡ್ಡಾಫೀಸ್ ಯಾವುದಾದರೆ ನಮಗೇನು ಸ್ವಾಮಿ,
— Karnataka Congress (@INCKarnataka) April 10, 2024
ತೋಟದ ಮನೆಯನ್ನಾದರೂ ಹೆಡ್ಡಾಫೀಸ್ ಮಾಡ್ಕೊಳಿ,
ಬೆಂಗಳೂರು ಮನೆಯನ್ನಾದರೂ ಮಾಡ್ಕೊಳಿ,
ಮಂಗಳೂರು ಮನೆಯನ್ನಾದರೂ ಮಾಡ್ಕೊಳಿ,
ತಾಜ್ ವೆಸ್ಟ್ಎಂಡ್ನಾದರೂ ಮಾಡ್ಕೊಳಿ,
ಹೆಡ್ಡಾಫೀಸ್ ನಾದರೂ ಮಾಡ್ಕೊಳಿ, ಬ್ರಾಂಚ್ ಆಫೀಸ್ನಾದರೂ ಮಾಡ್ಕೊಳಿ, ಅದು ನಿಮ್ಮ ಇಷ್ಟ ನಿಮ್ಮ ಕಷ್ಟ..
ನಮಗೆ ಯಾವ ಕಷ್ಟವೂ ಇಲ್ಲ,… pic.twitter.com/TBwbaaMZqM
2024ರ ಲೋಕಸಭೆ ಚುನಾವಣೆಗೆ ಅಖಾಡ ಸಿದ್ಧವಾಗಿದೆ ಅಭ್ಯರ್ಥಿಗಳೂ ಸಿದ್ಧವಾಗಿ ಕೂತಿದ್ದಾರೆ. ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿ ರಣಕಹಳೆ ಮೊಗಳಗಿಸಿದೆ. ಇನ್ನೇನು ಕೆಲ ದಿನಗಳಲ್ಲಿ ಭಾರತೀಯರು ಹೊಸ ಸರ್ಕಾರ ಆಯ್ಕೆ ಮಾಡಲು ಮತದಾನ ಮಾಡಲಿದ್ದು, ಇದಕ್ಕೆ ಬೇಕಾದ ತಯಾರಿ ಕೂಡ ಸಾಗಿವೆ. ಹಾಗೆ ಕರ್ನಾಟಕದಲ್ಲಿ ಕೂಡ ಎಲ್ಲ ರೀತಿ ತಯಾರಿ ನಡೆದಿದೆ. ಕರ್ನಾಟಕದಲ್ಲಿ ಒಟ್ಟು 2 ಹಂತದಲ್ಲಿ ಚುನಾವಣೆ ಇದ್ದು, ಏಪ್ರಿಲ್ 26 ರಂದು & ಮೇ 7 ರಂದು ಕರ್ನಾಟಕದಲ್ಲಿ ವೋಟಿಂಗ್ ನಡೆಯಲಿದ್ದು, ಈ ಫಲಿತಾಂಶ ಜೂನ್ 4ಕ್ಕೆ ಹೊರಬೀಳಲಿದೆ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್












Click it and Unblock the Notifications