Lok Sabha Election 2024: ನಾಮಪತ್ರ ಸಲ್ಲಿಕೆ ವೇಳೆ ಈ ಅಂಶಗಳು ಗಮನದಲ್ಲಿರಲಿ
ಬೆಂಗಳೂರು, ಏಪ್ರಿಲ್. 12: ಲೋಕಸಭಾ ಚುನಾವಣೆಗೆ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಗಿದು, ಅಂತಿಮ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದೇ ವೇಳೆ ಎರಡನೇ ಹಂತದ ಚುನಾವಣೆಗೆ ಪ್ರಕ್ರಿಯೆ ಆರಂಭವಾಗಿದೆ. ಮೇ 7 ರಂದು ಮತದಾನ ಜರುಗಲಿದ್ದು, ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನವಾಗಿದ್ದು, ಏಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 22 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಇದಾದ ಬಳಿಕ ಎರಡನೇ ಹಂತದಲ್ಲಿ ಎಷ್ಟು ಮಂದಿ ಅಭ್ಯರ್ಥಿಗಳು ಇರಲಿದ್ದಾರೆ ಎಂಬ ಬಗ್ಗೆ ಅಧಿಕೃತ ಮಾಹಿತಿ ಸಿಗಲಿದೆ.

ನಾಮಪತ್ರ ಸಲ್ಲಿಕೆ ವೇಳೆ ಗಮನಿಸಬೇಕಾದ ಅಂಶಗಳು
ಚುನಾವಣಾಧಿಕಾರಿಗಳ ಕಚೇರಿ (ಜಿಲ್ಲಾಧಿಕಾರಿಗಳ ಕಚೇರಿ) ಸುತ್ತಮುತ್ತಲು 200 ಮೀ. ವ್ಯಾಪ್ತಿಯಲ್ಲಿ ಗಡಿ ಗುರುತಿಸಿ, 100 ಮೀ. ವ್ಯಾಪ್ತಿಯನ್ನು ನಿರ್ಭಂದಿತ ಪ್ರದೇಶವನ್ನಾಗಿ ಗುರುತಿಸಲಾಗಿದೆ. 100 ಮೀ ನಿರ್ಬಂದಿತ ಪ್ರದೇಶದ ವ್ಯಾಪ್ತಿಯೊಳಗಡೆ ನಾಮಪತ್ರ ಸಲ್ಲಿಸಲು ಕೇವಲ 3 ವಾಹನಗಳಿಗೆ ಮಾತ್ರ ಅವಕಾಶವಿದೆ. ಅಭ್ಯರ್ಥಿಯ ವಾಹನಗಳು ಕಡ್ಡಾಯವಾಗಿ ಅನುಮತಿ ಪಡೆದ ವಾಹನಗಳಾಗಿರಬೇಕು ಹಾಗೂ ವಾಹನಗಳ ಮೇಲೆ ಅನುಮತಿ ಪತ್ರವನ್ನು ಲಗತ್ತಿಸಿರಬೇಕು.
ಮೂರು ವಾಹನಗಳಿಗೆ ಚುನಾವಣಾಧಿಕಾರಿಗಳ ಕಚೇರಿಯ ಮುಖ್ಯ ದ್ವಾರದ ಗೇಟಿನ ವರೆಗೆ ಮಾತ್ರ ಪ್ರವೇಶಕ್ಕೆ ಅನುಮತಿಸಲಾಗಿದೆ. ಚುನಾವಣಾ ಅಧಿಕಾರಿಗಳ ಕಚೇರಿಯ ಒಳಗಡೆ ಪ್ರವೇಶಿಸಲು ಅಭ್ಯರ್ಥಿಯೊಂದಿಗೆ 4 ಜನರಿಗೆ ಮಾತ್ರ ಅವಕಾಶವಿದೆ.
ಏಪ್ರಿಲ್ 12 ರಿಂದ ಏಪ್ರಿಲ್ 19, 2024 ರವರೆಗೆ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯೊಳಗಾಗಿ (ರಜಾದಿನಗಳನ್ನು ಹೊರತುಪಡಿಸಿ) ಅಭ್ಯರ್ಥಿಗಳು ತಮ್ಮ ನಾಮ ಪತ್ರಗಳನ್ನು ಸಲ್ಲಿಸಬಹುದು. ನಾಮ ಪತ್ರದೊಂದಿಗೆ ಈಗಾಗಲೇ ತಿಳಿಸಿರುವಂತೆ ರಾಜಕೀಯ ಪಕ್ಷಗಳ ಸಭೆ ಜರುಗಿಸಿ, ನಾಮಪತ್ರ ಪ್ರಕ್ರಿಯೆ ಹಾಗೂ ನಮೂನೆ, ದಾಖಲೆ, ಪ್ರತಿಗಳ ಸಂಖ್ಯೆ ಕುರಿತು ಮಾಹಿತಿ ನೀಡಲಾಗಿದೆ.

ನಾಮಪತ್ರ ನಮೂನೆ-2ಎ ಎಲ್ಲ ಕಾಲಂಗಳನ್ನು ಭರ್ತಿ ಮಾಡಿ ಅಭ್ಯರ್ಥಿ ಹಾಗೂ ಸೂಚಕರು ಸಹಿ ಮಾಡಿರಬೇಕು. ಠೇವಣಿ ಮೊತ್ತವು ಸಾಮಾನ್ಯ ವರ್ಗಕ್ಕೆ ರೂ. 25,000 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗಕ್ಕೆ 12,500 ರೂಪಾಯಿಯಾಗಿದೆ. ತಹಶೀಲ್ದಾರರಿಂದ ಪಡೆದ ಇತ್ತೀಚಿನ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಒಂದಕ್ಕಿಂತ ಹೆಚ್ಚಿನ ನಾಮಪತ್ರ ಸಲ್ಲಿಸಿದಲ್ಲಿ 2ನೇ ಹಾಗೂ ನಂತರದ ನಾಮ ಪತ್ರಗಳಿಗೆ ಈಗಾಗಲೇ ಠೇವಣಿ ಮಾಡಿದ ರಶೀದಿಯ ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು.
ಅಭ್ಯರ್ಥಿಯ ಮೊಬೈಲ್ ಸಂಖ್ಯೆ, ವ್ಯಾಟ್ಸಪ್ ಸಂಖ್ಯೆ, ಇ-ಮೇಲ್ ವಿಳಾಸ, ಫೇಸ್ ಬುಕ್, ಟ್ವೀಟರ್, ಇನ್ಸ್ಟಾಗ್ರಾಮ್, ಟೆಲಿಗ್ರಾಂ ಹಾಗೂ ಇತ್ಯಾದಿ ಸಾಮಾಜಿಕ ಜಾಲತಾಣಗಳ ವಿವರಗಳನ್ನು ನಿಗದಿತ ನಮೂನೆಗಳಲ್ಲಿ ಸಲ್ಲಿಸಬೇಕು. ಯಾವ ಅಭ್ಯರ್ಥಿಯು ತಮ್ಮ ವಿರುದ್ಧದ ಅಪರಾಧ ಪ್ರಕರಣವನ್ನು ಹೊಂದಿರುವವರೋ ಅವು ಬಾಕಿ ಪ್ರಕರಣಗಳಾಗಲಿ ಅಥವಾ ಅವರ ಅಭ್ಯರ್ಥಿಯನ್ನು ಅಪರಾಧಿಯೆಂದು ನಿರ್ಣಯಿಸಿದ ಪ್ರಕರಣಗಳಾಗಲಿ ಅಂಥ ಅಭ್ಯರ್ಥಿಗಳು ಮಾನ್ಯ ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ ಸಿ-1, ಸಿ-2, ಘೋಷಣೆಯನ್ನು ಪ್ರಕಟಿಸಬೇಕಾಗುತ್ತದೆ ಹಾಗೂ ಸಿ-4 ರಲ್ಲಿ ವರದಿಯನ್ನು ಸಲ್ಲಿಸಬೇಕು.
ಅಂತಹ ಅಪರಾಧಗಳ ಪ್ರಕಟಣೆಗಳನ್ನು, ನಾಮಪತ್ರವನ್ನು ಹಿಂತೆಗೆದುಕೊಳ್ಳುವ ಮೊದಲ 4 ದಿನಗಳೊಳಗೆ, ಮುಂದಿನ 5 ರಿಂದ 8 ದಿನಗಳೊಳಗೆ, 9ನೇ ದಿನದಿಂದ ಪ್ರಚಾರದ ಕೊನೆಯ ದಿನದವರೆಗೆ (ಮತದಾನದ ದಿನಕ್ಕೆ ಮುಂಚಿನ 2ನೇ ದಿನ) ಮೂರು ಹಂತಗಳಲ್ಲಿ ಪ್ರಕಟಿಸಿ ವರದಿ ಸಲ್ಲಿಸಬೇಕಿದೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications