ಲೋಕಸಭೆ ಚುನಾವಣೆ ಮತದಾನ ಮುಕ್ತಾಯ, ನೀವು ವೋಟ್ ಹಾಕಿದ್ರಾ?
2024ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ 2ನೇ ಹಂತದ ಮತದಾನ ಮುಕ್ತಾಯವಾಗಿದೆ. 1ನೇ ಹಂತದಲ್ಲಿ ದಕ್ಷಿಣ ಕರ್ನಾಟಕದ ಜಿಲ್ಲೆಗಳಿಗೆ ಮತದಾನ ನಡೆದಿತ್ತು, ಇಂದು ಮಧ್ಯ & ಉತ್ತರ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದೆ. ಅದರಲ್ಲೂ ಹುಬ್ಬಳ್ಳಿ ಹಾಗೂ ಕುಂದಗೋಳ ತಾಲೂಕಿನ ಗ್ರಾಮೀಣ ಭಾಗದ ಅಂಚಟಗೇರಿ, ನೂಲ್ವಿ, ಕುಂದಗೋಳ, ಬೆನಕನಹಳ್ಳಿ, ಚಿಕ್ಕನೇರ್ತಿ, ರೊಟ್ಟಿಗವಾಡ ಸೇರಿ ವಿವಿಧ ಗ್ರಾಮಗಳಲ್ಲಿ ಶಾಂತಿಯುತ ಮತದಾನ ನಡೆದಿದೆ.
ಇಂದು ಬೆಳಿಗ್ಗೆಯಿಂದಲೇ ಮತದಾರರು ಮತಗಟ್ಟೆಗಳಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುವ ದೃಶ್ಯ ಕಂಡುಬಂದವು. ಪ್ರಮುಖವಾಗಿ ಹಿರಿಯ ನಾಗರೀಕರು, ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಗೆ ಬಂದರು. ವಿಶೇಷ ಚೇತನರು ಕೂಡ ತಪ್ಪದೇ ಮತದಾನ ಹಕ್ಕನ್ನು ಪೂರೈಸಿದರು. ಬಿಸಿಲು ಲೆಕ್ಕಿಸದೆ ಮತದಾರರು ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾನ ಹಕ್ಕನ್ನ ಚಲಾಯಿಸಿದರು. ಈ ಮೂಲಕ 2ನೇ ಹಂತದ ಮತದಾನ ಶಾಂತಿಯುತವಾಗಿ & ಭರ್ಜರಿಯಾಗಿ ಮುಕ್ತಾಯವಾಗಿದೆ. ಹಾಗಾದರೆ ಯುವ ಮತದಾರರ ಕಥೆ ಏನು?

ಯುವ ಮತದಾರರಿಗೆ ಭರ್ಜರಿ ಉತ್ಸಾಹ!
ಇನ್ನು ವಿವಿಧ ಗ್ರಾಮಗಳಲ್ಲಿ ಯುವ ಮತದಾರರು ಮೊದಲ ಬಾರಿ ತಮ್ಮ ಹಕ್ಕನ್ನು ಚಲಾಯಿಸಿ, ಸಂತಸ ವ್ಯಕ್ತಪಡಿಸಿದರು. ಯಾವುದೇ ಅಂಜಿಕೆ & ಭಯ ಭೀತಿ ಇಲ್ಲದೇ ಮತದಾನ ಮಾಡಿದರು. ಪ್ರಜಾಪ್ರಭುತ್ವದ ದೊಡ್ಡ ಹಬ್ಬ, ಮತದಾನ ಪ್ರಕ್ರಿಯೆಯಲ್ಲಿ ಯುವ ಮತದಾರರು ಕೂಡ ಭಾಗಿ ಆಗಿ ಮತವನ್ನ ಚಲಾಯಿಸುವ ದೃಶ್ಯಗಳು ಕಂಡುಬಂದವು. ಇದೇ ವೇಳೆ ಮಾತನಾಡಿದ ನೂಲ್ವಿ ಗ್ರಾಮದ ವೇದಾ ಗಾಟಗೆ, ಇದೇ ಮೊದಲ ಬಾರಿ ಮತ ಚಲಾಯಿಸಿದ್ದೇನೆ. ಬಹಳ ಖುಷಿ ಆಗಿದ್ದು ನನ್ನ ಹಕ್ಕು ಚಲಾಯಿಸಿದ್ದೇನೆ ಎಂದರು.
ಬೆನಕನಹಳ್ಳಿ ಸೌಭಾಗ್ಯ ಹಳೇಮನಿ, ಮೊದಲ ಬಾರಿ ಮತದಾನ ಮಾಡಿದ್ದು ಸಂತೋಷ ತಂದಿದೆ ಎಂದರು. ಈಗಾಗಲೇ ಮತದಾನ ಮಾಡುವ ಕುರಿತು ಅರಿತುಕೊಂಡಿದ್ದರಿಂದ, ಯಾವುದೇ ರೀತಿ ಭಯವಿರಲಿಲ್ಲ ಎಂದರು. ಚಿಕ್ಕನೇರ್ತಿ ಗ್ರಾಮದ ಸ್ಪೂರ್ತಿ ಗೋಣಿ, ಸಹನಾ ಗೋಣಿ ಸೇರಿದಂತೆ ರೊಟ್ಟಿಗವಾಡ ಗ್ರಾಮದ ಕಾವ್ಯಾ ರಂಗಪ್ಪನವರ, ಚೇತನಾ ಬಡಿಗೇರ, ಕಿರಣಗೌಡ ಹಿರೇಗೌಡರ & ಉದಯಕುಮಾರ್ ಭೂತರೆಡ್ಡಿ ಮತ್ತಿತರ ಯುವ ಮತದಾರರು ಕೂಡ ಮತ ಹಾಕಿ, ಸಂತಸ ವ್ಯಕ್ತಪಡಿಸಿದರು.
ಒಂದೇ ಕುಟುಂಬದ 96 ಮತದಾರರು!
ನೂಲ್ವಿ ಗ್ರಾಮದ ಕೊಪ್ಪದ ಕುಟುಂಬದ 96 ಮತದಾರರು ಹಕ್ಕನ್ನು ಚಲಾಯಿಸಿದ್ದು ತುಂಬಾನೆ ವಿಶೇಷವಾಗಿತ್ತು. ಪ್ರತಿ ವರ್ಷದ ರೀತಿ, ಈ ಸಾರಿಯೂ ಕೂಡ ಚುನಾವಣೆಯಲ್ಲಿ ಮತದಾನವನ್ನ ಮಾಡಿ ಸಂತಸಪಟ್ಟರು. ಹಾಗೇ ಹಿರಿಯರು ಕೂಡ ಈ ವಯಸ್ಸಿನಲ್ಲು ಕೂಡ ಬಿಸಿಲು ಲೆಕ್ಕ ಮಾಡದೆ, ತಮ್ಮ ಮತದಾನದ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಹಬ್ಬಕ್ಕೆ ಸಾಕ್ಷಿಯಾದ್ರು ಮಹಿಳೆಯರ ಮತದಾನ ಪ್ರಮಾಣ ಹೆಚ್ಚಿಸಲು ಕುಂದಗೋಳದಲ್ಲಿ ಸಖಿ ಮತಗಟ್ಟೆ ನಿರ್ಮಾಣ ಮಾಡಲಾಗಿತ್ತು, ಇದು ಮತದಾರರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು.
-
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications