Lok Sabha Election 2024: ಹಾಸನದಲ್ಲಿ ಅಂದು ಅಜ್ಜಂದರ ನಡುವೆ ಕಾದಾಟ, ಇಂದು ಮೊಮ್ಮಕ್ಕಳ ಮಧ್ಯೆ ಸೆಣಸಾಟ
ದೇಶದಲ್ಲಿ ಲೋಕಸಭಾ ಚುನಾವಣೆಗಳ ಕಾವು ದಿನೆ ದಿನೇ ಏರುತ್ತಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಕಾರ್ಯವನ್ನು ಭರದಿಂದ ನಡೆಸಿದ್ದಾರೆ. ಇನ್ನು ಹಲವೆಡೆ ಪ್ರಚಾರ ಸಹ ಜೋರಾಗಿದೆ. ಈ ಬಾರಿ ಬಿಜೆಪಿ ಹಾಗೂ ಜೆಡಿಎಸ್ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸವಾಲು ಎಸೆಯಲಿವೆ.
ಕರ್ನಾಟಕದಲ್ಲೂ ರಾಜಕೀಯ ಕಣ ರಂಗೇರಿದೆ. ಹಲವೆಡೆ ಪ್ರಚಾರದ ಭರಾಟೆ ಚುರುಕು ಪಡೆದಿದೆ. ಈ ಬಾರಿ ಹಲವು ಕ್ಷೇತ್ರಗಳು ರಾಜ್ಯದ ಚಿತ್ತವನ್ನು ತನ್ನತ್ತ ಸೆಳೆದಿದೆ. ಅದರಲ್ಲಿ ಪ್ರಮುಖವಾಗಿ ಕನಕಪುರ, ಮೈಸೂರು, ಮಂಡ್ಯ, ಬೆಳಗಾವಿ, ಚಿಕ್ಕೋಡಿ ಹಾಗೂ ಹಾಸನ ಕ್ಷೇತ್ರಗಳ ಎಲ್ಲರ ಚಿತ್ತವನ್ನು ಕದ್ದಿವೆ. ಹಾಸನ ಏಕೆ ರಾಜ್ಯದ ಚಿತ್ತವನ್ನು ಕದ್ದಿದೆ ಎಂಬುದಕ್ಕೆ ಉತ್ತರ ಇಲ್ಲಿದೆ.

ಎಚ್ಡಿಡಿಗೆ ಸೋಲು
ಹಾಸನ.. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಕರ್ಮಭೂಮಿ. ಈ ಕ್ಷೇತ್ರದಿಂದಲೇ ಗೆದ್ದು ಅವರು ಸಂಸತ್ ಪ್ರವೇಶಿಸಿದ್ದಾರೆ. ಆದರೆ ದೇವೇಗೌಡರಿಗೂ ಈ ಕ್ಷೇತ್ರದಲ್ಲಿ ಒಮ್ಮೆ ಸೋಲು ಎದುರಾಗಿತ್ತು. 1999 ಲೋಕಸಭಾ ಚುನಾವಣೆಯಲ್ಲಿ ಎಚ್.ಡಿ.ದೇವೇಗೌಡ ಈ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದರು. ಇವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟ ಸ್ವಾಮಿ ಗೌಡ ಸ್ಪರ್ಧಿಸಿದ್ದರು.
ಈ ಚುನಾವಣೆಯಲ್ಲಿ ಎಚ್ಡಿ ದೇವೇಗೌಡರಿಗೆ ನಿರಾಸೆ ಕಾದಿತ್ತು. ಅಂದು ಕಾಂಗ್ರೆಸ್ ಅಭ್ಯರ್ಥಿ ಪುಟ್ಟ ಸ್ವಾಮಿ ಗೌಡ್ 398344 ಮತಗಳನ್ನು ಪಡೆದು ಜಯದ ಮಾಲೆಯನ್ನು ಧರಿಸಿದ್ದರು. ಎಚ್ಡಿಡಿ 1.41 ಲಕ್ಷ ಮತಗಳ ಅಂತರದಿಂದ ಸೋಲು ಕಂಡಿದ್ದರು. ಅಂದು ಅಜ್ಜಂದರ ಕದನಕ್ಕೆ ವೇದಿಕೆಯಾಗಿದ್ದ ಈಗ ಮೊಮ್ಮಕ್ಕಳ ಕದನಕ್ಕೆ ವೇದಿಕೆಯಾಗಿದೆ.

ಪ್ರಜ್ವಲ್, ಶ್ರೇಯಸ್ ಫೈಟ್
ಎಚ್ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಇನ್ನು ಕಾಂಗ್ರೆಸ್ನಿಂದ ಪುಟ್ಟ ಸ್ವಾಮಿ ಗೌಡ್ರ ಮೊಮ್ಮಗ ಶ್ರೇಯಾಂಕ್ ಪಾಟೀಲ್. ಈ ಅಂಶದಿಂದಲೇ ಈ ಕ್ಷೇತ್ರ ಈಗ ರಾಜ್ಯದ ಗಮನವನ್ನು ತನ್ನತ್ತ ಸೆಳೆದಿದೆ. 2019ರ ಚುನವಾಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದವು. ಹೀಗಾಗಿ ಈ ಕ್ಷೇತ್ರದಲ್ಲಿ ಪ್ರಜ್ವಲ್ ಜಯ ಸಾಧಿಸಿದ್ದರು.
2024ರ ಚುನಾವಣೆಯಲ್ಲಿ ಸನ್ನಿವೇಶಗಳು ಬದಲಾಗಿವೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಪ್ರಜ್ವಲ್ ಎರಡನೇ ಬಾರಿಗೆ ಲೋಕಸಭೆಯನ್ನು ಪ್ರವೇಶಿಸುವ ಕನಸಿನಲ್ಲಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ವಲ್ ತಂದೆ ಎಚ್ಡಿ ರೇವಣ್ಣ ಅವರ ವಿರುದ್ಧ ಸ್ಪರ್ಧಿಸಿದ್ದ ಶ್ರೇಯಾಂಕ್ ಸೋಲು ಕಂಡಿದ್ದರು. ಈ ಬಾರಿ ಅವರು ಲೋಕಸಭಾ ಚುನಾವಣಾ ಕಣಕ್ಕೆ ಇಳಿದಿದ್ದಾರೆ.
ಪ್ರಜ್ವಲ್ ರೇವಣ್ಣ ಗ್ರಾಮಂತರ ಪ್ರದೇಶಗಳಿಗೆ ಹೋಗಿ ಅವರ ಸಮಸ್ಯೆಗಳನ್ನು ಆಲಿಸುವುದಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ಅಲ್ಲದೆ ಕಳೆದ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಬಂದಿದ್ದು ಬಿಟ್ಟರು ಮತ್ತೆ ನಮ್ಮ ಊರಿನತ್ತ ಗಮನ ಹರಿಸಿಲ್ಲ ಎಂಬ ಆರೋಪವನ್ನು ಮತದಾರರ ಮಾಡುತ್ತಿದ್ದಾರೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮತದಾರ ಯಾರ ಕೈ ಹಿಡಿಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಹಾಸನದಲ್ಲಿ ವೀರಶೈವ ಲಿಂಗಾಯತರು ಹಾಗೂ ದಾಸ ಒಕ್ಕಗಲಿರು ಹೆಚ್ಚಾಗಿದ್ದು ಇವರ ಮತ ನಿರ್ಣಾಯಕ. ಶ್ರೇಯಸ್ ಸಹ ಈ ಸಮಾಜದ ಮುಖಂಡರೊಂದಿಗೆ ಚೆನ್ನಗಿ ಸಂಬಂಧವನ್ನು ಹೊಂದಿದ್ದಾರೆ. ಈ ಎರಡು ಪ್ರಮುಖ ಸಮಾಜದ ಮತಗಳು ತಮ್ಮ ಪಕ್ಷಕ್ಕೆ ಸೆಳೆಯಬೇಕು ಎಂದು ಕಾಂಗ್ರೆಸ್ ಮುಖಂಡರು ಪ್ಲ್ಯಾನ್ ಮಾಡಿಕೊಳ್ಳುತ್ತಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications