ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಲೋಕಸಭೆ ಫಲಿತಾಂಶ: ರಾಜ್ಯದ ಈ ಮೂರು ಘಟಾನುಘಟಿ ನಾಯಕರಿಗೆ ಹಿನ್ನಡೆ
ಬೆಂಗಳೂರು, ಮೇ 23: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಮತಎಣಿಕೆ ಆರಂಭವಾಗಿದ್ದು, ಸದ್ಯದ ಮಾಹಿತಿ ಪ್ರಕಾರ ಮೂರು ಘಟಾನುಘಟಿ ನಾಯಕರಿಗೆ ಹಿನ್ನಡೆಯಾಗಿದೆ.
ಕೋಲಾರದಲ್ಲಿ ಕೆಎಚ್ ಮುನಿಯಪ್ಪ, ಕಲಬುರಗಿಯಲ್ಲಿ ಮಲ್ಲಿಕಾರ್ಜು ಖರ್ಗೆ ಹಾಗೂ ತುಮಕೂರಿನಲ್ಲಿ ಎಚ್ಡಿ ದೇವೇಗೌಡ ಅವರಿಗೆ ಹಿನ್ನಡೆಯಾಗಿದೆ.
ಕರ್ನಾಟಕ ಲೋಕಸಭೆ ಚುನಾವಣಾ ಫಲಿತಾಂಶ LIVE: ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಮುನ್ನಡೆ
ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಜಿಎಸ್ ಬಸವರಾಜು 1196 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕೋಲಾರದಲ್ಲಿ ಮುನಿಸ್ವಾಮಿ, ಹಾಗೂ ಕಲಬುರಗಿಯಲ್ಲಿ ಉಮೇಶ್ ಜಾಧವ್ ಮುನ್ನಡೆ ಸಾಧಿಸಿದ್ದಾರೆ.ಕಲಬುರಗಿಯಲ್ಲಿ 14 ಸಾವಿರ ಮತಗಳ ಅಂತರದಿಂದ ಉಮೇಶ್ ಜಾಧವ್ ಮುನ್ನಡೆ ಸಾಧಿಸಿದ್ದಾರೆ.
Comments
English summary
Lok sabha election results 2019 senior leader kharge, devegowda and muniyappa trailing in Karnataka.