ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಳಿದ ಮೂರು ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ

|
Google Oneindia Kannada News

ಬೆಂಗಳೂರು, ಮಾರ್ಚ್ 29: ಬಾಕಿ ಉಳಿದಿದ್ದ ಮೂರು ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಇದರಿಂದ ಎಲ್ಲ 28 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಂತಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ನಿರೀಕ್ಷೆಯಂತೆಯೇ ಕೊಪ್ಪಳ ಲೋಕಸಭೆ ಕ್ಷೇತ್ರದಲ್ಲಿ ಸಂಗಣ್ಣ ಕರಡಿ ಅವರು ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಸಂಸದ ಸಂಗಣ್ಣ ಕರಡಿ ಅವರಿಗೇ ಟಿಕೆಟ್ ನಿಶ್ಚಯ ಎಂದು ಹೇಳಲಾಗಿದ್ದರೂ, ಅವರ ಹೆಸರನ್ನು ಕೊನೆಯವರೆಗೂ ಘೋಷಣೆ ಮಾಡದೆ ಇರುವುದು ಅಭ್ಯರ್ಥಿಯ ಬದಲಾವಣೆಯ ಸಾಧ್ಯತೆಗಳ ಅನುಮಾನ ಮೂಡಿಸಿತ್ತು. ಶಾಸಕ ಎಸ್. ಶ್ರೀರಾಮುಲು ಇಲ್ಲಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.

ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಬದ್ಧ: ಬಳ್ಳಾರಿ ಅಭ್ಯರ್ಥಿ ದೇವೇಂದ್ರಪ್ಪಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಬದ್ಧ: ಬಳ್ಳಾರಿ ಅಭ್ಯರ್ಥಿ ದೇವೇಂದ್ರಪ್ಪ

ಚಿಕ್ಕೋಡಿ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಉಮೇಶ್ ಕತ್ತಿ ಅವರ ಸಹೋದರ ರಮೇಶ್ ಕತ್ತಿ ಅವರಿಗೆ ನಿರಾಶೆಯಾಗಿದೆ. ಚಿಕ್ಕೋಡಿಯಲ್ಲಿ ಮತ್ತೊಬ್ಬ ಪ್ರಬಲ ಆಕಾಂಕ್ಷಿ ಅಣ್ಣಾ ಸಾಹೇಬ್ ಜೊಲ್ಲೆ ಅವರಿಗೆ ಬಿಜೆಪಿ ಮಣೆ ಹಾಕಿದೆ.ರಾಜ್ಯಸಭೆ ಸದಸ್ಯ ಪ್ರಭಾಕರ ಕೋರೆ ಅವರ ಹೆಸರೂ ಈ ಕ್ಷೇತ್ರದಿಂದ ಕೇಳಿಬಂದಿತ್ತು.

lok sabha elections 2019 BJP announced candidates for 3 constituencies

ಶಿವಮೊಗ್ಗದಲ್ಲಿ ಅಪಾರ ಬೆಂಬಲಿಗರೊಂದಿಗೆ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ ಶಿವಮೊಗ್ಗದಲ್ಲಿ ಅಪಾರ ಬೆಂಬಲಿಗರೊಂದಿಗೆ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ

ರಾಯಚೂರಿನಲ್ಲಿ ಮಾಜಿ ಸಚಿವ ರಾಜ ಅಮರೇಶ್ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ. ಇಲ್ಲಿ ಶಾಸಕ ಶಿವನಗೌಡ ನಾಯಕ್ ಅವರು ತಮ್ಮ ತಾಯಿಗೆ ಟಿಕೆಟ್ ನೀಡಬೇಕೆಂದು ವರಿಷ್ಠರ ಮುಂದೆ ಬೇಡಿಕೆ ಇರಿಸಿದ್ದರು ಎನ್ನಲಾಗಿದೆ. ಇಲ್ಲಿ ಅನಂತರಾಜ್ ನಾಯಕ್ ಮತ್ತು ಮಾಜಿ ಶಾಸಕ ತಿಪ್ಪರಾಜು ನಡುವೆ ಪೈಪೋಟಿ ಇತ್ತು.

English summary
Lok sabha elections 2019: BJP announced candidates for 3 constituencies in Karnataka. Sanganna Karadi got ticket from Koppal, Anna Saheb Jolle from Chikkodi and Raja Amaresh Nayak from Raichur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X