ಲೋಕಸಮರ LIVE: ನಾಮಪತ್ರ ಸಲ್ಲಿಕೆಗೆ ಇಂದು ಕೊನೇ ದಿನ
ತುಮಕೂರು, ಮಾರ್ಚ್ 25: ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಪ್ರಮುಖ ಅಭ್ಯರ್ಥಿಗಳು ಇಂದು(ಮಾರ್ಚ್ 26) ನಾಮಪತ್ರ ಸಲ್ಲಿಸಲಿದ್ದಾರೆ.
ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ
ಏಪ್ರಿಲ್ 18 ರಂದು ಕರ್ನಾಟಕದಲ್ಲಿ ನಡೆಯಲಿರುವ ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾರ್ಚ್ 26 ಕೊನೆಯ ದಿನವಾಗಿರುವ ಕಾರಣ ಹಲವು ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲಿದ್ದಾರೆ.
Today is a historic day..
— Rahul Gandhi (@RahulGandhi) March 25, 2019
It is on this day that the Congress party launched its final assault on poverty.
5 Crore of the poorest families in India, will receive Rs. 72,000 Per Year#NyayForIndia is our dream & our pledge.
The time for change has come.
ಸೋಮವಾರ ನಾಮಪತ್ರ ಸಲ್ಲಿಸುವ ವಿವಿಧ ಪಕ್ಷದ ಅಭ್ಯರ್ಥಿಗಳ ಪಟ್ಟಿ
ಇಂದು ಮಂಗಳವಾರವಾಗಿರುವ ಕಾರಣ, ಹಲವರು ನಿನ್ನೆಯೇ ನಾಮಪತ್ರ ಸಲ್ಲಿಸಿದ್ದರು. ಆದರೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮತ್ತು ಬೆಂಗಳೂರು ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ತಡವಾಗಿ ಘೋಷಿಸಿದ್ದರಿಂದ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ಸಿಗೆ ವಾಪಸ್ ಕೊಟ್ಟ ಜೆಡಿಎಸ್
ಏಪ್ರಿಲ್ 11 ರಿಂದ ಆರಂಭವಾಗಲಿರುವ ಚುನಾವಣೆ ಏಳು ಹಂತಗಳಲ್ಲಿ ನಡೆಯಲಿದ್ದು, ಮೇ 19 ರವರೆಗೆ ನಡೆಯಲಿದೆ.ಮೇ 23 ರಂದು ಫಲಿತಾಂಶ ಹೊರಬೀಳಲಿದೆ.
Karnataka: Chief Minister HD Kumaraswamy's son Nikhil Kumaraswamy files nomination as Congress-JD(S) coalition candidate from Mandya for #LokSabhaElections2019 pic.twitter.com/LM0pWNLXFP
— ANI (@ANI) March 25, 2019