ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಿ ನರೇಂದ್ರ ಮೋದಿಗೆ ಸವಾಲು ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ

|
Google Oneindia Kannada News

Recommended Video

ಮೋದಿಗೆ ಸವಾಲೆಸೆದ ಸಿದ್ಧರಾಮಯ್ಯ..! | Oneindia Kannada

ಬೆಂಗಳೂರು, ಫೆಬ್ರವರಿ 11: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಲು ಹುಬ್ಬಳ್ಳಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಣಕಿದ್ದಾರೆ.

ಹುಬ್ಬಳ್ಳಿಗೆ ಬಂದಿದ್ದ 'ಚೌಕಿದಾರ' ಅವರು ರಫೇಲ್ ಡೀಲ್ ಬಗ್ಗೆ ಮಾತನಾಡಿಲ್ಲವೇಕೆ? ಎಂದು ಪ್ರಶ್ನಿಸಿದ್ದಾರೆ. ರಾಜ್ಯದ ಸಾಲಮನ್ನಾ ಬಗ್ಗೆ ಮಾತನಾಡಿದ್ದಾರೆ, ಆದರೆ, ಮೋದಿ ಸರ್ಕಾರ ಈ ಬಗ್ಗೆ ಯಾವ ಕ್ರಮ ಕೈಗೊಂಡಿದೆ ಎಂಬುದನ್ನು ಯಾಕೆ ಹೇಳಲಿಲ್ಲ ಎಂದು ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.

'ಎಚ್ಡಿಕೆ ರಾತ್ರಿಯೆಲ್ಲ ಅಳುತ್ತಾರೆ': ಹುಬ್ಬಳ್ಳಿಯಲ್ಲಿ ಮೋದಿ 10 ಹೇಳಿಕೆ'ಎಚ್ಡಿಕೆ ರಾತ್ರಿಯೆಲ್ಲ ಅಳುತ್ತಾರೆ': ಹುಬ್ಬಳ್ಳಿಯಲ್ಲಿ ಮೋದಿ 10 ಹೇಳಿಕೆ

ಮೋದಿ ಸರ್ಕಾರವು ಏಕೆ ರೈತರ ಸಾಲಮನ್ನಾ ಮಾಡಿಲ್ಲ. ಸಾಲಮನ್ನಾ ಮಾಡುವಂತೆ ಎರಡು ಬಾರಿ ನಿಯೋಗ ತೆರಳಿದ್ದೆವು. ಆದರೆ, ಇದುವರೆಗೂ ಸಾಲಮನ್ನಾ ಮಾಡಿಲ್ಲ. ನಾವು ಈ ಬಾರಿಯ ಬಜೆಟ್‌ನಲ್ಲಿ ಸಾಲಮನ್ನಾಕ್ಕೆ ಹಣ ಮೀಸಲಿಟ್ಟಿದ್ದೇವೆ. ಮೋದಿಗೆ ಸುಳ್ಳು ಹೇಳುವುದು ಬಿಟ್ಟು ಬೇರೆ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಸಿದ್ದರಾಮಯ್ಯ ಅವರು ಹಾಕಿದ ಸವಾಲು ಏನು?

ಸಿದ್ದರಾಮಯ್ಯ ಅವರು ಹಾಕಿದ ಸವಾಲು ಏನು?

ಈ ನಡುವೆ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಇಪ್ಪತ್ತೆರಡು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೋದಿಯವರು ಕರ್ನಾಟಕಕ್ಕೆ ಬಂದು ನಿಂತುಕೊಳ್ಳಲಿ, ಆಗ ಗೊತ್ತಾಗುತ್ತೆ ಎಂದು ಸವಾಲು ಹಾಕಿದರು. ಸುಳ್ಳು ಭರವಸೆಯಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದರು.

ಮೋದಿ ಅವರು ರೈತರ ಸಾಲ ಮನ್ನಾ ಮಾಡಿಲ್ಲವೇಕೆ?

ಮೋದಿ ಅವರು ರೈತರ ಸಾಲ ಮನ್ನಾ ಮಾಡಿಲ್ಲವೇಕೆ?

ರೈತರ ಸಾಲ ಮನ್ನಾ ಮಾಡುವಂತೆ ಎರಡು ಬಾರಿ ನಿಯೋಗವನ್ನು ಕರೆದುಕೊಂಡು ಮೋದಿ ಅವರ ಬಲಿಗೆ ಹೋಗಿದ್ದೆವು. ಅವರು ಇದುವರೆಗೆ ಈ ಬಗ್ಗೆ ಪ್ರತಿಕ್ರಿಯಿಸಿಲ್ಲ. ನಾವು ಈ ವರ್ಷದ ಬಜೆಟ್‌ನಲ್ಲಿ ಸಾಲ ಮನ್ನಾಕ್ಕೆ ಹಣ ಇಟ್ಟಿದ್ದೇವೆ. ಮೋದಿಯವರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೇನು ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಕರ್ನಾಟಕ ಮುಖ್ಯಮಂತ್ರಿಗೆ ತಮ್ಮ ಸ್ಥಾನ ಉಳಿಸಿಕೊಳ್ಳುವುದೇ ಆಗಿರುತ್ತದೆ: ಮೋದಿಕರ್ನಾಟಕ ಮುಖ್ಯಮಂತ್ರಿಗೆ ತಮ್ಮ ಸ್ಥಾನ ಉಳಿಸಿಕೊಳ್ಳುವುದೇ ಆಗಿರುತ್ತದೆ: ಮೋದಿ

ಮೋದಿಯವರು ಬರೀ ಸುಳ್ಳು ಹೇಳುತ್ತಾರೆ

ಮೋದಿಯವರು ಬರೀ ಸುಳ್ಳು ಹೇಳುತ್ತಾರೆ

ಪ್ರಧಾನಿ ಮೋದಿಯವರು ಬರೀ ಸುಳ್ಳು ಹೇಳುತ್ತಾರೆ. ಹುಬ್ಬಳ್ಳಿಗೆ ಬಂದಿದ್ದ 'ಚೌಕಿದಾರ' ಅವರು ರಫೇಲ್ ಡೀಲ್ ಬಗ್ಗೆ ಮಾತನಾಡಿಲ್ಲವೇಕೆ? ಎಂದು ಪ್ರಶ್ನಿಸಿದ್ದಾರೆ.ಕರ್ನಾಟಕದ ಮೈತ್ರಿ ಸರ್ಕಾರವನ್ನು ದೂಷಿಸುವ ಹಕ್ಕು ಮೋದಿಗಿಲ್ಲ ಎಂದಿದ್ದಾರೆ.

ಯಡಿಯೂರಪ್ಪ ಕೂಡಲೇ ರಾಜೀನಾಮೆ ಕೊಡಬೇಕು

ಯಡಿಯೂರಪ್ಪ ಕೂಡಲೇ ರಾಜೀನಾಮೆ ಕೊಡಬೇಕು

ಯಡಿಯೂರಪ್ಪ ಕೂಡಲೇ ರಾಜೀನಾಮೆ ಕೊಡಬೇಕು. ಅವರಿಗೆ ಸಾರ್ವಜನಿಕ ಜೀವನದಲ್ಲಿರಲು ನೈತಿಕತೆಯಿಲ್ಲ. ಮೊದಲು ಮಿಮಿಕ್ರಿ ಮಾಡಲಾಗಿದೆ. ಸಾಬೀತು ಪಡಿಸಿದ್ರೆ ರಾಜೀನಾಮೆ ಕೊಡ್ತೀನಿ ಅಂದಿದ್ರು. ಈಗ ಆ ಧ್ವನಿ ತಮ್ಮದೇ ಅಂದಿದ್ದಾರೆ. ಹೀಗಾಗಿ‌ ರಾಜೀನಾಮೆ ಕೊಡ್ಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಡಿಯೂರಪ್ಪ ಸಾರ್ವಜನಿಕ ಜೀವನದಲ್ಲಿರಲು ನಾಲಾಯಕ್: ಸಿದ್ದರಾಮಯ್ಯ ಯಡಿಯೂರಪ್ಪ ಸಾರ್ವಜನಿಕ ಜೀವನದಲ್ಲಿರಲು ನಾಲಾಯಕ್: ಸಿದ್ದರಾಮಯ್ಯ

English summary
Lok Sabha elections 2019 : Former CM Siddaramaiah challenges PM Narendra Modi to contest from Karnataka. Siddaramaiah slammed Modi for not uttering a single word about Rafale deal and not implementing loan waiver policy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X