Get Updates
Get notified of breaking news, exclusive insights, and must-see stories!

ಮೋದಿಯವರ ಸಾವು ಕಾಂಗ್ರೆಸ್ ಏಕೆ ಬಯಸುತ್ತದೆ? ಇಲ್ಲಿವೆ ಕೆಲವು ಅಂಶಗಳು ಎಂದ ವಿಜಯೇಂದ್ರ

ಬೆಂಗಳೂರು, ಮೇ 02: ಪ್ರಧಾನಿ ನರೇಂದ್ರ ಮೋದಿ ಸತ್ತರೆ, ಈ ದೇಶದಲ್ಲಿ ಮುಂದೆ ಯಾರೂ ಪಿಎಂ ಆಗುವುದಿಲ್ಲವೇ? ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೂ ಇಲ್ಲವೇ? ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ನಾಲಗೆ ಹರಿಬಿಟ್ಟಿದ್ದಾರೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಬಿ ವೈ ವಿಜಯೇಂದ್ರ ಅವರು ಎಕ್ಸ್ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು,ರಾಹುಲ್ ಗಾಂಧಿ ಮನಸ್ಥಿತಿ ರಾಜು ಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ" ಸಾವುಗಳನ್ನು ಆಧರಿಸಿ ಅಧಿಕಾರಗಳನ್ನು ಗಳಿಸಿದ ಹಿನ್ನಲೆಯ ಕಾಂಗ್ರೆಸ್ಸಿಗರು ಅಮೂಲ್ಯ ಜೀವಗಳ ಸಾವುಗಳಿಗಾಗಿ ಚಡಪಡಿಸುವುದು ಅವರ ಹೀನ ಸಂಸ್ಕೃತಿಯ ದ್ಯೋತಕವಾಗಿದೆ ಎಂದು ಕಿಡಿಕಾರಿದ್ದಾರೆ.

Lok Sabha Poll BJP State President B Y Vijayendra Attacked The Congress

ಮೋದಿಯವರ ಸಾವು ಕಾಂಗ್ರೆಸ್ ಏಕೆ ಬಯಸುತ್ತದೆ?

•ಆರ್ಟಿಕಲ್ 370 ರದ್ದುಗೊಳಿಸಿ, ಭಾರತದ ಕಿರೀಟ ಕಾಶ್ಮೀರವನ್ನು ಉಳಿಸಿದ್ದಕ್ಕಾಗಿಯೇ?

•ಐದು ಶತಮಾನಗಳ ಭಾರತೀಯರ ಕನಸು ಈಡೇರಿಸಲು ರಾಮಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿದ ಕಾರಣಕ್ಕಾಗಿಯೇ?

•ದೇಶವನ್ನು ಮುಕ್ಕಿ ತಿನ್ನುತ್ತಿದ್ದ ಭಯೋತ್ಪಾದಕತೆಯನ್ನು ಬೇರು ಸಮೇತ ಕಿತ್ತೊಗೆದು ರಾಷ್ಟ್ರವನ್ನು ರಕ್ಷಿಸಿದ ಕಾರಣಕ್ಕಾಗಿಯೇ?

•ವಿಶ್ವದಲ್ಲಿ ಭಾರತವನ್ನು ಆರ್ಥಿಕವಾಗಿ 5 ನೇ ಸ್ಥಾನಕ್ಕೇರಿಸಿ ಶಕ್ತಿಶಾಲಿ ರಾಷ್ಟ್ರ ನಿರ್ಮಿಸಿದ ಕಾರಣಕ್ಕಾಗಿಯೇ?

•ಅಭಿವೃದ್ಧಿಯ ಓಟದಲ್ಲಿ ಜಾಗತಿಕ ಪೈಪೋಟಿಯ ನಡುವೆ ಭಾರತವನ್ನು ಮುಂಚೂಣಿ ಸ್ಥಾನದಲ್ಲಿ ತಂದು ನಿಲ್ಲಿಸಿದ ಕಾರಣಕ್ಕಾಗಿಯೇ?

•ದೇಶದ ಕಟ್ಟಕಡೆಯ ಪ್ರಜೆಯೂ ಸ್ವಾಭಿಮಾನದ ಬದುಕು ರೂಪಿಸಲು ಹತ್ತು ಹಲವು ಯೋಜನೆಗಳನ್ನು ಸಮರ್ಪಿಸಿದ ಕಾರಣಕ್ಕಾಗಿಯೇ?

•ದಕ್ಷ ಹಾಗೂ ಪಾರದರ್ಶಕ ಆಡಳಿತ ನೀಡಿ ಕಪ್ಪು ಚುಕ್ಕೆ ಇಲ್ಲದ ಪರಿಶುಭ್ರ ಆಡಳಿತ ನೀಡಿ ಜನರಿಂದ 'ಸೈ' ಅನಿಸಿಕೊಂಡ ಕಾರಣಕ್ಕಾಗಿಯೇ?

ಭಾರತೀಯ ಜನತಾ ಪಾರ್ಟಿ ವ್ಯಕ್ತಿ ಆಧಾರಿತವಾಗಿ ಬೆಳೆದುದ್ದಲ್ಲ, ಸಿದ್ಧಾಂತ, ತತ್ವಗಳನ್ನು ಆಧರಿಸಿ ರಾಷ್ಟ್ರ ಭಕ್ತ ಕಾರ್ಯಕರ್ತರ ಪರಿಶ್ರಮದ ಫಲವಾಗಿ ಬೆಳೆದು ನಿಂತಿರುವ ಬೃಹತ್ ರಾಜಕೀಯ ವೃಕ್ಷ. ದಿವಂಗತ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ, ಮುರುಳಿ ಮನೋಹರ್ ಜೋಶಿ ಅವರಂತಹ ಸಾಲು ಸಾಲು ನಾಯಕರನ್ನು ದೇಶಕ್ಕೆ ಸಮರ್ಪಣೆ ಮಾಡಿದ ಪಕ್ಷ , ಈ ನಿಟ್ಟಿನಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಗಟ್ಟಿಯಾಗಿ ಪಡಿಮೂಡಿದ ದೇಶ ಮೆಚ್ಚಿದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಜೀ, ಸಮರ್ಥ ಆಡಳಿತಗಾರನಾಗಿ ದೇಶವನ್ನು ಬಲಿಷ್ಠ ಗೊಳಿಸಿದ ಮಹಾನ್ ನೇತಾರ' ಎನ್ನುವ ಕಾರಣಕ್ಕಾಗಿ ಈ ದೇಶದ ಜನ ಮತ್ತೊಮ್ಮೆ ಅವರ ನಾಯಕತ್ವವನ್ನು ಬಯಸಿ ಪ್ರಧಾನಿಯನ್ನಾಗಿಸಲು ಸಂಕಲ್ಪ ತೊಟ್ಟಿದ್ದಾರೆ , ಇದನ್ನು ಸಹಿಸದ ಕಾಂಗ್ರೆಸ್ಸಿಗರ ಬಾಯಲ್ಲಿ ಹತಾಶೆ, ಅಪಶಕುನದ ಮಾತುಗಳಲ್ಲದೇ ಇನ್ನೇನು ಬರಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಕೊಳಕು ಮನಸ್ಸುಗಳು ಮಾತ್ರ ವಿಕೃತಿಯ ಮಾತನಾಡಲು ಸಾಧ್ಯ, ಅಂತದ್ದೇ ಸಾಲಿಗೆ ಸೇರಿರುವ ಶಾಸಕ (ರಾಜು )ಕಾಗೆ ಬಾಯಿಂದ ಮೋದಿಯವರ ಕುರಿತು ಕಾಂಗ್ರೆಸ್ಸಿಗರು ಅಪಶಕುನವನ್ನು ಉಗುಳಿಸಿದ್ದಾರೆ. "ದೈವ ಬಲ,ಜನಾಶೀರ್ವಾದದ ಶಕ್ತಿ ಭಾರತಮಾತೆಯ ಮಹಾನ್ ಸುಪುತ್ರ ಮೋದಿಯವರ ರಕ್ಷಣೆಗೆ ನಿಂತಿದೆ 'ಚುನಾವಣೆಯ ಫಲಿತಾಂಶ'ಅದನ್ನು ಪ್ರತಿಫಲಿಸಲಿದೆ ಎಂದು ವಾಗ್ದಾಳಿ ನಡೆಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+