ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
ಬೆಂಗಳೂರು, ಏಪ್ರಿಲ್ 25: ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ಡಿ.ಕೆ.ಸುರೇಶ್ ಅವರ ಆಪ್ತರ ನಿವಾಸಗಳ ಮೇಲೆ ಬುಧವಾರ ಐಟಿ ದಾಳಿ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗಂಗಾಧರ್ ಅವರ ಜತೆಗೆ ಗೊಟ್ಟಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್, ಸುರೇಶ್ ಅವರ ಆಪ್ತ ಸಹಾಯಕ ಸುಜಯ್, ಚಂದ್ರು, ಲಕ್ಷ್ಮಣ್, ಬಾಬು ಸೇರಿದಂತೆ ಹಲವರ ಮನೆ ಮೇಲೆ ದಾಳಿ ಮಾಡಲಾಗಿದೆ.
ಕನಕಪುರದಲ್ಲಿ ಪ್ರಚಾರ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಚುನಾವಣಾ ಪ್ರಚಾರಕ್ಕೆ ಬರದಂತೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಐಟಿ ಇಲಾಖೆ ಉದ್ದೇಶಪೂರ್ವಕವಾಗಿ ದಾಳಿ ನಡೆಸುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಹಣ ಹಂಚುತ್ತಿಲ್ಲವೇ? ಅವರ ಮೇಲೆ ಏಕೆ ದಾಳಿ ನಡೆಯುತ್ತಿಲ್ಲ? ಐಟಿ ಇಲಾಖೆ ಗುರಿಪಡಿಸಲು ಜನರ ಪಟ್ಟಿಯೊಂದಿಗೆ ಸಿದ್ಧವಾಗಿದೆ ಮತ್ತು ಅವರು ಅದನ್ನು ಅನುಸರಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಡಿ.ಕೆ.ಸುರೇಶ್ ಅವರ ಚಾಲಕನ ಮನೆ ಮೇಲೆ ದಾಳಿ ನಡೆಸಿ ಅವರ ಪತ್ನಿ ಮತ್ತು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶಿವಕುಮಾರ್ ಆರೋಪಿಸಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ನಡೆದ ಯಾವುದೇ ದಾಳಿಯಲ್ಲಿ ಐಟಿ ಇಲಾಖೆಗೆ ಯಾವುದೇ ನಗದು ಪತ್ತೆಯಾಗಿಲ್ಲ. ಇದು ನಮ್ಮ ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸುವ ಉದ್ದೇಶಪೂರ್ವಕ ತಂತ್ರವಾಗಿದೆ. ಅವರು ಚುನಾವಣಾ ಸೋಲಿನ ಭಯದಿಂದ ನಿರ್ದಿಷ್ಟವಾಗಿ ಬೆಂಗಳೂರು ಗ್ರಾಮಾಂತರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.
ಉದ್ದೇಶಪೂರ್ವಕವಾಗಿ ನಮ್ಮ ಬ್ಲಾಕ್ ಅಧ್ಯಕ್ಷರ ಮನೆಗಳ ಮೇಲೆ ಐಟಿ ದಾಳಿ ನಡೆಯುತ್ತಿವೆ. ನಮಗೆ ಕೆಟ್ಟ ಹೆಸರು ತರಬೇಕು, ನಮ್ಮ ಕಾರ್ಯಕರ್ತರು ಚುನಾವಣೆಯಲ್ಲಿ ಭಾಗವಹಿಸದಂತೆ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಬಿಜೆಪಿ ಹಾಗೂ ದಳದವರು ಯಾರೂ ಹಣ ಹಂಚುತ್ತಿಲ್ಲವೇ? ಅವರ ಮನೆಗಳ ಮೇಲೆ ಯಾಕೆ ದಾಳಿಯಾಗುತ್ತಿಲ್ಲ? ಅವರ ವಿಚಾರದಲ್ಲಿ ಐಟಿ ಅಧಿಕಾರಿಗಳು ಕಣ್ಣುಮುಚ್ಚಿ ಕೂತಿದ್ದಾರಾ? ಅವರು ಯಾರ ಮನೆ ಮೇಲೆ ದಾಳಿ ನಡೆಯಬೇಕು ಎಂದು ಪಟ್ಟಿ ಮಾಡಿದ್ದಾರೆ.
ಬೇರೆ ಕಡೆಗಳಲ್ಲಿ ಗುತ್ತಿಗೆದಾರರ ಮನೆಯಲ್ಲಿ ಹಣ ಸಿಕ್ಕರೂ ಇದು ಡಿ.ಕೆ. ಶಿವಕುಮಾರ್ ಅವರ ಹಣ ಎಂದು ಹೇಳಲು ಒತ್ತಾಯಿಸುತ್ತಿದ್ದಾರೆ. ಇನ್ನು ನಮ್ಮ ಸುರೇಶ್ ಅವರ ಚಾಲಕನ ಮನೆ ಮೇಲೆ ದಾಳಿ ಮಾಡಿ ಆತನ ಹೆಂಡತಿ ಜುಟ್ಟನ್ನು ಎಳೆದಾಡಿದ್ದಾರೆ, ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾರೆ. ಐಟಿ ಅಧಿಕಾರಿಗಳಿಗೆ ಎಲ್ಲೂ ಹಣ ಸಿಕ್ಕಿಲ್ಲ. ಕೇವಲ ಚುನಾವಣೆಯಲ್ಲಿ ಭಾಗವಹಿಸದಂತೆ ಮಾಡಲು ಈ ರೀತಿ ಮಾಡುತ್ತಿದ್ದಾರೆ" ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ದಾಳಿ ಮಾಡಲಾಗುತ್ತಿದ್ದು, ಬೆದರಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರ ಅಭ್ಯರ್ಥಿ ಸೋಲುತ್ತಾರೆ ಎಂಬ ಕಾರಣಕ್ಕೆ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications