Get Updates
Get notified of breaking news, exclusive insights, and must-see stories!

ಮಂಡ್ಯಗೆ ಕಡೆಗೂ ಬರಲೇ ಇಲ್ಲ ಸೊಸೆ: ಸುಮಲತಾ ಪ್ರಚಾರಕ್ಕೆ ಬಂದಿಲ್ಲ ಯಾಕೆ? ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು, ಏಪ್ರಿಲ್‌ 27: ಲೋಕಸಭಾ ಚುನಾವಣೆ ಹಿನ್ನಲೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಏಪ್ರಿಲ್‌ 26 ರಂದು ಕರ್ನಾಟಕದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಮತದಾನ ನಡೆದಿದೆ. ಆದರೆ, ಮಂಡ್ಯ ಲೋಕಸಭಾ ಕ್ಷೇತ್ರ ದಳಪತಿಗಳಿಗೆ ಪ್ರತಿಷ್ಠೆಯಾಗಿದ್ದು, ಮೈತ್ರಿ ಧರ್ಮಪಾಲನೆಯಲ್ಲಿ ಅಪಸ್ವರ ಕೇಳಿ ಬಂದಿದೆ.

ಹೌದು, ಲೋಕಸಭಾ ಚುನಾವಣೆಯಲ್ಲಿ ಈ ಬಾರೀ ಸುಮಲತಾ ಅಂಬರೀಶ್‌ ಅವರು ಕ್ಷೇತ್ರ ಬಿಟ್ಟುಕೊಟ್ಟಿದ್ದು, ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್‌ ಡಿ ಕುಮಾರಸ್ವಾಮಿ ಪರ ಪ್ರಚಾರ ಮಾಡದೇ ದೂರ ಉಳಿದಿದ್ದು, ಕೊನೆಗೂ ಮಂಡ್ಯ ಕ್ಷೇತ್ರದಲ್ಲಿ ಪ್ರಚಾರ ಮಾಡದೇ ದೂರ ಉಳಿದಿದ್ದಾರೆ.

Lok Sabha Poll HD Kumaraswamy Reaction About Sumalatha

ಮಂಡ್ಯ ಕ್ಷೇತ್ರವನ್ನ ಪಡೆಯುವ ನಿಟ್ಟಿನಲ್ಲಿ ಈ ಹಿಂದೆ ಹೆಚ್‌ ಡಿ ಕುಮಾರಸ್ವಾಮಿ ಅವರು ಮಂಡ್ಯ ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಅವರ ಭೇಟಿ ಮಾಡಿದ್ರು. ಅಲ್ಲದೇ ನಾನು ಸುಮಲತಾ ಅಂಬರೀಶ್‌ ಅವರನ್ನ ಪ್ರಚಾರಕ್ಕೆ ಆಹ್ವಾನ ನೀಡಿದ್ದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇತ್ತ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರು, ಹಾಸನದಲ್ಲಿ ಕೆಲವು ಬಿಜೆಪಿ ನಾಯಕರ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯವಿಲ್ಲ ಎಂದು ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ರು, ಇದೀಗ ಸುಮಲತಾ ಅವರು ನನಗೆ ಪ್ರಚಾರಕ್ಕೆ ಆಹ್ವಾನ ನೀಡಿಲ್ಲ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ಪರ ಪ್ರಚಾರಕ್ಕೆ ಯಾರು ನನ್ನ ಕರೆಯಲಿಲ್ಲ ಎಂಬ ಸುಮಲತಾ ಹೇಳಿಕೆ ಕುರಿತು ಕುಮಾರಸ್ವಾಮಿ ಮಾತನಾಡಿ, ನಾನು ಅವರ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೇನೆ. ಇದಕ್ಕಿಂತ ಇನ್ನೇನು ಮಾಡಬೇಕು ನಾನು. ಅಂಬರೀಶ್ ಅಭಿಮಾನಿಗಳು ಸಹ ನನಗೆ ಸಹಾಯ ಮಾಡಿದ್ದಾರೆ. ನಾನು ಮೈಸೂರಿನ ಮೋದಿ ಕಾರ್ಯಕ್ರಮದಲ್ಲೂ ಕೂಡ ಸುಮಲತಾ ಅವರನ್ನಎರಡು ದಿನ ಪ್ರಚಾರಕ್ಕೆ ಬರುವಂತೆ ಕೋರಿದ್ದೆ ಎಂದು ಹೇಳಿದ್ದಾರೆ.

ನಾನು ಗೆದ್ದಂತಹ ಸೀಟು ತ್ಯಾಗ ಮಾಡಿದ್ದೇನೆ: ಸುಮಲತಾ

ಮೋದಿಯವರು ಪ್ರಧಾನಿಯಾಗಬೇಕೆಂಬ ಉದ್ದೇಶದಿಂದ ನಾನು ಗೆದ್ದಂತಹ ಸೀಟ್ ತ್ಯಾಗ ಮಾಡಿದ್ದೀನಿ. ಈ ಹಂತದಲ್ಲಿ ಅಂಬರೀಶ್ ಅವರ ಪಡೆಯ ಶಕ್ತಿಯನ್ನು ಕೂಡ ಎನ್‌ಡಿಎಗೆ ಕೊಟ್ಟಿದ್ದೇವೆ. ಮೈತ್ರಿ ಪರ ನಮ್ಮ ಬೆಂಬಲಿಗರು ನಿಷ್ಠೆಯಿಂದ ಕೆಲಸ ಮಾಡಿದ್ದಾರೆ ಎಂದು ಮಂಡ್ಯ ಹಾಲಿ ಸಂಸದ ಸುಮಲತಾ ಅಂಬರೀಶ್‌ ಹೇಳಿದ್ದಾರೆ.

ನನಗೆ ಜನತಾ ದಳದ ನಾಯಕರು ಯಾವುದೇ ಸಭೆ, ಪ್ರಚಾರಕ್ಕೆ ಆಹ್ವಾನಿಸಿಲ್ಲ. ಅವರು ಕರೆದು ನಾನು ಬರದೇ ಇದ್ದರೆ ತಪ್ಪಾಗುತ್ತಿತ್ತು. ಆದರೆ, ಅವರು ನನ್ನ ಕರೆದೇ ಇಲ್ಲ. ಇನ್ನು ಪ್ರಚಾರಕ್ಕೆ ಬರಲಿಲ್ಲ ಎಂಬುದಕ್ಕೆ ಅರ್ಥವಿದೆಯೇ ಎಂದು ಸುಮಲತಾ ಮರು ಪ್ರಶ್ನಿಸಿದರು. ನಾನಿಲ್ಲದೆ ಅವರು ಚುನಾವಣೆ ಮಾಡಿಕೊಳ್ಳುತ್ತೇವೆಂಬ ಭಾವನೆ ಇರಬಹುದು. ದೇವೇಗೌಡ ಅವರು ಹೇಳಿಕೆ ನೀಡಿದ ನಂತರ ನನಗೆ ಒಂದಷ್ಟು ಕರೆ ಬಂದವು. ನನ್ನ ಯಾವುದೇ ಪ್ರಚಾರಕ್ಕೆ ಕರೆದಿಲ್ಲ. ಕುಮಾರಸ್ವಾಮಿ ನಮ್ಮ ಮನೆಗೆ ಬಂದು ಹೋದ ನಂತರ ನನಗೆ ಒಂದು ಫೋನ್ ಮಾಡಿ ಪ್ರಚಾರಕ್ಕೆ ಬನ್ನಿ ಎಂದು ಕೇಳಿಲ್ಲ. ಇಷ್ಟು ತ್ಯಾಗ ಮಾಡಿಯೂ ನನ್ನ ಕರೆಯಲಿಲ್ಲ ಎನ್ನುವುದು ನನಗೆ ಬೇಸರವಾಯಿತು. ಹಾಗಿದ್ದರೆ ನಾನು ಮಾಡಿದ್ದು ತಪ್ಪಾ? ಎಂದು ಪ್ರಶ್ನಿಸಿದರು.

ನನ್ನ ಅಭಿಮಾನಿಗಳು ಒಂದಷ್ಟು ಜನ ವಿರೋಧ ವ್ಯಕ್ತಪಡಿಸಿದರು. ಸೋತ ಸೀಟನ್ನೇ ಬಿಡಲ್ಲ, ಅಂತಹದರಲ್ಲಿ ನಾನು ಗೆದ್ದ ಸೀಟು ಬಿಟ್ಟು ಕೊಟ್ಟಿದ್ದಿನಿ. ಅವರ ಮನಸ್ಸಿನಲ್ಲಿ ಏನಿದೆ ಎಂಬುದು ನನಗೆ ಗೊತ್ತಿಲ್ಲ. ಆದರೆ, ಅವರು ನನ್ನ ಪ್ರಚಾರಕ್ಕೆ ಕರೆದಿಲ್ಲ. ಪಕ್ಷ ಸೂಚನೆ ನೀಡಿದ ಕಡೆ ಹೋಗಿ ನಾನು ಪ್ರಚಾರಕ್ಕೆ ಹೋಗಿದ್ದೇನೆ. ಮಂಗಳೂರುವರೆಗೂ ಹೋಗಿದ್ದೀನಿ, ಮಂಡ್ಯಕ್ಕೆ ಬರುತ್ತಿರಲಿಲ್ಲವೇ? ಆ ದಿನ ನನ್ನ ಸೀಟನ್ನ ಬಿಟ್ಟಾಗಲೂ ಬೇಸರವಾಗಿರಲಿಲ್ಲ. ಆದರೆ, ದೇವೇಗೌಡರ ಹೇಳಿಕೆ ನನಗೆ ಬೇಸರ ತರಿಸಿದೆ. ಎನ್‌ಡಿಎ, ಬಿಜೆಪಿ ಗೆಲ್ಲಬೇಕು ಎಂಬುದು ಇದೆ. ಮಂಡ್ಯದಲ್ಲೂ ಒಳ್ಳೆಯ ಟ್ರೆಂಡ್ ಇದೆ ಎಂದು ಮಾತನಾಡುತ್ತಾರೆ. ರಾಜ್ಯದ 28 ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳು ಗೆಲ್ಲಬೇಕು ಎಂಬುದು ನನ್ನ ಆಶಯ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+