ನಟ ದರ್ಶನ್ ಪ್ರಚಾರ ನಡೆಸಿದ್ದ ಕೈ ಅಭ್ಯರ್ಥಿ ಹೀನಾಯ ಸೋಲು; ಕುಮಾರಸ್ವಾಮಿ ಭರ್ಜರಿ ಗೆಲುವು
ಮಂಡ್ಯ, ಜೂನ್ 04: ಕಳೆದ ಬಾರಿ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸಿ ಸುಮಲತಾ ಅಂಬರೀಶ್ ಅವರು ಗೆಲುವು ಸಾಧಿಸಿದ್ದರು. ಈ ಬಾರಿ ಬಿಜೆಪಿ ಜೊತೆಗೆ ಮೈತ್ರಿಯಾದ ಹಿನ್ನೆಲೆ ಮಂಡ್ಯ ಕ್ಷೇತ್ರದಿಂದ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಅವರು ಪ್ರಚಾರ ನಡೆಸಿದ್ದರು. ಇದೀಗ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಹೀನಾಯವಾಗಿ ಸೋಲು ಅನುಭವಿಸಿದ್ದಾರೆ.
28 ಲೋಕಸಭಾ ಕ್ಷೇತ್ರಗಳಲ್ಲಿ 28 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿತ್ತು. ಅದರಂತೆ ಅಬ್ಬರದ ಪ್ರಚಾರ ಹಾಗೂ ತಂತ್ರಗಾರಿಕೆಯನ್ನ ಕಮಲ-ದಳ ನಾಯಕರ ತಂತ್ರಗಾರಿಕೆ ಕೊನೆಗೂ ಯಶಸ್ವಿಯಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರ ದಳಪತಿಗಳ ಭದ್ರಕೋಟೆಯಾಗಿದ್ದು, 2019 ರ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದ ದಳಪತಿಗಳು ಈ ಬಾರಿ ಕ್ಷೇತ್ರವನ್ನ ವಶಪಸಿಕೊಳ್ಳುವ ನಿಟ್ಟಿನಲ್ಲಿ ಹಲವು ತಂತ್ರಗಳನ್ನ ನಡೆಸಿದ್ದು, ಕೊನೆಗೂ ಮಂಡ್ಯ ಜನತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಕೈ ಹಿಡಿದಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರ ದಳಪತಿಗಳಿಗೆ ಪ್ರತಿಷ್ಠೆಯಾಗಿದ್ದು, ಆರಂಭದಲ್ಲೇ ಮೈತ್ರಿ ಧರ್ಮಪಾಲನೆಯಲ್ಲಿ ಅಪಸ್ವರ ಕೇಳಿ ಬಂದಿತ್ತು. ಆದರೂ ಸಹ ಮಾಜಿ ಮುಖ್ಯಮಂತ್ರಿ ಏಕಾಂಕಿಯಾಗಿ ಪಕ್ಷ ಕಾರ್ಯಕರ್ತರ ಜೊಡೆಗೂಡಿ ಪ್ರಚಾರವನ್ನ ನಡೆಸಿ, ಕೊನೆಗೂ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ಕುಮಾರಸ್ವಾಮಿ ಅವರು ಕಣಕ್ಕಿಳಿಸಿದ್ರೆ, ಇತ್ತ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ಕಣದಲ್ಲಿದ್ರು. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು 6,02, 658 ಮತಗಳನ್ನ ಗಳಿಸಿದ್ರೆ, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು, 3,81,158 ಮತಗಳನ್ನ ಪಡೆದಿದ್ದಾರೆ.ಒಟ್ಟು ಮಂಡ್ಯದಲ್ಲಿ 2,21,527 ಮತಗಳ ಅಂತರದಿಂದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ.
ಮಂಡ್ಯ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಸಂಸದ ಸುಮಲತಾ ಅಂಬರೀಶ್ ಅವರು ಮೈತ್ರಿ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರ ಪರವಾಗಿ ಮಂಡ್ಯ ಕ್ಷೇತ್ರದಲ್ಲಿ ಪ್ರಚಾರದಿಂದ ದೂರು ಉಳಿದಿದ್ರು. ಅಲ್ಲದೇ ಸುಮಲತಾ ಅಂಬರೀಶ್ ಅವರನ್ನ ಭೇಟಿ ಮಾಡಿ ಕುಮಾರಸ್ವಾಮಿ ಮಾತುಕತೆ ನಡೆಸಿದರು. ಸುಮಲತಾ ಅಂಬರೀಶ್ ಅವರು ಮಾತ್ರ ಮಂಡ್ಯ ಕ್ಷೇತ್ರದಲ್ಲಿ ಪ್ರಚಾರ ಮಾಡದೇ ದೂರ ಉಳಿದಿದ್ದರು, ಕಳೆದ ಬಾರಿ ಕಳೆದು ಕೊಂಡ ಕ್ಷೇತ್ರವನ್ನ ಮರಳಿ ಪಡೆಯಬೇಕು ಎನ್ನುವ ನಿಟ್ಟಿನಲ್ಲಿ ಪಣತೊಟ್ಟ ಕುಮಾರಸ್ವಾಮಿ ಅಬ್ಬರದ ಪ್ರಚಾರವನ್ನ ನಡೆಸಿ, ಬರೋಬ್ಬರಿ ಅಂತರಗಳಿಂದ ಜಯಗಳಿಸಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications