Congress Candidates List : 21 ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ ನೋಡಿ
ಬೆಂಗಳೂರು, ಮಾರ್ಚ್ 12: ಲೋಕಸಭಾ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಕರ್ನಾಟಕದ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಉಳಿದ ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆಯೇ ದೊಡ್ಡ ಕಗ್ಗಂಟಾಗಿದೆ.
ಈಗಾಗಲೇ ಯಾವುದೇ ಗೊಂದಲಗಳಿಲ್ಲದ ಏಳು ಕ್ಷೇತ್ರಗಳ ಟಿಕೆಟ್ ಫೈನಲ್ ಆಗಿದ್ದು, ಉಳಿದ 21 ಕೇತ್ರದಲ್ಲಿ ಹಲವು ಆಕಾಂಕ್ಷಿಗಳು ಟಿಕೆಟ್ ಗಾಗಿ ಲಾಬಿ ನಡೆಸಿದ್ದು, ಕೆಲವು ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಯ ಕೊರತೆ ಎದುರಾಗಿದೆ. ಈ ಹಿನ್ನೆಲೆ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಹಲವು ನಾಯಕರ ಜೊತೆಗೆ ಸಭೆ ನಡೆಸಿದ್ದು, ಸಭೆಯಲ್ಲಿ 21 ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಚರ್ಚೆ ನಡೆದಿದೆ. ಈ ಆಕಾಂಕ್ಷಿಗಳ ಪಟ್ಟಿಯನ್ನ ಹೈಕಮಾಂಡ್ ಮುಂದೆ ಇಟ್ಟಿದ್ದು, ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತೆ ಎಂಬುದನ್ನ ಕಾದುನೋಡ್ಬೇಕಾಗಿದೆ.

ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
* ಶಿವಮೊಗ್ಗ- ಗೀತಾ ಶಿವರಾಜ್ ಕುಮಾರ್
* ತುಮಕೂರು- ಎಸ್ಪಿ ಮುದ್ದಹನುಮೇಗೌಡ
* ಮಂಡ್ಯ- ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
* ಹಾಸನ- ಶ್ರೇಯಸ್ ಪಟೇಲ್
* ಬೆಂಗಳೂರು ಗ್ರಾಮಾಂತರ- ಡಿಕೆ ಸುರೇಶ್
* ವಿಜಯಪುರ- ಎಚ್ಆರ್ ಅಲ್ಗೂರ್
* ಹಾವೇರಿ: ಆನಂದ್ ಸ್ವಾಮಿ ಗಡ್ಡ ದೇವರಮಠ
21 ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಕಾಂಕ್ಷಿಗಳ ಪಟ್ಟಿ ಇಲ್ಲಿದೆ.
ಚಿಕ್ಕೋಡಿ ಲೋಕಸಭಾ ಕ್ಷೇತ್ರ
ಪ್ರಕಾಶ್ ಹುಕ್ಕೇರಿ, ಹಾಲಿ ಎಂಎಲ್ಸಿ
ಗಣೇಶ್ ಹುಕ್ಕೇರಿ, ಶಾಸಕ
ಪ್ರಿಯಾಂಕಾ ಜಾರಕಿಹೊಳಿ, ಸತೀಶ್ ಜಾರಕಿಹೊಳಿ ಪುತ್ರಿ
ಬೆಳಗಾವಿ ಲೋಕಸಭಾ ಕ್ಷೇತ್ರ
ಮೃಣಾಲ್ ಹೆಬ್ಬಾಳಕರ್, ಲಕ್ಷ್ಮೀ ಹೆಬ್ಬಾಳಕರ್ ಪುತ್ರ
ಡಾ. ಗಿರೀಶ್ ಸೋನ್ವಾಲ್ಕರ್, ಸತೀಶ್ ಜಾರಕಿಹೊಳಿ ಆಪ್ತ
ಬಾಗಲಕೋಟೆ ಲೋಕಸಭಾ ಕ್ಷೇತ್ರ
ವೀಣಾ ಕಾಶಪ್ಪನವರ್
ಆನಂದ್ ನ್ಯಾಮಗೌಡ, ಮಾಜಿ ಶಾಸಕ
ಕಲಬುರಗಿ ಲೋಕಸಭಾ ಕ್ಷೇತ್ರ
ಡಾ. ರಾಧಾಕೃಷ್ಣ
ರಾಯಚೂರು ಲೋಕಸಭಾ ಕ್ಷೇತ್ರ
ಕುಮಾರ್ ನಾಯ್ಕ್, ನಿವೃತ್ತ ಐಎಎಸ್
ರವಿ ಪಾಟೀಲ್, ಸತೀಶ್ ಜಾರಕಿಹೊಳಿ ಅಳಿಯ
ಬೀದರ್ ಲೋಕಸಭಾ ಕ್ಷೇತ್ರ
ರಾಜಶೇಖರ್ ಪಾಟೀಲ್ ಹುಮ್ನಾಬಾದ್
ಸಾಗರ ಖಂಡ್ರೆ, ಈಶ್ವರ್ ಖಂಡ್ರೆ ಪುತ್ರ
ಕೊಪ್ಪಳ ಲೋಕಸಭಾ ಕ್ಷೇತ್ರ
ರಾಜಶೇಖರ್ ಹಿಟ್ನಾಳ್
ಅಮರೇಗೌಡ ಭಯ್ಯಾಪುರ, ಮಾಜಿ ಶಾಸಕ
ಬನಸಗೌಡ ಬಾದರ್ಲಿ
ಬಳ್ಳಾರಿ ಲೋಕಸಭಾ ಕ್ಷೇತ್ರ
ಸೌಪರ್ಣಿಕಾ ತುಕಾರಾಂ
ವಿ.ಎಸ್ ಉಗ್ರಪ್ಪ
ಧಾರವಾಡ ಲೋಕಸಭಾ ಕ್ಷೇತ್ರ
ಶಿವಲೀಲಾ ಕುಲಕರ್ಣಿ, ವಿನಯ್ ಕುಲಕರ್ಣಿ ಪತ್ನಿ
ದಾವಣಗೆರೆ ಲೋಕಸಭಾ ಕ್ಷೇತ್ರ
ಪ್ರಭಾ ಮಲ್ಲಿಕಾರ್ಜುನ್, ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಪತ್ನಿ
ಜಿಬಿ ವಿನಯ್ ಕುಮಾರ್, ಕೆಪಿಸಿಸಿ ಸದಸ್ಯ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ
ಜಯಪ್ರಕಾಶ್ ಹೆಗ್ಡೆ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ
ವಿನಯದ ಕುಮಾರ್ ಸೊರಕೆ
ರಮಾನಾಥ್ ರೈ
ಚಿತ್ರದುರ್ಗ ಲೋಕಸಭಾ ಕ್ಷೇತ್ರ
ಬಿಎನ್. ಚಂದ್ರಪ್ಪ
ವಿನಯ್ ತಿಮ್ಮಾಪುರ, ಸಚಿವ ಆರ್.ಬಿ ತಿಮ್ಮಾಪುರ ಪುತ್ರ
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ
ಎಂ. ಲಕ್ಷ್ಮಣ್, ಕೆಪಿಸಿಸಿ ವಕ್ತಾರ
ಡಾ. ಸುಶ್ರುತ್ ಗೌಡ
ಚಾಮರಾಜನಗರ ಲೋಕಸಭಾ ಕ್ಷೇತ್ರ
ಎಚ್.ಸಿ ಮಹದೇವಪ್ಪ, ಹಾಲಿ ಸಚಿವ
ಸುನಿಲ್ ಬೋಸ್, ಸಚಿವ ಮಹದೇವಪ್ಪ ಪುತ್ರ
ನಂಜುಂಡಸ್ವಾಮಿ, ಮಾಜಿ ಶಾಸಕ
ದರ್ಶನ್ ಧ್ರುವನಾರಾಯಣ್, ಹಾಲಿ ಶಾಸಕ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ
ನಾರಾಯಣಸ್ವಾಮಿ, ಮಾಜಿ ಎಂಎಲ್ಸಿ
ಕುಸುಮ ಹನುಮಂತರಾಯಪ್ಪ
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ
ಶಾಸಕ ಎನ್.ಎ ಹ್ಯಾರಿಸ್
ನಲಪಾಡ್, ಯೂತ್ ಕಾಂಗ್ರೆಸ್
ಎಸ್.ಎ ಹುಸೇನ್, ಕೆಪಿಸಿಸಿ ಕಾರ್ಯದರ್ಶಿ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ
ಸೌಮ್ಯ ರೆಡ್ಡಿ, ಮಾಜಿ ಶಾಸಕಿ
ರಮೇಶ್ ಕುಮಾರ್, ಮಾಜಿ ಸಚಿವ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ
ವೀರಪ್ಪ ಮೊಯ್ಲಿ, ಮಾಜಿ ಸಿಎಂ
ರಕ್ಷಾ ರಾಮಯ್ಯ,
ಶಿವಶಂಕರ ರೆಡ್ಡಿ, ಮಾಜಿ ಸಚಿವ
ಕೋಲಾರ ಲೋಕಸಭಾ ಕ್ಷೇತ್ರ
ಕೆ.ಎಚ್ ಮುನಿಯಪ್ಪ,
ಚಿಕ್ಕಪೆದ್ದಣ್ಣ, ಮುನಿಯಪ್ಪ ಅಳಿಯ
ಎಲ್.ಹನುಮಂತಯ್ಯ, ಮಾಜಿ ರಾಜ್ಯಸಭಾ ಸದಸ್ಯ
ಉತ್ತರ ಕನ್ನಡ ಲೋಕಸಭಾ ಕ್ಷೇತ್ರ
ಪ್ರಶಾಂತ್ ದೇಶಪಾಂಡೆ, ಆರ್.ವಿ ದೇಶಪಾಂಡೆ ಪುತ್ರ
ಅಂಜಲಿ ನಿಂಬಾಳ್ಕರ್, ಮಾಜಿ ಶಾಸಕಿ












Click it and Unblock the Notifications