ಈ ಜಿಲ್ಲೆ ನನಗೆ ಮನೆ ಇದ್ದಂತೆ; ಈ ಋಣ ನಾನು ಯಾವತ್ತೂ ಮರೆಯಲ್ಲ: ಸಿದ್ದರಾಮಯ್ಯ
ಕೊಪ್ಪಳ, ಮೇ 01: ಕೊಪ್ಪಳ ಜಿಲ್ಲೆಯ ಗಂಗಾವತಿ ನನಗೆ ಮನೆ ಇದ್ದಂಗೆ. ನಾನು ಲೋಕಸಭೆಗೆ ನಿಂತಿದ್ದಾಗ ಗಂಗಾವತಿಯಲ್ಲಿ ಬಹುಮತ ಸಿಕ್ಕಿತ್ತು. ಈ ಋಣ ನಾನು ಯಾವತ್ತೂ ಮರೆಯಲ್ಲ. ಈ ಬಾರಿಯೂ ಗಂಗಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅತ್ಯಂತ ಹೆಚ್ಚು ಮತಗಳನ್ನು ಕಾಂಗ್ರೆಸ್ ಗೆ ಕೊಡಿಸಿ ಅಭೂತಪೂರ್ವವಾಗಿ ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಗಂಗಾವತಿಯಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಉದ್ಘಾಟಿಸಿ ಮಾತನಾಡಿ, ನಾನು 50 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನೇ ಇವತ್ತಿನವರೆಗೂ ನಾನು ನೋಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದರು.

ಪತ್ರಿಕೆಗಳಲ್ಲಿ ಬಿಜೆಪಿ ಇಂದು ಸುಳ್ಳು ಜಾಹಿರಾತು ನೀಡಿದೆ. ಬಿಜೆಪಿ ಅಧಿಕಾರಿದಲ್ಲಿರುವ ಯಾವ ರಾಜ್ಯದಲ್ಲೂ ನಮ್ಮ ಹಾಗೆ ದಲಿತರಿಗೆ ಆರ್ಥಿಕ ಶಕ್ತಿ ನೀಡುವ SCP/TSP ಕಾಯ್ದೆ ಜಾರಿ ಮಾಡದ ಬಿಜೆಪಿ, ಕೇವಲ ಪತ್ರಿಕಾ ಜಾಹಿರಾತು ಮೂಲಕ ಹಾದಿ ತಪ್ಪಿಸುತ್ತಿದೆ. ಈ ಸುಳ್ಳು ಜಾಹಿರಾತು ನಂಬಿ ಮೋಸ ಹೋಗಬೇಡಿ ಎಂದರು.
ಬಿಜೆಪಿ ಅಧಿಕಾರಿದಲ್ಲಿರುವ ಯಾವ ರಾಜ್ಯದಲ್ಲೂ ದಲಿತರಿಗೆ ಆರ್ಥಿಕ ಶಕ್ತಿ ನೀಡುವ SCP/TSP ಕಾಯ್ದೆ ಜಾರಿ ಮಾಡದ ಬಿಜೆಪಿ, ಕೇವಲ ಸುಳ್ಳು ಪತ್ರಿಕಾ ಜಾಹಿರಾತು ಮೂಲಕ ದಲಿತರ ಹಾದಿ ತಪ್ಪಿಸುತ್ತಿದೆ. ಶ್ರಮಿಕರು, ದುಡಿಯುವ ವರ್ಗಗಳು, ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬವ ಕೆಲಸ ಮಾಡುತ್ತಿದ್ದೇವೆ. ನೀವು ನಮಗೆ ಈ ಚುನಾವಣೆಯಲ್ಲಿ ಹೆಚ್ಚಿನ ಶಕ್ತಿ ಕೊಡಿ. ಹತ್ತತ್ತು ವರ್ಷ ಪ್ರಧಾನಿ ಆಗಿ ಮೋದಿಗೆ ಒಂದೇ ಒಂದು ಭರವಸೆಯನ್ನೂ ಈಡೇರಿಸಲು ಸಾಧ್ಯವಾಗಲಿಲ್ಲ. ಬರೀ ಸುಳ್ಞು ಹೇಳ್ಕೊಂಡು ತಿರುಗಿದ್ರು.
ನಾನು ಈ ರಾಜ್ಯದ ಎಲ್ಲಾ ಜಾತಿ, ಎಲ್ಲಾ ವರ್ಗಗಳ ಮತ್ತು ಎಲ್ಲಾ ಧರ್ಮಗಳ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿದ್ದೇನೆ. ಬಿಜೆಪಿ ಸರ್ಕಾರ ಅನ್ನಭಾಗ್ಯದ ಅಕ್ಕಿಯ ಪ್ರಮಾಣವನ್ನು 2 ಕೆಜಿ ಕಡಿತ ಮಾಡಿತ್ತು. ನಾವು ಮತ್ತೆ ಅಧಿಕಾರಕ್ಕೆ ಬಂದು 10kg ಗೆ ಹೆಚ್ಚಿಸಿದ್ದೇವೆ. ಇದು ಕಾಂಗ್ರೆಸ್ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಸರ್ಕಾರ ಜಾರಿಗೆ ತಂದಿದ್ದ ಆಹಾರ ಭದ್ರತಾ ಕಾಯ್ದೆಯ ಫಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭಾರತದ ವಿದ್ಯಾವಂತ ಯುವ ಸಮೂಹವನ್ನು ನಂಬಿಸಿದ ಮೋದಿ ಈಗ ಪಕೋಡ ಮಾರಿ ಎಂದು ಹೇಳಿ ಮೂರು ನಾಮ ಬಳಿದಿದ್ದಾರೆ ಎಂದರು.
ಬೆಲೆ ಏರಿಕೆಗೆ ಬ್ರೇಕ್ ಹಾಕ್ತೀನಿ ಎಂದು ನಂಬಿಸಿ ಭಾರತೀಯರಿಗೆ ಮೂರು ನಾಮ ಹಾಕಿದ ಮೋದಿ ಮುಖ ನೋಡಿ ಮತ ಹಾಕಿದ್ರೆ ಆ ಮತಕ್ಕೆ ಗೌರವ ಬರುತ್ತಾ? ಮೋದಿಯ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಮಧ್ಯಮ ವರ್ಗ ಮತ್ತು ಬಡವರಿಗೆ ಸ್ಪಂದಿಸುವ ಸಲುವಾಗಿ ನಾವು ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆವು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಾವು. ಇದೇ ಕೆಲಸ ಬೊಮ್ಮಾಯಿ, ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದೂ ಏಕೆ ಮಾಡಲಿಲ್ಲ? ಎಂದು ಪ್ರಶ್ನಿಸಿದರು.
ರಿಪಬ್ಲಿಕ್ ಆಫ್ ಬಳ್ಳಾರಿ ಎನ್ನುವ ಅಪಕೀರ್ತಿಗೆ ಕಾರಣರಾದ ಜನಾರ್ಧನರೆಡ್ಡಿಯವರನ್ನು ಗೆಲ್ಲಿಸಿ ಮಾಡಿದ ತಪ್ಪು ಲೋಕಸಭೆಯಲ್ಲಿ ಮರುಕಳಿಸಬಾರದು. ಅನ್ಸಾರಿ ಗೆದ್ದಿದ್ರೆ ನಮ್ಮ ಸರ್ಕಾರದಲ್ಲಿ ಮಂತ್ರಿ ಆಗಿರ್ತಾ ಇದ್ರು. ಪಕ್ಷದಿಂದ ಪಕ್ಷಕ್ಕೆ ಪದೇ ಪದೇ ಹಾರುವವರನ್ನು ಬೆಳೆಸಬೇಡಿ. ಜನಾರ್ದನರೆಡ್ಡಿಯವರ ಸುಳ್ಳುಗಳನ್ನು ನಂಬಬೇಡಿ ಎಂದು ಹೇಳಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications