Get Updates
Get notified of breaking news, exclusive insights, and must-see stories!

ಈ ಜಿಲ್ಲೆ ನನಗೆ ಮನೆ ಇದ್ದಂತೆ; ಈ ಋಣ ನಾನು ಯಾವತ್ತೂ ಮರೆಯಲ್ಲ: ಸಿದ್ದರಾಮಯ್ಯ

ಕೊಪ್ಪಳ, ಮೇ 01: ಕೊಪ್ಪಳ ಜಿಲ್ಲೆಯ ಗಂಗಾವತಿ ನನಗೆ ಮನೆ ಇದ್ದಂಗೆ. ನಾನು ಲೋಕಸಭೆಗೆ ನಿಂತಿದ್ದಾಗ ಗಂಗಾವತಿಯಲ್ಲಿ ಬಹುಮತ ಸಿಕ್ಕಿತ್ತು. ಈ ಋಣ ನಾನು ಯಾವತ್ತೂ ಮರೆಯಲ್ಲ. ಈ ಬಾರಿಯೂ ಗಂಗಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅತ್ಯಂತ ಹೆಚ್ಚು ಮತಗಳನ್ನು ಕಾಂಗ್ರೆಸ್ ಗೆ ಕೊಡಿಸಿ ಅಭೂತಪೂರ್ವವಾಗಿ ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಗಂಗಾವತಿಯಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಉದ್ಘಾಟಿಸಿ ಮಾತನಾಡಿ, ನಾನು 50 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನೇ ಇವತ್ತಿನವರೆಗೂ ನಾನು ನೋಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದರು.

Lok Sabha Poll I Will Never Forget Gangavathi Debt Says Chief Minister Siddaramaiah

ಪತ್ರಿಕೆಗಳಲ್ಲಿ ಬಿಜೆಪಿ ಇಂದು ಸುಳ್ಳು ಜಾಹಿರಾತು ನೀಡಿದೆ. ಬಿಜೆಪಿ ಅಧಿಕಾರಿದಲ್ಲಿರುವ ಯಾವ ರಾಜ್ಯದಲ್ಲೂ ನಮ್ಮ ಹಾಗೆ ದಲಿತರಿಗೆ ಆರ್ಥಿಕ ಶಕ್ತಿ ನೀಡುವ SCP/TSP ಕಾಯ್ದೆ ಜಾರಿ ಮಾಡದ ಬಿಜೆಪಿ, ಕೇವಲ ಪತ್ರಿಕಾ ಜಾಹಿರಾತು ಮೂಲಕ ಹಾದಿ ತಪ್ಪಿಸುತ್ತಿದೆ. ಈ ಸುಳ್ಳು ಜಾಹಿರಾತು ನಂಬಿ ಮೋಸ ಹೋಗಬೇಡಿ ಎಂದರು.

ಬಿಜೆಪಿ ಅಧಿಕಾರಿದಲ್ಲಿರುವ ಯಾವ ರಾಜ್ಯದಲ್ಲೂ ದಲಿತರಿಗೆ ಆರ್ಥಿಕ ಶಕ್ತಿ ನೀಡುವ SCP/TSP ಕಾಯ್ದೆ ಜಾರಿ ಮಾಡದ ಬಿಜೆಪಿ, ಕೇವಲ ಸುಳ್ಳು ಪತ್ರಿಕಾ ಜಾಹಿರಾತು ಮೂಲಕ ದಲಿತರ ಹಾದಿ ತಪ್ಪಿಸುತ್ತಿದೆ. ಶ್ರಮಿಕರು, ದುಡಿಯುವ ವರ್ಗಗಳು, ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬವ ಕೆಲಸ ಮಾಡುತ್ತಿದ್ದೇವೆ. ನೀವು ನಮಗೆ ಈ ಚುನಾವಣೆಯಲ್ಲಿ ಹೆಚ್ಚಿನ ಶಕ್ತಿ ಕೊಡಿ. ಹತ್ತತ್ತು ವರ್ಷ ಪ್ರಧಾನಿ ಆಗಿ ಮೋದಿಗೆ ಒಂದೇ ಒಂದು ಭರವಸೆಯನ್ನೂ ಈಡೇರಿಸಲು ಸಾಧ್ಯವಾಗಲಿಲ್ಲ. ಬರೀ ಸುಳ್ಞು ಹೇಳ್ಕೊಂಡು ತಿರುಗಿದ್ರು.

ನಾನು ಈ ರಾಜ್ಯದ ಎಲ್ಲಾ ಜಾತಿ, ಎಲ್ಲಾ ವರ್ಗಗಳ ಮತ್ತು ಎಲ್ಲಾ ಧರ್ಮಗಳ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿದ್ದೇನೆ. ಬಿಜೆಪಿ ಸರ್ಕಾರ ಅನ್ನಭಾಗ್ಯದ ಅಕ್ಕಿಯ ಪ್ರಮಾಣವನ್ನು 2 ಕೆಜಿ ಕಡಿತ ಮಾಡಿತ್ತು. ನಾವು ಮತ್ತೆ ಅಧಿಕಾರಕ್ಕೆ ಬಂದು 10kg ಗೆ ಹೆಚ್ಚಿಸಿದ್ದೇವೆ. ಇದು ಕಾಂಗ್ರೆಸ್ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಸರ್ಕಾರ ಜಾರಿಗೆ ತಂದಿದ್ದ ಆಹಾರ ಭದ್ರತಾ ಕಾಯ್ದೆಯ ಫಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭಾರತದ ವಿದ್ಯಾವಂತ ಯುವ ಸಮೂಹವನ್ನು ನಂಬಿಸಿದ ಮೋದಿ ಈಗ ಪಕೋಡ ಮಾರಿ ಎಂದು ಹೇಳಿ ಮೂರು ನಾಮ ಬಳಿದಿದ್ದಾರೆ ಎಂದರು.

ಬೆಲೆ ಏರಿಕೆಗೆ ಬ್ರೇಕ್ ಹಾಕ್ತೀನಿ ಎಂದು ನಂಬಿಸಿ ಭಾರತೀಯರಿಗೆ ಮೂರು ನಾಮ ಹಾಕಿದ ಮೋದಿ ಮುಖ ನೋಡಿ ಮತ ಹಾಕಿದ್ರೆ ಆ ಮತಕ್ಕೆ ಗೌರವ ಬರುತ್ತಾ? ಮೋದಿಯ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಮಧ್ಯಮ ವರ್ಗ ಮತ್ತು ಬಡವರಿಗೆ ಸ್ಪಂದಿಸುವ ಸಲುವಾಗಿ ನಾವು ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆವು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಾವು. ಇದೇ ಕೆಲಸ ಬೊಮ್ಮಾಯಿ, ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದೂ ಏಕೆ ಮಾಡಲಿಲ್ಲ? ಎಂದು ಪ್ರಶ್ನಿಸಿದರು.

ರಿಪಬ್ಲಿಕ್ ಆಫ್ ಬಳ್ಳಾರಿ ಎನ್ನುವ ಅಪಕೀರ್ತಿಗೆ ಕಾರಣರಾದ ಜನಾರ್ಧನರೆಡ್ಡಿಯವರನ್ನು ಗೆಲ್ಲಿಸಿ ಮಾಡಿದ ತಪ್ಪು ಲೋಕಸಭೆಯಲ್ಲಿ ಮರುಕಳಿಸಬಾರದು. ಅನ್ಸಾರಿ ಗೆದ್ದಿದ್ರೆ ನಮ್ಮ ಸರ್ಕಾರದಲ್ಲಿ ಮಂತ್ರಿ ಆಗಿರ್ತಾ ಇದ್ರು. ಪಕ್ಷದಿಂದ ಪಕ್ಷಕ್ಕೆ ಪದೇ ಪದೇ ಹಾರುವವರನ್ನು ಬೆಳೆಸಬೇಡಿ‌. ಜನಾರ್ದನರೆಡ್ಡಿಯವರ ಸುಳ್ಳುಗಳನ್ನು ನಂಬಬೇಡಿ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+