ಮಂಡ್ಯ ಲೋಕಸಭಾ ಚುನಾವಣಾ ಫಲಿತಾಂಶ ಬರುವ ಮುನ್ನವೇ ಗೆದ್ರಾ ಕುಮಾರಸ್ವಾಮಿ?
ಮಂಡ್ಯ, ಏಪ್ರಿಲ್ 26: ದೇಶಾದ್ಯಂತ ಲೋಕಸಭೆ ಚುನಾವಣೆಗೆ 7 ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಇಂದು ಎರಡನೇ ಹಂತದ ಮತದಾನ ನಡೆಯುತ್ತಿದೆ. ಕರ್ನಾಟಕ ಸೇರಿದಂತೆ 13 ರಾಜ್ಯಗಳಲ್ಲಿ ಒಟ್ಟು 88 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಚುನಾವಣಾ ಫಲಿತಾಂಶಕ್ಕೂ ಮುನ್ನ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರು ಜನ ನನ್ನದು ಎಂದು ಹೇಳಿದ್ದಾರೆ.
ಈ ಕುರಿತು ಶುಕ್ರವಾರ ಮಂಡ್ಯದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಕುಮಾರಸ್ವಾಮಿ,ಈ ಜಯ ನನ್ನದಲ್ಲಾ ಜಿಲ್ಲೆಯ ಎಲ್ಲಾ ಜನರದ್ದು. ನನ್ನ ಪರವಾಗಿ ಮಂಡ್ಯ ಜಿಲ್ಲೆ ಎಲ್ಲಾ ಜನ ಚುನಾವಣೆ ನಡೆಸಿದ್ದಾರೆ.

ಈ ಜಯ ನನ್ನದಲ್ಲಾ ಇದು ಎಲ್ಲರ ಜಯ. ಮಂಡ್ಯ ಜಿಲ್ಲೆಯ ಎಲ್ಲಾ ಪಕ್ಷದಲ್ಲಿರುವ ನನ್ನ ಅಭಿಮಾನಿಗಳ ಜಯ ಎಂದು ಕುಮಾರಸ್ವಾಮಿ ಫಲಿತಾಂಶಕ್ಕೂ ಮುನ್ನವೇ ಚುನಾವಣಾ ಗೆಲುವಿನ ಕುರಿತು ಮಾತನಾಡಿದ್ದಾರೆ.
ಸುಮಲತಾ ಮಂಡ್ಯದಲ್ಲಿ ಕುಮಾರಸ್ವಾಮಿ ಗೆ ಸಪೋರ್ಟ್ ಮಾಡಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಹೇಳಿಕೆ ವಿಚಾರವಾಗಿ ಮಾತನಾಡಿ, ದೇವೇಗೌಡರು ಆ ರೀತಿ ಯಾಕೆ ಹೇಳಿದ್ದಾರೆ ಅಂತ ನನಗೆ ಗೊತ್ತಿಲ್ಲ.
ಸುಮಲತಾ ಅವರ ಪ್ರಶ್ನೆ ಇಲ್ಲಿ ಬರಲ್ಲ, ದೇವೇಗೌಡರು ಯಾಕೆ ಹಾಗೆ ಹೇಳಿದ್ದಾರೆ ಗೊತ್ತಿಲ್ಲ. ದೇವೇಗೌಡರಿಗೆ ಮಾಹಿತಿ ಕೊರತೆ ಆಗಿರಬೇಕು ಅನಿಸುತ್ತದೆ. ಪಕ್ಷ ಭೇದ ಮರೆತು ಕಾಂಗ್ರೆಸ್, ಬಿಜೆಪಿಯವ್ರು ನನ್ನ ಪರವಾಗಿ ಕೆಲಸ ಮಾಡಿದ್ದಾರೆ. ಯಾರು ವಿರೋಧ ಮಾಡಿಲ್ಲ ಎಲ್ಲರೂ ನನಗೆ ಸಹಾಯ ಮಾಡಿದ್ದಾರೆ ಎಂದು ಹೇಳಿದರು.
ಕುಮಾರಸ್ವಾಮಿ ಪರ ಪ್ರಚಾರಕ್ಕೆ ಯಾರು ನನ್ನ ಕರೆಯಲಿಲ್ಲ ಎಂಬ ಸುಮಲತಾ ಹೇಳಿಕೆ ವಿಚಾರವಾಗಿ ಮಾತನಾಡಿ, ನಾನು ಅವರ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೇನೆ. ಇದಕ್ಕಿಂತ ಇನ್ನೇನು ಮಾಡಬೇಕು ನಾನು.
ಅಂಬರೀಶ್ ಅಭಿಮಾನಿಗಳು ಸಹ ನನಗೆ ಸಹಾಯ ಮಾಡಿದ್ದಾರೆ. ನಾನು ಮೈಸೂರಿನ ಮೋದಿ ಕಾರ್ಯಕ್ರಮದಲ್ಲೂ ಕೂಡ ಸುಮಲತಾ ಅವರನ್ನಎರಡು ದಿನ ಪ್ರಚಾರಕ್ಕೆ ಬರುವಂತೆ ಕೋರಿದ್ದೆ. ಗೊಂದಲದ ಪ್ರಚಾರ ಮಾಡೋದು ಬೇಡ. ಬೆಂಗಳೂರಿನಿಂದ ಬಂದು ಸುಮಲತಾ ನನಗೆ ಓಟ್ ಮಾಡಿದ್ದಾರೆ, ಪಕ್ಷ ಭೇದ ಮರೆತು ಕೆಲಸ ಮಾಡಿದ್ದಾರೆ ರಾಜ್ಯದಲ್ಲೆ ಅತ್ಯಂತ ಬಹುಮತಗಳಿಂದ ಗೆಲ್ಲಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications