ರಾಹುಲ್ ಗಾಂಧಿಯವರನ್ನು ಕರ್ನಾಟಕಕ್ಕೆ ಕರೆಸಿ ಪ್ರಚಾರ ಮಾಡಿಸಿ: ಸವಾಲು ಹಾಕಿದ ಬಿ ವೈ ವಿಜಯೇಂದ್ರ
ಬೆಂಗಳೂರು, ಏಪ್ರಿಲ್ 27: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿಮ್ಮ ನಾಯಕರಾದ ರಾಹುಲ್ ಗಾಂಧಿಯವರನ್ನು ಹೆಚ್ಚು ಹೆಚ್ಚು ಕರ್ನಾಟಕಕ್ಕೆ ಕರೆಸಿ ಪ್ರಚಾರ ಮಾಡಿಸಬೇಕು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸವಾಲೆಸೆದರು.
ಈ ಕುರಿತು ಶನಿವಾರ ಮಾಧ್ಯಮಗಳ ಜೊತೆಗೆ ವಿಜಯೇಂದ್ರ ಮಾತನಾಡಿ, ರಾಘಣ್ಣನವರು ಶಿವಮೊಗ್ಗದಲ್ಲಿ 2.5 ಲಕ್ಷದಿಂದ 3 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದೆವು. ಶಿವಮೊಗ್ಗಕ್ಕೆ ರಾಹುಲ್ ಗಾಂಧಿಯವರು ಬರುವುದರಿಂದ ಇನ್ನೂ 50 ಸಾವಿರ ಹೆಚ್ಚು ಮತದಿಂದ ರಾಘವೇಂದ್ರ ಅವರು ಗೆಲ್ಲುವುದು ಖಚಿತ ಎಂದು ಹೇಳಿದರು.

ಮೋದಿಯವರಿಗೆ ಅಳುವ ದಿನಗಳು ಬರಲಿವೆ ಎಂಬ ರಾಹುಲ್ ಗಾಂಧಿಯವರ ಹೇಳಿಕೆ ಕುರಿತು ಮಾತನಾಡಿ, ಅಮೇಥಿಯ ಜನರ ವಿಶ್ವಾಸ ಕಳಕೊಂಡ ರಾಹುಲ್ ಗಾಂಧಿಯವರು ಕೇರಳದ ವಯನಾಡ್ ಕ್ಷೇತ್ರದಲ್ಲಿ ಅಡಗಿ ಕುಳಿತಿದ್ದಾರೆ. ಅಲ್ಪಸಂಖ್ಯಾತರೇ ಬಹುಸಂಖ್ಯಾತರಾಗಿರುವ ವಯನಾಡ್ ಕ್ಷೇತ್ರದಲ್ಲಿ ಅಡಗಿ ಕುಳಿತಿರುವ ಪರಿಸ್ಥಿತಿ ಕಾಂಗ್ರೆಸ್ ಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿಗೆ ಯಾಕೆ ಎಂದು ಪ್ರಶ್ನಿಸಿದರು.
ಸ್ವಾತಂತ್ರ್ಯ ಬಂದ ಬಳಿಕ ಅಮೇಥಿ ಜನರು ಗಾಂಧಿ ಕುಟುಂಬಕ್ಕೆ ಆಶೀರ್ವಾದ ಮಾಡುತ್ತಿದ್ದರು. ಅಂಥ ಅಮೇಥಿಯ ಮತದಾರರು ಕಾಂಗ್ರೆಸ್ಸಿನ ಮಹಾನ್ ನಾಯಕÀನನ್ನು ಯಾಕೆ ಧಿಕ್ಕರಿಸಿದ್ದಾರೆ ಎಂದು ಯೋಚನೆ ಮಾಡಲಿ. ನರೇಂದ್ರ ಮೋದಿಜೀ ಏನು? ಅವರ ಜನಪ್ರಿಯತೆ, ಜನಮನ್ನಣೆ ಏನು? ಕಳೆದ 10 ವರ್ಷಗಳಲ್ಲಿ ಮೋದಿಜೀ ಅವರ ಕೊಡುಗೆಗಳು, ಯೋಜನೆಗಳನ್ನು ಮನೆಮನೆಗಳಲ್ಲಿ ಮಾತನಾಡುತ್ತಾರೆ. ರಾಹುಲ್ ಗಾಂಧಿಯವರು ಏನು ಹೇಳುತ್ತಾರೋ ಅವುಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಉತ್ತರಿಸಿದರು.
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತರಿಗೆ ಒಬಿಸಿ ಕೋಟಾದಲ್ಲಿ ಮೀಸಲಾತಿ ನೀಡುವ ಚಿಂತನೆ ಮಾಡಿದೆ. ಇದರಿಂದ ಹಿಂದುಳಿದ ವರ್ಗದವರಿಗೆ ಕಾಂಗ್ರೆಸ್ ಪಕ್ಷ ಅನ್ಯಾಯ ಮಾಡುವ ಭಾವನೆ ಮೂಡಿದೆ. ನರೇಂದ್ರ ಮೋದಿಯವರ ಜನಪ್ರಿಯತೆ ದಿನೇದಿನೇ ಹೆಚ್ಚಾಗುತ್ತಿದೆ. ನಾಳೆ ಬೆಳಗಾವಿ, ಉತ್ತರಕನ್ನಡ, ದಾವಣಗೆರೆ, ಹೊಸಪೇಟೆಗಳಿಗೆ ಮೋದಿಜೀ ಅವರ ಪ್ರವಾಸ ಇದೆ. ಇದರ ಪರಿಣಾಮ ಮುಂದಿನ 14 ಲೋಕಸಭಾ ಕ್ಷೇತ್ರಗಳ ಚುನಾವಣೆ ಮೇಲೂ ಆಗಲಿದೆ ಎಂದು ನುಡಿದರು.
ನಿನ್ನೆ ನಡೆದ 14 ಕ್ಷೇತ್ರಗಳ ಚುನಾವಣೆಯಲ್ಲಿ 14ರಲ್ಲೂ ಬಿಜೆಪಿ ಗೆಲ್ಲುವ ಮಾಹಿತಿ ಬರುತ್ತಿದೆ. ವಾತಾವರಣ ಗಮನಿಸಿದರೆ ರಾಜ್ಯದ 28ರಲ್ಲಿ 28 ಕ್ಷೇತ್ರ ಗೆಲ್ಲುವ ನಮ್ಮ ಗುರಿ ತಲುಪುವುದು ಖಚಿತ ಎಂದು ಹೇಳಿದರು. ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಯತ್ನ ಫಲ ಕೊಡುವುದಿಲ್ಲ. ಬೂಟಾಟಿಕೆಯಿಂದ, ಅಧಿಕಾರದ ಅಮಲಿನಲ್ಲಿರುವ ಕಾಂಗ್ರೆಸ್ ಸರಕಾರದ ತೀರ್ಮಾನಗಳು, ಚಿಂತನೆಗಳು, ನೇಹಾ ಹಿರೇಮಠರ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಸರಕಾರದ ಧೋರಣೆ, ಅಲ್ಪಸಂಖ್ಯಾತರ ತುಷ್ಟೀಕರಣ- ಇವೆಲ್ಲವುಗಳಿಗೆ ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಬೆಲೆ ಕಟ್ಟಬೇಕಾಗುತ್ತದೆ.
ಒಬಿಸಿ ಕೋಟಾದಡಿ ಅಲ್ಪಸಂಖ್ಯಾತರಿಗೆ ಅವಕಾಶ ಎಂದರೆ ರಾಜ್ಯದ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದಂತೆ ಎಂದು ತಿಳಿಸಿದರು. ಇಂಥ ದುಸ್ಸಾಹಸಕ್ಕೆ ಹೊರಟ ಕಾಂಗ್ರೆಸ್ ಸರಕಾರಕ್ಕೆ ಜನರು ಬುದ್ಧಿ ಕಲಿಸುತ್ತಾರೆ ಎಂದು ಹೇಳಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications