Get Updates
Get notified of breaking news, exclusive insights, and must-see stories!

Lok Sabha Election 2024: ಬಿಜೆಪಿ ಬಿಗ್‌ ಶಾಕ್:‌ ಕಮಲ ಬಿಟ್ಟು ಕಾಂಗ್ರೆಸ್‌ ಸೇರ್ಪಡೆಯಾದ ಕರಡಿ ಸಂಗಣ್ಣ

ಬೆಂಗಳೂರು, ಏಪ್ರಿಲ್‌ 17: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 278 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪೆ ಹಾಗೂ ಜೆಡಿಎಸ್‌ ಮೈತ್ರಿಯಾಗಿದ್ದು, ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಬಿಜೆಪಿಗೆ ಕಾಂಗ್ರೆಸ್‌ ಬಿಗ್‌ ಶಾಕ್‌ ನೀಡಿದೆ.

ಬಿಜೆಪಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿರುವ ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದರು. ಪಕ್ಷದ ಬಾವುಟವನ್ನ ನೀಡುವ ಮೂಲಕ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಪಕ್ಷಕ್ಕೆ ಬರಮಾಡಿಕೊಂಡರು.

Lok Sabha Poll Koppal MP Karadi Sanganna Joins Congress

ಇನ್ನೂ ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರು ಮಾತನಾಡಿ, ಕೇಂದ್ರದಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದರೆ ಗ್ಯಾರಂಟಿಗಳನ್ನು ತೆಗೆದುಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಆದರೆ ಯಡಿಯೂರಪ್ಪ, ಕುಮಾರಸ್ವಾಮಿ, ಅಶೋಕ ಅವರಿಗೆ ಗ್ಯಾರಂಟಿಗಳನ್ನು ಮುಟ್ಟಲು ರಾಜ್ಯದ ಜನ ಅವಕಾಶ ನೀಡುವುದಿಲ್ಲ.

ಕಾಂಗ್ರೆಸ್ ಪಕ್ಷದ ಮೇಲಿನ ಜನರ ಪ್ರೀತಿ ಕಂಡು ಅವರಿಗೆ ಅಸೂಯೆ ಆಗಿದೆ. ಆದ ಕಾರಣ ನಮ್ಮ ತಾಯಂದಿರ ಬಗ್ಗೆ ಮಾತನಾಡುತ್ತಿದ್ದಾರೆ. ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿರುವ ಅವರಿಗೆ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ" ಎಂದು ಹೇಳಿದರು.

ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಹಾಗೂ ಗ್ಯಾರಂಟಿಗಳ ಅಲೆಯಿದೆ. ಇಡೀ ದೇಶವೇ ಕರ್ನಾಟಕದ ಕಡೆಗೆ ತಿರುಗಿ ನೋಡುತ್ತಿದೆ. ಮಂಗಳವಾರ ಕೇರಳ ರಾಜ್ಯ ಪ್ರವಾಸಕ್ಕೆ ಹೋಗಿದ್ದೆ, ಅಲ್ಲಿಯೂ ಸಹ ಕಾಂಗ್ರೆಸ್ 20 ಸ್ಥಾನಗಳನ್ನು ಗೆಲ್ಲಲಿದೆ. ಇಡೀ ದೇಶದಲ್ಲಿ 100 ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಎನ್ಡಿಎ ಬದಲಾಯಿಸಿದೆ. ರಾಜ್ಯದಲ್ಲಿ 14 ಸ್ಥಾನಗಳನ್ನು ಬದಲಾಯಿಸಿದೆ. ಯಾವುದೇ ಕಾರಣಕ್ಕೂ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. "ಇಂಡಿಯಾ ಒಕ್ಕೂಟ ಗೆದ್ದೇ, ಗೆಲ್ಲಲಿದೆ ಎಂದರು.

ನಿರುದ್ಯೋಗ, ಬೆಲೆಏರಿಕೆ ಸಮಸ್ಯೆಯ ಬಗ್ಗೆ ಜನರು ಚಿಂತನೆ ಮಾಡುತ್ತಿದ್ದಾರೆ. ಧರ್ಮ, ಜಾತಿ ಆದಾರದ ಮೇಲೆ ನಡೆಯುತ್ತಿರುವ ರಾಜಕಾರಣದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿದೆ. ಪ್ರಧಾನಿ ಮೋದಿ ಅವರು ಸಂವಿಧಾನ ಬದಲಾವಣೆ ಮಾಡುವುದಿಲ್ಲ ಎಂದು ಬಹಿರಂಗವಾಗಿ ಹೇಳಿಕೆ ಕೊಡುತ್ತಿದ್ದಾರೆ. ಬಿಜೆಪಿಯ ಹಾಲಿ ಸಂಸದರೊಬ್ಬರು 400 ಸ್ಥಾನಗಳನ್ನು ಕೊಡಿ, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಎರಡು ಮೂರು ಬಾರಿ ಹೇಳಿದರು. ಅವರನ್ನು ಪಕ್ಷದಿಂದ ಉಚ್ಚಾಟಿಸುವುದಕ್ಕೆ ಬಿಜೆಪಿ ಏಕೆ ಮುಂದಾಗಿಲ್ಲ? ಸಂವಿಧಾನ ಬದಲಾವಣೆ ಹೇಳಿಕೆಯ ನಂತರ ಉತ್ತರ ಭಾರತದಲ್ಲಿ ಜನ ದಂಗೆ ಎದ್ದಿದ್ದಾರೆ. ಆದ ಕಾರಣ ಈಗ ಬದಲಾವಣೆ ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ.

ತೆಲಂಗಾಣ ಮತ್ತು ಕರ್ನಾಟಕದಲ್ಲಿ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದ ಮೇಲೆ ಗ್ಯಾರಂಟಿ ವಿರುದ್ಧ ಮಾತನಾಡುತ್ತಿದ್ದವರು, ಈಗ ಅದರ ಪರವಾಗಿ ಮಾತನಾಡುತ್ತಿದ್ದಾರೆ. ಮೋದಿ ಗ್ಯಾರಂಟಿ ಎಂದು ಕರೆಯುತ್ತಿದ್ದಾರೆ. ಬಿಜೆಪಿಗೆ ಸೋಲು ಗ್ಯಾರಂಟಿ ಎಂದು ಗೊತ್ತಾದ ಮೇಲೆ ಮೈತ್ರಿ ಮಾಡಿಕೊಂಡಿದ್ದಾರೆ. ಆಂಧ್ರ ಪ್ರದೇಶದಲ್ಲಿ ಸಂಬಂಧವೇ ಇಲ್ಲದ ಚಂದ್ರಬಾಬು ನಾಯ್ಡು ಜೊತೆ ಸೇರಿಕೊಂಡಿದ್ದಾರೆ. ಕರ್ನಾಟಕದಲ್ಲಿ ದಳದೊಟ್ಟಿಗೆ ಸೇರಿಕೊಂಡಿದ್ದಾರೆ.

ಸವದಿಯವರು ಹೇಳುತ್ತಿದ್ದರು, ಕರಡಿ ಸಂಗಣ್ಣ ಅವರನ್ನು ನಾನೇ ದಳದಿಂದ ಬಿಜೆಪಿಗೆ ಸೇರಿಸಿದ್ದೆ ಎಂದು. ಸರಳ, ಸಜ್ಜನಿಕೆಯ ನಾಯಕ. ಬಿಜೆಪಿ ಸುಮ್ಮನೆ ಅಬ್ಬರ ಮಾಡುತ್ತಿರುವ ಹೊತ್ತಿನಲ್ಲಿ ಅವರು ಕಾಂಗ್ರೆಸ್ ಸೇರುತ್ತಿದ್ದಾರೆ. ಏಕೆಂದರೆ ಕಾಂಗ್ರೆಸ್ ಪಕ್ಷದ ನೀತಿ, ಸಿದ್ಧಾಂತ, ಕಾರ್ಯಕ್ರಮಗಳನ್ನು ಅವರು ಮೆಚ್ಚಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳು ಬಿಜೆಪಿಯನ್ನು ರಾಜ್ಯದಲ್ಲಿ ತೊಳೆದು ಹಾಕುತ್ತಿವೆ. ಬೆಳಗಾವಿಯ ಗಾಂಧಿ ಬಾವಿಯಿಂದ ನೀರನ್ನು ತೆಗೆದು ಕೊಳೆ ತೊಳೆದಂತೆ, ರಾಜ್ಯದ ಜನತೆ ಬಿಜೆಪಿಯನ್ನು ಗುಡಿಸಿ ಹಾಕುತ್ತಾರೆ.

ಕರಡಿ ಸಂಗಣ್ಣ ಅವರು ತಳಮಟ್ಟದ ರಾಜಕಾರಣದಿಂದ ಬೆಳೆದವರು. ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ನಂತರ 1999 ರಲ್ಲಿ ಜೆಡಿಯು ಪಕ್ಷದಿಂದ ಶಾಸಕರಾಗಿದ್ದರು. ನಂತರ ಎರಡು ಬಾರಿ ಸಂಸದರಾಗಿದ್ದರು. ಕೊಪ್ಪಳ ಭಾಗದಲ್ಲಿ ಭಾರಿ ಜನಸಂಪರ್ಕ ಹೊಂದಿರುವ ವ್ಯಕ್ತಿ ಎಂದು ಡಿ ಕೆ ಶಿವಕುಮಾರ್‌ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+