ಅಚ್ಚರಿ ನಿರ್ಧಾರ ಘೋಷಿಸಿದ ಸುಮಲತಾ ಅಂಬರೀಶ್: ಬಿ ವೈ ವಿಜಯೇಂದ್ರ ಏನಂದ್ರು?
ಬೆಂಗಳೂರು, ಏಪ್ರಿಲ್ 04: ಈ ಬಾರಿ ಚುನಾವಣೆಯಲ್ಲಿ ಮಂಡ್ಯದಿಂದ ಸ್ವತಂತ್ರವಾಗಿ ಸ್ಪರ್ಧಿಸಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಸ್ಪಷ್ಟಪಡಿಸಿದ್ದಾರೆ. ಅದಲ್ಲದೇ ಬಿಜೆಪಿ ಸೇರುವುದಾಗಿ ಮಂಡ್ಯ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರು ಅಚ್ಚರಿ ಘೋಷಣೆ ಮಾಡಿದ್ದು, ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ವಿಜಯೇಂದ್ರ ಅವರು ಮಾತನಾಡಿ, ಸುಮಲತಾ ಅವರು ಪ್ರಧಾನಿ, ಅಮಿತ್ ಶಾ, ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ್ದರು. ರಾಜಕೀಯ ಪರಿಸ್ಥಿತಿಯನ್ನು ಚರ್ಚಿಸಿದ್ದಾರೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಟ್ಟಿದ್ದು, ಎಚ್.ಡಿ.ಕುಮಾರಸ್ವಾಮಿ ಅವರು ಅಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಈ ನಡುವೆ ಸುಮಲತಾ ಅವರ ತೀರ್ಮಾನ ಸ್ವಾಗತಾರ್ಹ ಎಂದು ತಿಳಿಸಿದರು.

ಹಿರಿಯರು ಮತ್ತು ವಿಧಾನಪರಿಷತ್ ಸದಸ್ಯರೂ ಆದ ವಿಶ್ವನಾಥ್ ಅವರ ಮನೆಗೆ ಭೇಟಿ ಕೊಟ್ಟಿದ್ದೇನೆ. ಮೈಸೂರು- ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥರಾದ ಯದುವೀರ ಒಡೆಯರ್ ಅವರು ಸಹ ಇದ್ದರು. ವಿಶ್ವನಾಥ್ ಅವರು ಯದುವೀರ ಒಡೆಯರ್ ಅವರಿಗೆ ಸಂಪೂರ್ಣ ಸಹಕಾರ ಕೊಡುವುದಾಗಿ ತಿಳಿಸಿದ್ದಾರೆ. ಯದುವೀರ ಒಡೆಯರ್ ಅವರಿಗೆ ಎಲ್ಲರೂ ಪಕ್ಷಾತೀತವಾಗಿ ಬೆಂಬಲ ಕೊಡಬೇಕೆಂದು ಹೇಳಿದ್ದಾರೆ ಎಂದರು. ಯದುವೀರ ಒಡೆಯರ್ ಅವರು ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಮಹಾರಾಜರ ಕಾಲದಲ್ಲಿ ದಲಿತ ಸಮುದಾಯಗಳು, ಪರಿಶಿಷ್ಟ ಜಾತಿ, ಪಂಗಡ ಸೇರಿ ಎಲ್ಲ ಸಮುದಾಯಗಳಿಗೂ ನ್ಯಾಯ ಕೊಟ್ಟಿದ್ದರು. ರಾಜವಂಶದ ಮನೆತನವು ಬಡವರಿಗೆ ಶಕ್ತಿಯನ್ನು ನೀಡಿದೆ. ಪಕ್ಷಾತೀತ ಬೆಂಬಲವನ್ನು ಅವರಿಗೆ ನೀಡಬೇಕೆಂದು ವಿಶ್ವನಾಥರವರು ಹೇಳಿದ್ದಾರೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಪದೇಪದೇ ಸುಳ್ಳು ಹೇಳುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನವೇ ಬಂದಿಲ್ಲ ಎಂಬ ಅವರ ಮಾತು ಅವರಿಗೆ ಶೋಭೆ ತರುವಂಥದ್ದಲ್ಲ. ಯುಪಿಎ ಸರಕಾರದಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ 10 ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ ಒಂದೂವರೆ ಲಕ್ಷ ಕೋಟಿ ಹಣವಷ್ಟೇ ಬಂದಿತ್ತು. ಪ್ರಧಾನಿ ಮೋದಿಜೀ ಅವರ 10 ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ 4 ಲಕ್ಷ ಕೋಟಿಗೂ ಹೆಚ್ಚು ಅನುದಾನ ಲಭಿಸಿದೆ. ಮೂಲಭೂತ ಸೌಕರ್ಯಗಳಿಗೆ ಒತ್ತು ಕೊಟ್ಟಿದ್ದಾರೆ. ಇದರ ನಡುವೆಯೂ ಸಹ ಮುಖ್ಯಮಂತ್ರಿಗಳ ಈ ಹೇಳಿಕೆ ಹಾಸ್ಯಾಸ್ಪದ ಎಂದು ವಿಜಯೇಂದ್ರ ಅವರು ಟೀಕಿಸಿದರು.
ಬರಗಾಲದ ಸಂದರ್ಭದಲ್ಲಿ ಮೋದಿಜೀ ಅವರ ಮೇಲೆ ಮುಖ್ಯಮಂತ್ರಿಗಳು ಪದೇಪದೇ ಆರೋಪ ಮಾಡುತ್ತಿದ್ದಾರೆ. 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ ರೈತರ ಕುರಿತು ನಿಮಗೆ ಕರುಣೆ ಬರಲಿಲ್ಲವೇಕೆ ಎಂದು ಪ್ರಶ್ನಿಸಿದರು. ರೈತರ ಬಗ್ಗೆ ಕಿಂಚಿತ್ತೂ ಅನುಕಂಪ ಬರಲಿಲ್ಲವೇ ಎಂದು ಕೇಳಿದರು. ಈ ಸರಕಾರ ರೈತರು ಮತ್ತು ಜನರಿಗೆ ಶಾಪವಾಗಿ ಪರಿವರ್ತನೆಗೊಂಡಿದೆ ಎಂದು ಆಕ್ಷೇಪಿಸಿದರು.
ರಾಜ್ಯದಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಈಗಲಾದರೂ ಎಚ್ಚತ್ತುಕೊಂಡು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಸ್ಪಷ್ಟ ಬಹುಮತದ ನಿಮ್ಮದೇ ಸರಕಾರ ರಾಜ್ಯದಲ್ಲಿದೆ. ರೈತರಿಗೆ ಸಮರ್ಪಕ ನ್ಯಾಯ ಕೊಡಿ ಎಂದು ಕೈಮುಗಿದು ಮನವಿ ಮಾಡುವುದಾಗಿ ಹೇಳಿದರು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications