ಕೈ ಪಾಳಯದಲ್ಲಿ ಟಿಕೆಟ್ಗಾಗಿ ಮುಂದುವರೆದ ಫೈಟ್ ; ಈ 19 ಕ್ಷೇತ್ರಗಳಲ್ಲಿ ಯಾರಾಗಲಿದ್ದಾರೆ ಅಭ್ಯರ್ಥಿ?
ಬೆಂಗಳೂರು, ಮಾರ್ಚ್ 08: ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯ ಬಳಿಕ ಎರಡನೇ ಪಟ್ಟಿ ಬಿಡುಗಡೆ ಸಜ್ಜಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆಗೆ ಸರ್ಕಸ್ ಮುಂದುವರೆಸಿದೆ. ಇನ್ನೂ ಕಾಂಗ್ರೆಸ್ ನ 28 ಕ್ಷೇತ್ರಗಳ ಪೈಕಿ 9 ಕ್ಷೇತ್ರಗಳಲ್ಲಿ ಟಿಕೆಟ್ ಫೈನಲ್ ಆಗಿದ್ದು, ಉಳಿದ ಕ್ಷೇತ್ರಗಳ ಅಭ್ಯರ್ಥಿಯೇ ದೊಡ್ಡ ತಲೆನೋವಾಗಿದೆ.
ಈಗಾಗಲೇ ಶೀಘ್ರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಲಿದೆ ಎಂದು ತಿಳಿದು ಬಂದಿದ್ದು, ಅಭ್ಯರ್ಥಿಗಳ ಆಯ್ಕೆ ಸಂಬಂಧ ಗುರುವಾರ ನವ ದೆಹಲಿಯಲ್ಲಿ ಸಭೆ ನಡೆಸಲಾಗಿದೆ. ಕರ್ನಾಟಕದ 14 ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿ 9 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.ಕರ್ನಾಟಕದ ಅಭ್ಯರ್ಥಿಗಳ ಪೈಕಿ ಎರಡು ಹಂತದಲ್ಲಿ ಟಿಕೆಟ್ ಘೋಷಣೆಯಾಗಲಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

ರಾಜ್ಯದ 28 ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳನ್ನ ಕಣಕ್ಕಿಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೆ ಪಟ್ಟಿಯನ್ನ ಕಳುಹಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಚರ್ಚೆ ನಡೆಸಿ ಒಂದು ಹಂತದ ಪಟ್ಟಿಯನ್ನು ಸಿದ್ಧಪಡಿಸಿದ್ದರು. ಈ ಪಟ್ಟಿಯ ಬಗ್ಗೆ ಹೈಕಮಾಂಡ್ನಲ್ಲಿ ಜೊತೆಗೆ ಗುರುವಾರ ನಡೆದ ಸಭೆಯಲ್ಲಿ ಚರ್ಚೆಯಾಗಿದ್ದು, ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಲಾಗಿದೆ.
ಕಾಂಗ್ರೆಸ್ ಹೈಕಮಾಂಡ್ ನಲ್ಲಿ ಅಂತಿಮವಾದ ಅಭ್ಯರ್ಥಿಗಳ ಪಟ್ಟಿ!
ಬೆಂಗಳೂರು ಗ್ರಾಮಾಂತರ - ಡಿ.ಕೆ. ಸುರೇಶ್
ಬೆಂಗಳೂರು ಕೇಂದ್ರ - ಎನ್.ಎ. ಹ್ಯಾರಿಸ್
ತುಮಕೂರು - ಮುದ್ದಹನುಮೇಗೌಡ
ಚಿತ್ರದುರ್ಗ - ಚಂದ್ರಪ್ಪ
ಕೋಲಾರ - ಕೆ.ಎಚ್. ಮುನಿಯಪ್ಪ
ಮಂಡ್ಯ - ಸ್ಟಾರ್ ಚಂದ್ರು (ವೆಂಕಟರಾಮಣೇಗೌಡ)
ಮೈಸೂರು - ಎಂ. ಲಕ್ಷ್ಮಣ್
ಬೀದರ್ - ರಾಜಶೇಖರ್ ಪಾಟೀಲ್
ಕಲಬುರಗಿ - ರಾಧಾಕೃಷ್ಣ

ಈ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಆಕಾಂಕ್ಷಿಗಳು ಫೈಟ್?
ಬೆಂಗಳೂರು ಉತ್ತರ - ಪ್ರೊ. ರಾಜೀವ್ ಗೌಡ - ನಾರಾಯಣ ಸ್ವಾಮಿ, ಮೀನಾಕ್ಷಿ ಕೃಷ್ಣಬೈರೇಗೌಡ
ಬೆಂಗಳೂರು ದಕ್ಷಿಣ - ಸೌಮ್ಯಾ ರೆಡ್ಡಿ, ರಮೇಶ್ ಕುಮಾರ್
ಚಿಕ್ಕಬಳ್ಳಾಪುರ - ರಕ್ಷಾರಾಮಯ್ಯ, ವೀರಪ್ಪ ಮೊಯ್ಲಿ, ಶಿವಶಂಕರ ರೆಡ್ಡಿ
ಚಾಮರಾಜನಗರ - ಎಚ್.ಸಿ. ಮಹದೇವಪ್ಪ, ಸುನಿಲ್ ಬೋಸ್, ದರ್ಶನ್ ಧ್ರುವನಾರಾಯಣ
ಹಾಸನ - ಶ್ರೇಯಸ್ ಪಟೇಲ್, ಬಾಗೂರು ಮಂಜುನಾಥ್
ಉಡುಪಿ- ಚಿಕ್ಕಮಗಳೂರು - ಜಯಪ್ರಕಾಶ್ ಹೆಗ್ಡೆ
ಉತ್ತರ ಕನ್ನಡ - ಅಂಜಲಿ ನಿಂಬಾಳ್ಕರ್, ಆರ್.ವಿ. ದೇಶಪಾಂಡೆ
ಬೆಳಗಾವಿ - ಸತೀಶ್ ಜಾರಕಿಹೊಳಿ, ಪ್ರಿಯಾಂಕಾ ಜಾರಕಿಹೊಳಿ, ಮೃಣಾಲ್ ಹೆಬ್ಬಾಳ್ಕರ್
ಹುಬ್ಬಳ್ಳಿ- ಧಾರವಾಡ - ರಜತ ಉಳ್ಳಾಗಡ್ಡಿಮಠ್, ವಿನಯ್ ಕುಲಕರ್ಣಿ, ಶಿವಲೀಲಾ ಕುಲಕರ್ಣಿ
ಹಾವೇರಿ - ಸಲೀಂ ಅಹಮದ್, ಡಿ.ಆರ್. ಪಾಟೀಲ್
ಕೊಪ್ಪಳ - ಅಮರೇಗೌಡ ಬೈಯಾಪುರ, ರಾಜಶೇಖರ್ ಹಿಟ್ನಾಲ್
ರಾಯಚೂರು- ಕುಮಾರ ನಾಯಕ, ರವಿ ಪಾಟೀಲ್ ನಾಯಕ
ಬಳ್ಳಾರಿ - ನಾಗೇಂದ್ರ, ವಿ.ಎಸ್. ಉಗ್ರಪ್ಪ, ವೆಂಕಟೇಶ್ ಪ್ರಸಾದ್
ಬಾಗಲಕೋಟೆ - ವೀಣಾ ಕಾಶಪ್ಪನವರ್, ಆನಂದ್ ನ್ಯಾಮಗೌಡ, ಅಜೇಯ್ ಕುಮಾರ್ ಸರನಾಯಕ್
ವಿಜಯಪುರ - ರಾಜು ಅಲಗೂರು, ಕಾಂತ ನಾಯಕ್
ಶಿವಮೊಗ್ಗ - ಗೀತಾ ಶಿವರಾಜ್ ಕುಮಾರ್, ಮಧು ಬಂಗಾರಪ್ಪ
ದಾವಣಗೆರೆ - ಪ್ರಭಾ ಮಲ್ಲಿಕಾರ್ಜುನ, ಬಿ.ಜಿ. ವಿನಯ್ ಕುಮಾರ್
ಚಿಕ್ಕೋಡಿ - ಪ್ರಕಾಶ್ ಹುಕ್ಕೇರಿ/ ಲಕ್ಷ್ಮಣ್ ರಾವ್ ಚಿಂಗಳೆ
ದಕ್ಷಿಣ ಕನ್ನಡ- ವಿನಯದ ಕುಮಾರ್ ಸೊರಕೆ, ರಮಾನಾಥ್ ರೈ, ಪದ್ಮರಾಜ್
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications