ಕಸಾಪ ಆಜೀವ ಸದಸ್ಯತ್ವ ಪಡೆದ ಲೋಕಾಯುಕ್ತ ನ್ಯಾ. ಬಿ. ಎಸ್. ಪಾಟೀಲ್
ಬೆಂಗಳೂರು, ಜೂನ್ 21: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ. ಎಸ್. ಪಾಟೀಲ್ ಕನ್ನಡದ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವ ಪಡೆದುಕೊಂಡಿದ್ದಾರೆ.
ಕನ್ನಡ ಭಾಷೆ, ಸಾಹಿತ್ಯ ಸೇರಿದಂತೆ ಈ ನೆಲದ ಅಸ್ಮಿತೆಗಾಗಿ ಶ್ರಮಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ರೂಪಿಸುವ ಉದ್ದೇಶದಿಂದ 'ಮನೆ ಮನೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು' ಎಂಬ ಅಭಿಯಾನ ಪ್ರಾರಂಭಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ರಾಜ್ಯಾದ್ಯಂತ ಜನಸಾಮಾನ್ಯರಿಂದ ಹಿಡಿದು ಗಣ್ಯರ ಮನೆಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರ ಮನೆಗೆ, ಕಚೇರಿಗಳಿಗೆ ಭೇಟಿ ನೀಡುತ್ತಿದ್ದಾರೆ. ಪರಿಷತ್ತಿನ ಸದಸ್ಯತ್ವ, ಕನ್ನಡ ಸೇವೆ ಕುರಿತು ಅರಿವು ಮೂಡಿಸುತ್ತಿದ್ದಾರೆ.

ಅದೇ ರೀತಿ ಡಾ. ಮಹೇಶ ಜೋಶಿ ರಾಜ್ಯ ಲೋಕಾಯುಕ್ತರ ಕಚೇರಿಗೆ ಸೋಮವಾರ ಭೇಟಿ ನೀಡಿದರು. ಈ ವೇಳೆ ಲೋಕಾಯುಕ್ತರಾದ ನ್ಯಾ. ಬಿ. ಎಸ್. ಪಾಟೀಲ್ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವ ಪಡೆದುಕೊಂಡಿದ್ದಾರೆ. ನಂತರ ಪರಿಷತ್ತಿನ ಸೇವೆ ಕುರಿತು ಕೆಲ ಕಾಲ ಅಧ್ಯಕ್ಷರ ಜತೆ ಚರ್ಚಿಸಿದ್ದಾರೆ.
ಜನಸಾಮಾನ್ಯರ ಪರಿಷತ್ತು ಆಗಲಿದೆ; ಸದಸ್ಯತ್ವ ಪಡೆದು ಮಾತನಾಡಿದ ಲೋಕಾಯುಕ್ತ ನ್ಯಾ. ಬಿ. ಎಸ್. ಪಾಟೀಲ್ ಕನ್ನಡ ಸಾಹಿತ್ಯ ಪರಿಷತ್ತು ಎಂಬುದು ಕನ್ನಡಿಗರರ ಅಸ್ಮಿತೆಯ ಪ್ರತೀಕವಾಗಿದೆ.
ಕನ್ನಡಿಗರ ಹೆಮ್ಮೆಯ ಸಂಸ್ಥೆಯ ಚುಕ್ಕಾಣಿಯನ್ನು ನಾಡೋಜ ಡಾ. ಮಹೇಶ ಜೋಶಿ ವಹಿಸಿಕೊಂಡಿದ್ದಾರೆ. ದೂರದರ್ಶನವನ್ನು ಸಮೀಪ ದರ್ಶನವನ್ನಾಗಿ ಮಾಡುವಲ್ಲಿ ಕ್ರಿಯಾಶೀಲರಾಗಿದ್ದ ಅವರು ಇದೀಗ ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿಸುವಲ್ಲಿ ಕಾರ್ಯ ಪ್ರವೃತ್ತರಾಗಿದ್ದಾರೆ. ಅವರ ನಂಬಿಕೆ ಸಾಕಾರವಾಗಲಿದೆ ಎಂದು ತಿಳಿಸಿದರು.

ರಾಜ್ಯದ ಲೋಕಾಯುಕ್ತ ವ್ಯಾಪ್ತಿಯ ಎಲ್ಲ ಸಿಬ್ಬಂದಿ ಪರಿಷತ್ತಿನ ಸದಸ್ಯತ್ವ ಪಡೆದುಕೊಳ್ಳಬೇಕು ಎಂದು ಮಹೇಶ್ ಜೋಶಿ ವಿನಂತಿಸಿಕೊಂಡರು. ಅದಕ್ಕೆ ನ್ಯಾ. ಬಿ. ಎಸ್. ಪಾಟೀಲ್ ಸಕಾರಾತ್ಮಕವಾಗಿ ಸಮ್ಮತಿಸಿದರು. ಈ ವೇಳೆ ಪರಿಷತ್ತಿನ ಕೋಶಾಧ್ಯಕ್ಷ ಬಿ. ಎಂ. ಪಟೇಲ್ ಪಾಂಡು ಉಪಸ್ಥಿತರಿದ್ದರು.
-
Toxic: ಟಾಕ್ಸಿಕ್ ನೀವೆಲ್ಲ ಅಂದುಕೊಂಡಂತೆ ಗ್ಯಾಂಗ್ಸ್ಟರ್ ಸಿನಿಮಾ ಅಲ್ಲ: ಕೊನೆಗೂ ಸೀಕ್ರೇಟ್ ರಿವೀಲ್ ಮಾಡಿದ ನಟ ಯಶ್ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications