ಭೂ ಹಗರಣ : ಸಚಿವ ಖಮರುಲ್ ಇಸ್ಲಾಂ ವಿರುದ್ಧ ತನಿಖೆ
ಬೆಂಗಳೂರು, ಅ.17 : ವಕ್ಫ್ ಆಸ್ತಿ ಕಬಳಿಕೆ ಹಗರಣ ಸಚಿವ ಖಮರುಲ್ ಇಸ್ಲಾಂ ಕೊರಳಿಗೆ ಸುತ್ತಿಕೊಂಡಿದೆ. ಭೂ ಕಬಳಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಕೋಲಾರದ ತಬ್ರೇಜ್ ಪಾಷಾ ಎಂಬುವವರು ನ್ಯಾಯಾಲಯದಲ್ಲಿ ಸಚಿವರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು.
ಸಚಿವ ಖಮರುಲ್ ಇಸ್ಲಾಂ ವಿರುದ್ಧ ತನಿಖೆಗೆ ಆದೇಶ ನೀಡಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಜಿ.ಬೋಪಯ್ಯ ಅವರು, ಡಿ. 31ರೊಳಗೆ ವರದಿ ಸಲ್ಲಿಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಗುಲ್ಬರ್ಗದ ಬಡೇಪುರ ಪ್ರದೇಶದ ಸರ್ವೆ ನಂಬರ್ 12ರಲ್ಲಿ ಖಾಜಾ ಬಂದೇನವಾಜ್ ದರ್ಗಾಕ್ಕೆ ಸೇರಿದ 8.34 ಎಕರೆ ಜಮೀನನ್ನು ಸಚಿವರು ಆಕ್ರಮವಾಗಿ ಕಬಳಿಸಿದ್ದಾರೆ ಎಂಬುದು ಆರೋಪ.

ರಾಜ್ಯದಲ್ಲಿ ವಕ್ಫ್ ಆಸ್ತಿ ದುರ್ಬಳಕೆ ಕುರಿತು 2012ರಲ್ಲಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಂದಿನ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ನೀಡಿದ್ದ ವರದಿ ಆಧರಿಸಿ ಕೋಲಾರದ ತಬ್ರೇಜ್ ಪಾಷಾ 2013ರ ಜೂನ್ನಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಸಚಿವರ ವಿರುದ್ಧ ದೂರು ಸಲ್ಲಿಸಿದ್ದರು. [ವಕ್ಫ್ ಆಸ್ತಿ 2.5 ಲಕ್ಷ ಕೋಟಿ ಹಂಚಲು ಆಗ್ರಹ]
ಆರೋಪವೇನು? : ಖಾಜಾ ಬಂದೇನವಾಜ್ ದರ್ಗಾಕ್ಕೆ 1974ರಲ್ಲಿ 8.34 ಎಕರೆ ವಕ್ಫ್ ಜಮೀನು ಮಂಜೂರು ಆಗಿತ್ತು. ಆದರೆ, ದರ್ಗಾದ ಮುಖ್ಯಸ್ಥರಿಂದ ಆಸ್ತಿಯ ಜಿಪಿಎ (ಜನರಲ್ ಪವರ್ ಆಫ್ ಅಟಾರ್ನಿ) ಪಡೆದುಕೊಂಡಿದ್ದ ಖಮರುಲ್ ಇಸ್ಲಾಂ 1998ರ ಅವಧಿಯಲ್ಲಿ ಈ ಜಮೀನನ್ನು ಅಕ್ರಮವಾಗಿ ಕಬಳಿಸಿದ್ದರು.
8.34 ಎಕರೆ ಜಮೀನನ್ನು ವಸತಿ ಬಡಾವಣೆಯಾಗಿ ಪರಿವರ್ತಿಸಿದ್ದ ಸಚಿವರು ಸುಮಾರು 198 ನಿವೇಶನಗಳನ್ನು ಮಾಡಿ ಪ್ರತಿ ನಿವೇಶನವನ್ನು 6 ರಿಂದ 20 ಲಕ್ಷ ರೂ. ವರೆಗೆ ಮಾರಾಟ ಮಾಡಿದ್ದಾರೆ. ಈ ಪ್ರಕರಣದಲ್ಲಿ ಖಾಜಾ ಬಂದೇನವಾಜ್ ದರ್ಗಾದ ಮುಖ್ಯಸ್ಥರು ಸಹ ಭಾಗಿಯಾಗಿದ್ದಾರೆ ಎಂಬುದು ಆರೋಪ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications