ಲೋಕಾಯುಕ್ತ ದಾಳಿ : 6 ಜಿಲ್ಲೆಗಳು, 8 ಸರ್ಕಾರಿ ಅಧಿಕಾರಿಗಳು
ಬೆಂಗಳೂರು, ಜೂ. 11 : ಲೋಕಾಯುಕ್ತ ಪೊಲೀಸರು ಬೆಂಗಳೂರು ಸೇರಿದಂತೆ 6 ಜಿಲ್ಲೆಗಳಲ್ಲಿ ಎಂಟು ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ಗುರುವಾರ ದಾಳಿ ಮಾಡಿದ್ದಾರೆ. ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ.
ಅಕ್ರಮ ಆಸ್ತಿಗಳಿಕೆ ದೂರಿನ ಹಿನ್ನಲೆಯಲ್ಲಿ ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಬಾಗಲಕೋಟೆ, ಮಂಡ್ಯ ಜಿಲ್ಲೆಗಳ 8 ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆದಿದೆ. ಆಯಾ ಜಿಲ್ಲಾ ಎಸ್ಪಿಗಳ ನೇತೃತ್ವದಲ್ಲಿ ದಾಳಿ ನಡೆಸಿದ್ದು, ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. [13 ಕಡೆ ಲೋಕಾಯುಕ್ತ ದಾಳಿ, 14 ಕೋಟಿ ಅಕ್ರಮ ಆಸ್ತಿ ಪತ್ತೆ]

ಬೆಂಗಳೂರಿನಲ್ಲಿ ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ನೇತೃತ್ವದಲ್ಲಿ ನ್ಯಾಯಾಂಗ ಬಡಾವಣೆಯಲ್ಲಿರುವ ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ತ್ಯಾಗರಾಜ್ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. [ವರ್ಗಾವಣೆ ಬಯಸಿಲ್ಲ : ಸೋನಿಯಾ ನಾರಂಗ್]
ರಾಮನಗರ : ಬಿಡದಿ ಠಾಣೆಯ ಎಎಸ್ಐ ಜಗದೀಶ್ ಅವರ ತಲಘಟ್ಟಪುರ ಸಮೀಪದ ರಘುವನಹಳ್ಳಿಯಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.
ಬೆಳಗಾವಿ : ಚಿಕ್ಕೋಡಿ ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆ ಅಕೌಂಟ್ಸ್ ಸೂಪರ್ಟೆಂಡಟ್ ಕೃಷ್ಣ ಮಹದೇವಪ್ಪ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಹಿರೇಬೂದಿ ಗ್ರಾಮದಲ್ಲಿ ವಿಲೇಜ್ ಅಕೌಂಡೆಟ್ ಸಿದ್ಧಾರ್ಥ ಅವರ ಮನೆಯ ಮೇಲೆ ದಾಳಿ ನಡೆದಿದೆ. ಸಹಕಾರಿ ಮಂಡಳಿ ಅಧ್ಯಕ್ಷ ನಾಗಯ್ಯ ಹಿರೇಮಠ್ ಮನೆಯ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ.
ಬಾಗಲಕೋಟೆ : ಬಾಗಲಕೋಟೆಯಲ್ಲಿ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಇಂಜಿನಿಯರ್ ಮಲ್ಲಿಕಾರ್ಜುನ ಅವರ ನಿವಾಸದ ಮೇಲೆ ದಾಳಿ ಮಾಡಲಾಗಿದೆ.
ಮಂಗಳೂರು : ಪುತ್ತೂರಿನಲ್ಲಿ ಪುತ್ತೂರು ವಲಯ ಅರಣ್ಯಾಧಿಕಾರಿ ಬಾಲಕೃಷ್ಣ ಅವರ ಮನೆಯ ಮೇಲೆ ದಾಳಿ ಮಾಡಲಾಗಿದೆ.
ಮಂಡ್ಯ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಅಣ್ಣೇಗೌಡ ಅವರ ನಿವಾದ ಮೇಲೆ ದಾಳಿ ನಡೆದಿದೆ.












Click it and Unblock the Notifications