ಲೋಕಸಭೆ ರಣತಂತ್ರ: ಕರ್ನಾಟಕಕ್ಕೆ ಅಮಿತ್ ಶಾ ಆಗಮನ ಯಾವಾಗ?
Recommended Video

ಬೆಂಗಳೂರು, ಸೆಪ್ಟೆಂಬರ್ 20: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ ಇದರ ಮಧ್ಯೆ ಲೋಕಸಭಾ ಚುನಾವಣೆ ಕುರಿತು ಆಲೋಚಿಸಲು ಸಾಧ್ಯವಾಗುತ್ತಿಲ್ಲ, ಹೀಗಾಗಿ ಈ ಬೆಳವಣಿಗೆಗಳು ಸಹಜ ಸ್ಥಿತಿಗೆ ಬಂದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಅಕ್ಟೋಬರ್ ನಲ್ಲಿ ರಾಜ್ಯಕ್ಕೆ ಆಗಮಿಸಿ ಲೋಕಸಭಾ ಚುನಾವಣೆ ಕುರಿತು ಸಭೆ ನಡೆಸಲಿದ್ದಾರೆ.
ಅಮಿತ್ ಶಾ ಕರ್ನಾಟಕ ಭೇಟಿ ಕುರಿತು ಇದುವರೆಗೂ ಅಂತಿಮ ನಿರ್ಧಾರ ಹೊರಬಿದ್ದಿಲ್ಲ, ಆದರೆ ಅಕ್ಟೋಬರ್ ನಲ್ಲಿ ಬರುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಕರ್ನಾಟಕದ ನಂತರ ಮಧ್ಯಪ್ರದೇಶ, ರಾಜಸ್ತಾನ, ಮತ್ತಿತರೆ ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿಸಿಕೊಂಡು ಮತ್ತೆ ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆಗಳಿವೆ.
ಲೋಕಸಭಾ ಚುನಾವಣಾ ಪೂರ್ವ ಸಿದ್ಧತೆಗಾಗಿ ವಿವಿಧ ರಾಜ್ಯಗಳ ಭೇಟಿ ಈಗಾಗಲೇ ಮುಗಿಸಿರುವ ಅಮಿತ್ ಶಾ ಅವರು ಕಳೆದ ಎರಡು ತಿಂಗಳ ಹಿಂದೆಯೇ ಕರ್ನಾಟಕಕ್ಕೆ ಬರಬೇಕಿತ್ತು ಆದರೆ ಕಾರಣಾಂತರಗಳಿಂದ ಮುಂದೂಡಿದ್ದರು.

ಇದೀಗ ಮತ್ತೊಮ್ಮೆ ಅವರು ರಾಜ್ಯಕ್ಕೆ ಭೇಟಿ ನೀಡುವ ಕುರಿತು ಮಾತುಗಳು ಕೇಳಿಬಂದಿವೆಮ ಕಳೆದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ಹಲವು ತಿಂಗಳುಗಳ ಮುಂಚಿತವಾಗಿಯೇ ಆಗಮಿಸಿ ಮೂರು ದಿನಗಳ ಕಾಲ ಇಲ್ಲಿಯೇ ವಾಸ್ತವ್ಯ ಮಾಡಿದ್ದರು, ಬಳಿಕ ಗುಜರಾತ್ ಚುನಾವಣೆ ಮುಗಿಸಿಕೊಂಡು ನಂತರ ಮತ್ತೆ ಬಂದಿದ್ದರು.












Click it and Unblock the Notifications