ಸಮುದ್ರದ ಅಲೆಗಳನ್ನು ತೆಡೆಯಲು 'ಸೀ ವೇವ್ ಬ್ರೇಕರ್ ಟೆಕ್ನಾಲಜಿ': ಸಿಎಂ ಬೊಮ್ಮಾಯಿ

ಉಳ್ಳಾಲ, ಜುಲೈ 13: ಕಡಲ ಕೊರೆತ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಕೇಂದ್ರ ಸರ್ಕಾರದ ನೆರವಿನೊಂದಿಗೆ ದೀರ್ಘಕಾಲದ ಯೋಜನೆ ರೂಪಿಸಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿರುವ ಅವರು ಮಂಗಳವಾರ ರಾತ್ರಿ ಉಳ್ಳಾಲದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ನಿರಂತರವಾಗಿ ಕಡಲ ಕೊರೆತ ಆಗುತ್ತಿದೆ. ಉಳ್ಳಾಲದಲ್ಲಿ ಕಳೆದ ಬಾರಿ ಸುಮಾರು 800 ಮೀ ಕಡಲ ಕೊರೆತ ಆಗಿತ್ತು. ಈ ಬಾರಿ 600 ಮೀ ಆಗಿದೆ. ಹೀಗಾಗಿ ಕಡಲ ಕೊರೆತ ಸಮಸ್ಯೆ ಶಾಶ್ವತ ಪರಿಹಾರ ನೀಡುವುದು ಅತ್ಯಂತ ಅವಶ್ಯಕವಾಗಿದೆ ಎಂದರು.

Long term plan for sea erosion: CM Basavaraj Bommai

ಸಮುದ್ರದ ಅಲೆಗಳನ್ನು ತೆಡೆಯುವ ನಿಟ್ಟಿನಲ್ಲಿ ಸೀ ವೇವ್ ಬ್ರೇಕರ್ ಟೆಕ್ನಾಲಜಿಯನ್ನು ಇಲ್ಲಿ ಬಳಕೆ ಮಾಡಲು ತೀರ್ಮಾನ ಮಾಡಲಾಗಿದೆ. ಜನರಿಗೆ ಓಡಾಡುವ ವ್ಯವಸ್ಥೆ ಮಾಡಲಾಗುತ್ತಿದೆ. ಸರಿಯಾದ ಕೆಲಸ ಮಾಡುವ ಮೂಲಕ ಕಡಲ ಕೊರೆತ ಸಮಸ್ಯೆ ಶಾಶ್ವತ ಪರಿಹಾರಕ್ಕೆ ನಮ್ಮ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇವೆ ಎಂದರು.

ರಕ್ಷಣಾ ಕಾರ್ಯ ಪರಿಹಾರಕ್ಕೆ ಹಣದ ಕೊರತೆ ಇಲ್ಲ:

ಭಾರಿ ಮಳೆಯಿಂದ ಸಂಕಷ್ಟಕ್ಕೆ ಈಡಾಗಿರುವವರ ರಕ್ಷಣಾ ಹಾಗೂ ಪರಿಹಾರ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ಈಗಾಗಲೇ ನಮ್ಮ ಬಳಿ ರಾಷ್ಟ್ರೀಯ ವಿಪತ್ತು ನಿರ್ವಹಣೆಗಾಗಿ 750 ಕೋಟಿ ರೂಪಾಯಿ ಹಣ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

Long term plan for sea erosion: CM Basavaraj Bommai

ಅತಿವೃಷ್ಠಿಯಿಂದ ಹಾನಿಗೊಳಗಾಗಿರುವವರ ರಕ್ಷಣಾ ಕಾರ್ಯಕ್ಕೆ ಈಗಾಗಲೇ ಜಿಲ್ಲಾಧಿಕಾರಿಗಳ‌ ಬಳಿ ಹಣ ಇದೆ. ಯಾವುದೇ ಕೊರತೆ ಆಗದ ರೀತಿಯಲ್ಲಿ ನಾವು ನೋಡಿಕೊಳ್ಳುತ್ತೇವೆ ಎಂದರು.

ಕೊಡುಗು ಮತ್ತು ದಕ್ಷಿಣ ಕನ್ನಡದಲ್ಲಿ ‌ಸಿಎಂ ಪ್ರವಾಸ:

ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದಾದ ಹಾನಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೀಕ್ಷಣೆ ಮಾಡಿದರು. ಕೊಡುಗು‌ ಜಿಲ್ಲೆಯಲ್ಲಿ ಕೆಲವು ಭಾಗದಲ್ಲಿ ಭೂ ಕುಸಿತ ಆಗಿದೆ. ಕಾವೇರಿ ಮತ್ತು ಹಾರಂಗಿ ನದಿ ಪಾತ್ರದಲ್ಲಿರುವ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ದಕ್ಷಿಣ ಕನ್ನಡದ ಸುಳ್ಯದಲ್ಲಿ ಭೂ ಕುಸಿತ ಮತ್ತು ಭೂ ಕಂಪನ ಆಗಿರುವ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ನೇತ್ರಾವತಿ ಮತ್ತು ಉಪ್ಪಿನಂಗಡಿಯ ಕುಮಾರದೊರೆ ಸಂಗಮದಲ್ಲಿ ತೋಟಗಳ ಹಾನಿಯಾಗಿದೆ.

Long term plan for sea erosion: CM Basavaraj Bommai

ಬಂಟ್ವಾಳದಲ್ಲಿ ರಸ್ತೆಗಳು ಹಾನಿಯಾಗಿದ್ದು ಭೂ ಕುಸಿತವೂ ಉಂಟಾಗಿದೆ . ಅದನ್ನೆಲ್ಲವನ್ನು ವೀಕ್ಷಿಸಿ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಣೆ ಮಾಡಿಕೊಂಡು ಬಂದಿದ್ದೇನೆ‌. ಉಳ್ಳಾದಲ್ಲಿ ಬಹಳಷ್ಟು ದೊಡ್ಡ ಪ್ರಮಾಣದಲ್ಲಿ ಕಡಲ ಕೊರೆತ ಆಗಿದ್ದು, ಇದರ ವೀಕ್ಷಣೆಗಾಗಿ ಎಂದು ಇಲ್ಲಿಗೆ ಬಂದಿದ್ದೇನೆ ಎಂದು ತಿಳಿಸಿದರು.

Recommended Video

      ಭಾರತದ ವಿರುದ್ಧ ಇಂಗ್ಲೆಂಡ್ ಹೀನಾಯವಾಗಿ ಸೋತ್ಮೇಲೆ ನಗೆ ಪಾಟಲಿಗೀಡಾದ Michael Vaughan | *Cricket | OneIndia

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+