Get Updates
Get notified of breaking news, exclusive insights, and must-see stories!

ಕಲಬುರಗಿ ಕತ್ತಲೆ ನೀಗಿಸಿ, ಕರಾವಳಿಗೆ ಕೋಮುವಾದದ ಹಣೆಪಟ್ಟಿ ಕಟ್ಟಬೇಡಿ: ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ಟಾಂಗ್

ಬೆಂಗಳೂರು: ಕರ್ನಾಟಕ ರಾಜ್ಯ ಸಚಿವರು ಕರಾವಳಿಯಲ್ಲಿ ಐಟಿ ಬಿಟಿ ಬಂಡವಾಳ ಹೂಡಿಕೆ ಬಗ್ಗೆ ಮಾತನಾಡಿದ್ದಾರೆ. ಅದಕ್ಕೂ ಮುನ್ನ ಸರ್ಕಾರ ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ಯಾಕೆ ಐಟಿ-ಬಿಟಿ ಕಂಪನಿಗಳು ಕಾಲಿಟ್ಟಿಲ್ಲ? ಎನ್ನುವುದರ ಕಡೆಗೆ ಗಮನ ಹರಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರುಗೆ ಟಾಂಗ್ ನೀಡಿದ್ದಾರೆ.

ಕೋಮುವಾದದ ಕಾರಣದಿಂದಾಗಿ ಕರಾವಳಿಯಲ್ಲಿ ಐಟಿ ಬಿಟಿ ಕಂಪನಿಗಳು ಹೂಡಿಕೆ ಮಾಡಲು ಮುಂದೆ ಬರುತ್ತಿಲ್ಲ ಎಂದು ಭಾನುವಾರ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿ ಎಕ್ಸ್ ಪೋಸ್ಟ್ ಮಾಡಿರುವ ವಿಜಯೇಂದ್ರ ಅವರು, ಕರಾವಳಿಯ ಮಣ್ಣಿನ ಗುಣ ಮತ್ತು ಅಲ್ಲಿನ ಜನರ ಉದ್ಯಮಶೀಲತೆಯನ್ನು, ಪ್ರಗತಿಯನ್ನು, ತಮ್ಮ ಕೀಳು ರಾಜಕೀಯದ ಕಾಮಾಲೆ ಕಣ್ಣಿನಿಂದ ನೋಡಬೇಡಿ. ವಾಸ್ತವ ನೆಲೆಗಟ್ಟಿನಲ್ಲಿ ನೋಡಬೇಕೆಂದು ಸಚಿವರನ್ನು ಟ್ಯಾಗ್ ಮಾಡಿ ತಿಳಿಸಿದರು.

Look at Kalaburagi

ಕರಾವಳಿಗೆ ಕೋಮುವಾದದ ಹಣೆಪಟ್ಟಿ ಕೆಲಸ ವ್ಯರ್ಥ

ಕರಾವಳಿಗೆ ಕೋಮುವಾದದ ಹಣೆಪಟ್ಟಿ ಹಚ್ಚುವ ಅವರ ವ್ಯರ್ಥ ಪ್ರಯತ್ನ ಅವರ ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ. ಕರಾವಳಿ ಕರ್ನಾಟಕ ತನ್ನ ಸ್ವಂತ ಶಕ್ತಿಯಿಂದ, ಐಟಿ ಬಿಟಿ ಸೇರಿದಂತೆ ಶಿಕ್ಷಣ, ಬ್ಯಾಂಕಿಂಗ್ ಮತ್ತು ಉದ್ಯಮ ರಂಗದಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದೆ. ಅಂತಹ ನಮ್ಮ ಹೆಮ್ಮೆಯ ಕರಾವಳಿ ಜಿಲ್ಲೆಗಳ ಕುರಿತು, ಅನಗತ್ಯವಾಗಿ ಬಂಡವಾಳ ಹೂಡಿಕೆದಾರರನ್ನು ಹೆದರಿಸುವ ಕೆಲಸವನ್ನು ಸ್ವತಃ ರಾಜ್ಯ ಸರ್ಕಾರದ ಐಟಿ-ಬಿಟಿ ಸಚಿವರೇ ಮಾಡುತ್ತಿರುವುದು ದುರದೃಷ್ಟಕರ ಎಂದು ಅವರು ತಿರುಗೇಟು ನೀಡಿದರು.

ರಾಜ್ಯದ ಹಿತ ಕಾಯಬೇಕಾದ ಸಚಿವರೇ ಹೂಡಿಕೆದಾರರಲ್ಲಿ ಭೀತಿ ಹುಟ್ಟಿಸುವ ಮೂಲಕ ಕರಾವಳಿಯ ಆರ್ಥಿಕತೆಗೆ ಕಳಂಕ ಹಚ್ಚುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸದರು. ಇದು ಕರಾವಳಿಯ ಜನರಿಗೆ ಮಾಡುತ್ತಿರುವ ಅವಮಾನವಷ್ಟೇ ಅಲ್ಲ, ತಮ್ಮ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಂಸ್ಕೃತಿಯ ವ್ಯವಸ್ಥಿತ ಸಂಚು ಎಂದು ಅವರು ಆಕ್ರೋಶ ಹೊರ ಹಾಕಿದರು.

ಹಿಂದುಳಿದ ಪಟ್ಟಿಯಲ್ಲಿ ಕಲಬುರಗಿ ಜಿಲ್ಲೆ..!

ಇತ್ತೀಚೆಗೆ ನಿಮ್ಮ ಘನ ಸರ್ಕಾರಕ್ಕೆ ಸಲ್ಲಿಕೆಯಾದ ಡಾ. ಗೋವಿಂದರಾವ್ ಸಮಿತಿ ವರದಿಯೇ ನಿಮ್ಮ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ. ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕು 'ಅತೀ ಹಿಂದುಳಿದ' ಪಟ್ಟಿಯಲ್ಲಿದ್ದರೆ, ಕರಾವಳಿಯು ತನ್ನ ಸ್ವಂತ ಶಕ್ತಿಯಿಂದ ಅಭಿವೃದ್ಧಿ ಹೊಂದಿದ ವಲಯವಾಗಿ ಗುರುತಿಸಿಕೊಂಡಿದೆ. ನಿಮ್ಮ ತವರು ಜಿಲ್ಲೆಯ ಯುವಕ ಯುವತಿಯರಿಗೆ ಶಿಕ್ಷಣ ಮತ್ತು ಉದ್ಯೋಗ ನೀಡಲು ವಿಫಲವಾಗಿರುವ ನೀವು, ಕರಾವಳಿಯ ಜನರ ಉದ್ಯಮಶೀಲತೆಯನ್ನು ಅವಮಾನಿಸುವುದು ನಿಮ್ಮ ರಾಜಕೀಯ ಅಸಮರ್ಥತೆಯನ್ನು, ಅಸಹಾಯಕತೆಯನ್ನು ಮತ್ತು ದುರಂತ ವೈಫಲ್ಯವನ್ನು ತೋರಿಸುತ್ತದೆ. ಮೊದಲು ನಿಮ್ಮ ಭಾಗದ ಅಭಿವೃದ್ಧಿಯತ್ತ ತುರ್ತು ಗಮನಹರಿಸಿ, ನಂತರ ಕರಾವಳಿಯ ಬಗ್ಗೆ ಮಾತನಾಡಿ ಎಂದರು.

ಕಳೆದ ಆರು ದಶಕಗಳಿಂದ ಮಾನ್ಯ ಸಚಿವರ ಕುಟುಂಬದ ಭದ್ರಕೋಟೆಯಾಗಿರುವ ಕಲಬುರಗಿಯ ಸ್ಥಿತಿಯನ್ನೊಮ್ಮೆ ನೋಡಿ ನಂತರ ಕರಾವಳಿ ಬಗ್ಗೆ ಮಾತನಾಡಲಿ. ಸತತವಾಗಿ ಒಂದಿಲ್ಲೊಂದು ಅಧಿಕಾರವನ್ನು ನಿಮ್ಮ ಕುಟುಂಬಕ್ಕೆ ಜನರು ನೀಡಿದರೂ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಸಚಿವ ಸ್ಥಾನಗಳು, ಸಂಸದರು, ಶಾಸಕರು ಎಲ್ಲವೂ ಆಗಿದ್ದರೂ, ಕಲಬುರಗಿಯನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗದವರು, ಕರಾವಳಿಯನ್ನು ಟೀಕಿಸುತಿರುವುದು ಹಾಸ್ಯಾಸ್ಪದ ಎಂದು ಸಚಿವರ ಹೇಳಿಕೆಯನ್ನು ಖಂಡಿಸಿದರು.

ನಿಮ್ಮ ಮನೆಯಂಗಳದ ಕತ್ತಲೆ ತೊಲಗಿ

ಕಲಬುರಗಿ ಇಂದಿಗೂ ಯಾಕೆ ಹಿಂದುಳಿದಿದೆ. ನಿಮ್ಮನ್ನು ನಂಬಿದ ಜನರನ್ನು ಇನ್ನೂ ಹಿಂದುಳಿಯಲು ಬಿಟ್ಟಿದ್ದು ಯಾಕೆ ಎಂದು ಖಾರವಾಗಿ ಪ್ರಶ್ನಿಸಿದರು. ಅಲ್ಲಿ ಯಾಕೆ ಐಟಿ ಬಿಟಿ ಬಂಡವಾಳ ಹಾಕುವಂತೆ ಮಾಡುವುದು ತಮಗೆ ಸಾಧ್ಯವಾಗಿಲ್ಲ? ಆ ಬಗ್ಗೆ ಮಾತನಾಡಿ. ನಿಮ್ಮ ತವರು ಜಿಲ್ಲೆಯ ಯುವಕರು ಉದ್ಯೋಗಕ್ಕಾಗಿ ಇಂದಿಗೂ ಪರದಾಡುತ್ತಿದ್ದಾರೆ. ಕುಡಿಯುವ ನೀರಿಗೂ ಹಾಹಾಕಾರವಿದೆ. ಮೊದಲು ನಿಮ್ಮ ಮನೆಯಂಗಳದ ಕತ್ತಲೆಯನ್ನು ಹೋಗಲಾಡಿಸಿ, ನಂತರ ಬೆಳಗುತ್ತಿರುವ ಕರಾವಳಿಯ ಬಗ್ಗೆ ಮಾತನಾಡುವಂತೆ ಸವಾಲು ಹಾಕಿದರು.

ಕರಾವಳಿಯ ಶಕ್ತಿ ಅಲ್ಲಿನ ಧರ್ಮ ಮತ್ತು ಕರ್ಮದ ಸಮನ್ವಯತೆ. ಸುಮ್ಮನೆ ಅದನ್ನು ಕೆಣಕುವ ಬದಲು, ನಿಮ್ಮ ಆಡಳಿತದ ಅಸಮರ್ಥತೆಯಿಂದ ರಾಜ್ಯದಿಂದ ಹೊರಹೋಗುತ್ತಿರುವ ಕಂಪನಿಗಳನ್ನು ಉಳಿಸಿಕೊಳ್ಳುವತ್ತ ಗಮನಹರಿಸಿ ಎಂದು ಕಿವಿ ಮಾತು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+