ಪೋಷಕರ ಪಾಲನೆ ಮಕ್ಕಳ ಬಾಧ್ಯತೆ, ಚಾರಿಟಿಯಲ್ಲ; ಕೋರ್ಟ್
ಬೆಂಗಳೂರು, ನವೆಂಬರ್ 14: ಮಕ್ಕಳು ಪೋಷಕರನ್ನು ನೋಡಿಕೊಳ್ಳುವುದು ಚಾರಿಟಿಯಲ್ಲ, ಅದು ಅವರ ಬಾಧ್ಯತೆ. ಕಾನೂನು ಧರ್ಮ ಮತ್ತು ನೈತಿಕತೆಯನ್ವಯ ಅದು ಆದ್ಯ ಕರ್ತವ್ಯ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಉಪವಿಭಾಗಾಧಿಕಾರಿಯ ಕ್ರಮವನ್ನು ನ್ಯಾಯಾಲಯ ಎತ್ತಿಹಿಡಿದಿದೆ.
ಮಗಳು ಮತ್ತು ಅಳಿಯ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರ್ಲೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಗಿಫ್ಟ್ ಡೀಡ್ ರದ್ದು: ಏಕಸದಸ್ಯಪೀಠದ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲವೆಂದು ಹೇಳಿರುವ ವಿಭಾಗೀಯ ಪೀಠ, "ಇತ್ತೀಚಿನ ದಿನಗಳಲ್ಲಿ ಪೋಷಕರ ಮೇಲಿನ ಹಲವು ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿದೆ, ಹಲವು ಕಾರಣಗಳಿಂದಾಗಿ ಅವುಗಳಲ್ಲಿಎಲ್ಲೂ ಪೋಷಕರು ಕಾಣಿಸಿಕೊಳ್ಳುವುದಿಲ್ಲ. ಇಂತಹ ಪ್ರಕರಣಗಳಲ್ಲಿ ನ್ಯಾಯಾಲಯಗಳು, ಪ್ರಾಧಿಕಾರಿಗಳು ಸೂಕ್ಷ್ಮವಾಗಿರಬೇಕು, ಹಿರಿಯ ನಾಗರಿಕರ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ" ಎಂದು ನ್ಯಾಯಪೀಠ ಹೇಳಿದೆ.
"ಪೋಷಕರು ಸಂಧ್ಯಾಕಾಲದಲ್ಲಿದ್ದಾಗ ಅವರನ್ನು ನೋಡಿಕೊಳ್ಳುವುದು ಮಕ್ಕಳ ಕರ್ತವ್ಯ, ಅದರಲ್ಲೂ ಮಕ್ಕಳು ಉಡುಗೊರೆ ರೂಪಲ್ಲಿ ಆಸ್ತಿಯನ್ನು ಪಡೆದಿದ್ದಾಗ ಅದನ್ನು ಮಾಡಬೇಲೇಕು. ವಯಸ್ಸಾದ ಅಪ್ಪ ಮತ್ತು ಅಮ್ಮನನ್ನು ನೋಡಿಕೊಳ್ಳುವುದು ಚಾರಿಟಿಯಲ್ಲ, ಶಾಸನಬದ್ಧ ಬಾಧ್ಯತೆ" ಎಂದು ನ್ಯಾಯಪೀಠ ಹೇಳಿದೆ.
ಶತಮಾನಗಳ ಹಿಂದೆಯೇ ನಮ್ಮ ಧಾರ್ಮಿಕ ಗ್ರಂಥಗಳಲ್ಲಿ ರಕ್ಷಂತಿ ಸಥ್ವಿರೇ ಪುತ್ರ ಅಂದರೆ ಪೋಷಕರ ಸಂಧ್ಯಾಕಾಲದಲ್ಲಿದ್ದಾಗ ಅವರನ್ನು ನೋಡಿಕೊಳ್ಳುವುದು ಮಕ್ಕಳ ಕರ್ತವ್ಯವಾಗಿದೆ. 1991ರಲ್ಲಿ ವಿಶ್ವಸಂಸ್ಥೆ ಕೂಡ ಹಿರಿಯರ ಆರೈಕೆಗೆ ನಿರ್ಣಯ ಕೈಗೊಂಡಿದೆ ಎಂದು ಆದೇಶಿಸಿದೆ. ಅರ್ಜಿದಾರರು ತಾವು ರಾಜಶೇಖರಯ್ಯ ಅವರ ಆರೋಗ್ಯಕ್ಕಾಗಿ ಸಾಕಷ್ಟು ಹಣ ಖರ್ಚು ಮಾಡಿದ್ದೇವೆ. ಹಾಗಾಗಿ ಎಸಿ ಆದೇಶ ರದ್ದುಗೊಳಿಸಬೇಕು ಎಂದು ಕೋರಿದ್ದರು.
ಪ್ರಕರಣದ ಹಿನ್ನೆಲೆ ಏನು?; ರಾಜಶೇಖರಯ್ಯ ಅವರ ಪುತ್ರಿ, ಆರ್. ಕವಿತಾ ತುಮಕೂರು ಜಿಲ್ಲೆಯ ಬಸವಾಪಟ್ಟಣದ ಯೋಗೇಶ್ ಅವರನ್ನು ಮದುವೆಯಾಗಿದ್ದರು. 2018ರ ಸೆ.28ರಂದು ತನ್ನ ಆಸ್ತಿಯನ್ನು ಮಗಳಿಗೆ ಗಿಫ್ಟ್ ಡೀಡ್ ಮಾಡಿದ್ದರು. ನಂತರ ರಾಜಶೇಖರಯ್ಯ ಅವರು ಪೋಷಕರು, ಹಿರಿಯ ನಾಗರಿಕ ಕಲ್ಯಾಣ ಮತ್ತು ನಿರ್ವಹಣಾ ಕಾಯಿದೆ 2007ರ ಅನ್ವಯ ಉಪವಿಭಾಗಾಧಿಕಾರಿ ಮುಂದೆ ಅರ್ಜಿ ಹೂಡಿದ್ದರು.
ಅವರು ತನ್ನ ಮಗಳು ಮತ್ತು ಅಳಿಯ ತಹಸೀಲ್ದಾರ್ ಕಚೇರಿಗೆ ವೃದ್ಧಾಪ್ಯ ವೇತನ ಮಾಡಿಸಲು ಎಂದು ಕರೆದುಕೊಂಡು ಹೋಗಿ ಹಲವು ಕಾಗದ ಪತ್ರಗಳಿಗೆ ಸಹಿ ಹಾಕಿಸಿಕೊಂಡಿದ್ದರು. ಅಲ್ಲದೆ, ತನ್ನಿಂದ ಮನೆ ನಿರ್ಮಾಣಕ್ಕೆ 10 ಲಕ್ಷ ರೂ.ಗಳನ್ನು ಪಡೆದುಕೊಂಡಿದ್ದರು ಮತ್ತು ಮನೆ ನಿರ್ಮಾಣಕ್ಕೆ ಮಾಡಿರುವ ಸಾಲ ತೀರಿಸಲು ಆಸ್ತಿ ಮಾರಾಟ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದರು.
ಅದಕ್ಕೆ ಪ್ರತಿಯಾಗಿ ಎಸಿ ಮುಂದೆ ಹಾಜರಾದ ಮಗಳು ಮತ್ತು ಅಳಿಯ, ತಾವೇ ರಾಜಶೇಖರಯ್ಯ ಮತ್ತು ಮತ್ತೊಬ್ಬ ಮಗಳು ನಿರ್ಮಲಾರನ್ನು ಅವರನ್ನು ನೋಡಿಕೊಳ್ಳುತ್ತಿದ್ದೇವೆ. ಅವರ ವೈದ್ಯಕೀಯ ಚಿಕಿತ್ಸೆಗಾಗಿ 30 ಲಕ್ಷ ಖರ್ಚು ಮಾಡಿದ್ದೇವೆ ಎಂದು ವಾದಿಸಿದ್ದರು.
ಆದರೆ ಉಪವಿಭಾಗಾಧಿಕಾರಿ 2021ರ ಫೆ.24ರಂದು ಗಿಫ್ಟ್ ಡೀಡ್ ನಲ್ಲಿಕವಿತಾ ತನ್ನ ತಂದೆಯನ್ನು ನೋಡಿಕೊಳ್ಳಬೇಕೆಂಬ ಷರತ್ತು ವಿಧಿಸಲಾಗಿದೆ. ಆದರೆ ಮಗಳು ಮತ್ತು ಅಳಿಯ ರಾಜಶೇಖರಯ್ಯ ಅವರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಿ ಗಿಫ್ಟ್ ಡೀಡ್ ಅನ್ನು ರದ್ದುಗೊಳಿಸಿದ್ದರು. ಅದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಏಕಸದಸ್ಯಪೀಠದ ಮೊರೆ ಹೋಗಿದ್ದರು. ಏಕಸದಸ್ಯಪೀಠವೂ ಎಸಿ ಆದೇಶ ಎತ್ತಿಹಿಡಿದ ಹಿನ್ನೆಲೆಯಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications