LPG Subsidy: ಎಲ್ಪಿಜಿ ಸಬ್ಸಿಡಿ ಹಣ ಬರಲು ಇದು ಕಡ್ಡಾಯ, ಇಲ್ಲದಿದ್ದರೆ ರದ್ದು!
ಎಲ್ಪಿಜಿ ಸಿಲಿಂಡರ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರವು ಸಾರ್ವಜನಿಕರ ಹೊರೆ ತಗ್ಗಿಸಲು ಎಲ್ಪಿಜಿಗೆ ಸಬ್ಸಿಡಿ ಘೋಷಣೆ ಮಾಡಿದೆ. ಇದು ಗ್ರಾಹಕರ ಖಾತೆಗೆ ನೇರವಾಗಿ ಜಮೆ ಕೂಡ ಆಗುತ್ತಿದೆ. ಆದರೆ ಇನ್ನು ಮುಂದೆ ನಿಮಗೆ ಸಬ್ಸಿಡಿ ಹಣ ಸಿಗಬೇಕಾದರೆ ಈ ಕೆಲಸವನ್ನು ಕಡ್ಡಾಯವಾಗಿ ಮಾಡಿರಲೇಬೇಕು. ಇಲ್ಲದಿದ್ದರೆ ನಿಮ್ಮ ಸಬ್ಸಿಡಿ ರದ್ದಾಗುವ ಸಾಧ್ಯತೆ ಇದೆ. ಏನು ಈ ಹೊಸ ನಿಯಮ ಮಾಹಿತಿ ತಿಳಿಯಲು ಮುಂದೆ ಓದಿ.
ತೈಲ ಮಾರುಕಟ್ಟೆ ಕಂಪನಿಗಳಾದ ಐಒಸಿಎಲ್, ಎಚ್ಪಿಸಿಎಲ್ ಮತ್ತು ಬಿಪಿಸಿಎಲ್ ಎಲ್ಪಿಜಿ ಗ್ರಾಹಕರಿಗೆ ಮಹತ್ವದ ಮಾಹಿತಿ ನೀಡಿದೆ. ಈ ಹಣಕಾಸು ವರ್ಷದಿಂದ ಪ್ರಾರಂಭಿಸಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಗ್ರಾಹಕರು ಸೇರಿದಂತೆ ಸಬ್ಸಿಡಿ ಪಡೆಯುವ ಗೃಹಬಳಕೆ ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಕಡ್ಡಾಯಗೊಳಿಸುವುದಾಗಿ ಹೇಳಿವೆ. ಸಬ್ಸಿಡಿ ಪಡೆಯುವುದನ್ನು ಮುಂದುವರಿಸಲು ಗ್ರಾಹಕರು ಬಯೋಮೆಟ್ರಿಕ್ ಆಧಾರ್ ದೃಢೀಕರಣಕ್ಕೆ ಒಳಗಾಗಬೇಕು. ಈ ಬಗ್ಗೆ ಗೃಹಬಳಕೆ ಎಲ್ಪಿಜಿ ಗ್ರಾಹಕರಿಗೆ ತಿಳಿಸುವಂತೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈಗಾಗಲೇ ಒಎಂಸಿಗಳಿಗೆ ನಿರ್ದೇಶನ ಸಹ ನೀಡಿದೆ.

ಹೀಗಾಗಿ ಇನ್ನು ಮುಂದೆ ಮರುಪೂರಣ ಖರೀದಿಗಳ ಮೇಲೆ ಸಬ್ಸಿಡಿ ಪಡೆಯುವ ದೇಶೀಯ ಎಲ್ಪಿಜಿ ಗ್ರಾಹಕರು ಬಯೋಮೆಟ್ರಿಕ್ ಆಧಾರ್ ದೃಢೀಕರಣಕ್ಕೆ ಒಳಗಾಗದೆ ಇದ್ದರೆ ಯಾವುದೇ ಸಬ್ಸಿಡಿ ಸಿಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಎಲ್ಪಿಜಿ ದುರುಪಯೋಗ ಮತ್ತು ಸೋರಿಕೆಯನ್ನು ತಡೆಗಟ್ಟಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಒಎಂಸಿಯ ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ಇ-ಕೆವೈಸಿ ಮಾಡದವರಿಗೆ ಸಬ್ಸಿಡಿ ನಿಲ್ಲಿಸಲಾಗುವುದು ಎಂದು ಕಂಪನಿಗಳು ತಿಳಿಸಿವೆ.
ಎಲ್ಪಿಜಿ ಸಬ್ಸಿಡಿ ಪಡೆಯುವ ಗ್ರಾಹಕರು ಪ್ರತಿ ವರ್ಷವೂ ಈ ಕೆವೈಸಿಗೆ ಒಳಗಾಗಬೇಕು ಎಂದು ತೈಲ ಕಂಪನಿಗಳು ಸ್ಪಷ್ಟವಾಗಿ ಹೇಳಿವೆ. ಈ ಹಣಕಾಸು ವರ್ಷದ ಇ-ಕೆವೈಸಿ ಮಾರ್ಚ್ 31ರೊಳಗೆ ಈ ಪ್ರಕ್ರಿಯೆ ಪೂರ್ಣಗೊಂಡರೆ ಮಾತ್ರವೇ ಸಬ್ಸಿಡಿ ಹಣ ಮರುಪಾವತಿಸಲಾಗುತ್ತದೆ. ಇಲ್ಲದಿದ್ದರೆ, ಅದನ್ನು ಶಾಶ್ವತವಾಗಿ ರದ್ದು ಮಾಡುವುದಾಗಿ ಹೇಳಿವೆ. ಅಲ್ಲದೆ ಕೂಡಲೇ ಈ ಪ್ರಕ್ರಿಯೆಯನ್ನು ಡೆಡ್ಲೈನ್ವೊಳಗೆ ಪೂರ್ಣಗೊಳಿಸಬೇಕು ಎಂದು ತೈಲ ಕಂಪನಿಗಳು ಹೇಳಿದೆ.
ಇನ್ನು ಮುಂದೆ ಪ್ರತಿ ಹಣಕಾಸು ವರ್ಷದಲ್ಲಿ ಒಮ್ಮೆ ಇ-ಕೆವೈಸಿಗೆ ಮಾಡಿಸುವುದು ಕಡ್ಡಾಯ. ಕೇಂದ್ರ ಸರ್ಕಾರವು ವರ್ಷಕ್ಕೆ ಗರಿಷ್ಠ 9 ಸಿಲಿಂಡರ್ಗಳಿಗೆ ಈ ಸಬ್ಸಿಡಿ ನೀಡುತ್ತಿದೆ. ಹೀಗಾಗಿ ಹಣ ಬಿಡುಗಡೆ ಮಾಡುವ ಮುನ್ನ ಪರಿಶೀಲನೆ ಪೂರ್ಣಗೊಳಿಸಿದ ನಂತರ 8 ಮತ್ತು 9ನೇ ಸಿಲಿಂಡರ್ಗಳಿಗೆ ಸಬ್ಸಿಡಿ ನೀಡುತ್ತಿದೆ. ಒಂದು ವೇಳೆ ಪರಿಶೀಲನೆ ತಡವಾದರೆ ಅದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.
ಇ-ಕೆವೈಸಿ ಮಾಡಿಸುವುದು ಹೇಗೆ?
ಎಲ್ಪಿಜಿ ಗ್ರಾಹಕರು ಚಿಂತೆಪಡಬೇಕಿಲ್ಲ. ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ನೀವು ಸಮೀಪದ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಬಹುದು. ಲಭ್ಯವಿರುವ ಅಪ್ಲಿಕೇಶನ್ ಮೂಲಕವೂ ಇದನ್ನು ಮಾಡಬಹುದು. ಸಬ್ಸಿಡಿ, ಇ-ಕೆವೈಸಿ ಪ್ರಕ್ರಿಯೆ ಅಥವಾ ಬಯೋಮೆಟ್ರಿಕ್ ಪರಿಶೀಲನಾ ವಿಧಾನಗಳ ಕುರಿತು ಸಂಪೂರ್ಣ ವಿವರಗಳನ್ನು ತಿಳಿಯಲು http://www.pmuy.gov.in/e-kyc.html ವೆಬ್ಸೈಟ್ಗೆ ಕೂಡ ಭೇಟಿ ನೀಡಬಹುದು.
-
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Horoscope March 2: ಈ ರಾಶಿಯವರಿಗೆ ಸಕಾರಾತ್ಮಕ ಪ್ರಗತಿ, ಮೇಷ-ಮೀನ ರಾಶಿಯವರೆಗೆ ಇಂದಿನ ದಿನ ಭವಿಷ್ಯ -
ಮಧ್ಯಪ್ರಾಚ್ಯದಲ್ಲಿ ವಿಮಾನಗಳ ಸಂಚಾರ ವ್ಯತ್ಯಯ: ಕರ್ನಾಟಕದ ನಾಗರಿಕರಿಗೆ ಸರ್ಕಾರ ನೆರವು -
Gold Rate : ಆಭರಣ ಪ್ರಿಯರಿಗೆ ಬಿಗ್ ಶಾಕ್; ಭಾರಿ ಏರಿಕೆ ಕಂಡ ಚಿನ್ನ- ಬೆಳ್ಳಿ ದರ, ಇಲ್ಲಿದೆ ಇಂದಿನ ಬೆಲೆ ಪಟ್ಟಿ -
Iran Vs America, Israel ಯುದ್ಧ ತೀವ್ರ: ಗಲ್ಫ್ ರಾಷ್ಟ್ರಗಳಿಗೂ ವ್ಯಾಪಿಸಿದ ಸಂಕಷ್ಟ; ಈ ಕ್ಷಣದ 10 ಪ್ರಮುಖ ಬೆಳವಣಿಗೆಗಳು -
ಯುದ್ಧದ ನಡುವೆಯೂ ಸರ್ವಧರ್ಮ ಸಮನ್ವಯತೆ ಸಂದೇಶ: ನಮ್ ಭಾರತ ಅಂದ್ರೆ ಹೀಗೆ ಅಂತಾ ವಿಶ್ವಕ್ಕೆ ಸಾರಿದ ಸಂಜು ಸ್ಯಾಮ್ಸನ್ -
Gold Price: ಇಂದು ಚಿನ್ನದ ಬೆಲೆಯಲ್ಲಿ ದಾಖಲೆಯ ಕುಸಿತ, ಯುದ್ಧದ ಎಫೆಕ್ಟ್ನಿಂದ ಬಂಗಾರ-ಬೆಳ್ಳಿ ಮತ್ತಷ್ಟು ದುಬಾರಿ! ಮುನ್ಸೂಚನೆ -
ಕರ್ನಾಟಕದ ಅಲಿಪುರದಲ್ಲಿ ಇರಾನ್ ನಾಯಕ ಖಮೇನಿ ಅಂದು ಆಡಿದ್ದ ಮಾತುಗಳೇನು ? -
Donald Trump: ಅಮೆರಿಕ, ಇಸ್ರೇಲ್ Vs ಇರಾನ್ ಯುದ್ಧದ ಬಗ್ಗೆ ಬಿಗ್ ಅಪ್ಡೇಟ್ಸ್ ಕೊಟ್ಟ ಡೊನಾಲ್ಡ್ ಟ್ರಂಪ್, ಏನದು -
ಮೂತ್ರ ವಿಸರ್ಜನೆ ವಿಡಿಯೋಗೆ ಕಿಚ್ಚ ಸುದೀಪ್ ಹಾಡು: ಬಿಗ್ಬಾಸ್ ಡಾಗ್ ಸತೀಶ್ ವಿರುದ್ಧ ರಜತ್ ದೂರು












Click it and Unblock the Notifications