ಕಾಂಗ್ರೆಸ್ ಸೇರುವ ಬಗ್ಗೆ ಎಲ್. ಆರ್. ಶಿವರಾಮೇಗೌಡ ಹೇಳಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 26 : ಜೆಡಿಎಸ್ ನಾಯಕ, ಮಂಡ್ಯ ಕ್ಷೇತ್ರದ ಮಾಜಿ ಸಂಸದ ಎಲ್. ಆರ್. ಶಿವರಾಮೇಗೌಡ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಉಪ ಚುನಾವಣೆ ಸಮಯದಲ್ಲಿ ಹಬ್ಬಿರುವ ಸುದ್ದಿಗಳಿಗೆ ಅವರು ಸ್ಪಷ್ಟನೆಯನ್ನು ನೀಡಿದ್ದಾರೆ.
ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಾಂಗ್ರೆಸ್ ನಾಯಕರು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಬುಧವಾರ ಸಭೆ ಸೇರಿದ್ದರು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸಭೆಯಲ್ಲಿದ್ದರು.
ಕಾಂಗ್ರೆಸ್ ನಾಯಕರ ಸಭೆ ನಡೆಯುವಾಗಲೇ ಎಲ್. ಆರ್. ಶಿವರಾಮೇಗೌಡ ಹೋಟೆಲ್ಗೆ ಭೇಟಿ ನೀಡಿದ್ದು ಕುತೂಹಲಕ್ಕೆ ಕಾರಣವಾಗಿತ್ತು. ಶಿವರಾಮೇಗೌಡರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು.
ಗುರುವಾರ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಎಲ್. ಆರ್. ಶಿವರಾಮೇಗೌಡ ಈ ಸುದ್ದಿಗಳಿಗೆ ಸ್ಪಷ್ಟನೆಯನ್ನು ನೀಡಿದ್ದಾರೆ. ಮೊದಲು ಕಾಂಗ್ರೆಸ್ನಲ್ಲಿಯೇ ಇದ್ದ ಎಲ್. ಆರ್. ಶಿವರಾಮೇಗೌಡರು 2018ರ ವಿಧಾನಸಭೆ ಚುನಾವಣೆಗೂ ಮೊದಲೇ ಜೆಡಿಎಸ್ಗೆ ಬಂದಿದ್ದರು.

ಶಿವರಾಮೇಗೌಡರ ಸ್ಪಷ್ಟನೆ
ತಮ್ಮ ಫೇಸ್ ಬುಕ್ ಪುಟದಲ್ಲಿ ಎಲ್. ಆರ್. ಶಿವರಾಮೇಗೌಡರು, ಪ್ರತಿದಿನ ನಾನು Radisson Blu / Radisson Blu Atria Bengaluru ಹೋಟೆಲ್ ಬರುತ್ತಿರುತ್ತೇನೆ. ಹೀಗೆ ಬಂದ ಸಂದರ್ಭದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಸಭೆಗೂ ನನಗೂ ಯಾವುದೇ ಸಂಬಂಧ ಕಲ್ಪಿಸುವುದು ಬೇಡ. ಪ್ರಸ್ತುತ ನಾನು ಜೆಡಿಎಸ್ನ ಸಕ್ರಿಯ ಕಾರ್ಯಕರ್ತ, ನಮ್ಮ ಸ್ನೇಹಿತರನ್ನು ಭೇಟಿಯಾಗಲೂ ಮತ್ತು ಇನ್ನಿತರ ವಿಷಯಗಳಿಗೆ ನಾನು ಇಲ್ಲಿ ಬರುವುದು ಸರ್ವೇ ಸಾಮಾನ್ಯ ನನಗೂ & ಈ ಸಭೆಗೂ ಯಾವುದೇ ಸಂಬಂಧ ವಿಲ್ಲ ಎಂದು ಹೇಳಿದ್ದಾರೆ.

ಹಿಂದೆಯೂ ಸ್ಪಷ್ಟನೆ ಕೊಟ್ಟಿದ್ದರು
2019ರ ಲೋಕಸಭಾ ಚುನಾವಣೆ ಸಮಯದಲ್ಲಿಯೂ ಶಿವರಾಮೇಗೌಡ ಜೆಡಿಎಸ್ ಬಿಡುವ ಸುದ್ದಿಗಳು ಹಬ್ಬಿದ್ದವು. ಆಗ ಅವರು, "ಶಿವರಾಮೇಗೌಡರನ್ನು ಯಾರೂ ಕೊಂಡುಕೊಳ್ಳಲು ಸಾಧ್ಯವಿಲ್ಲ. ನಾನಾಗಿಯೇ ಹೋಗಬೇಕೆ ಹೊರತು ಯಾರೂ ನನ್ನನ್ನು ಕರೆಯುವುದಿಲ್ಲ. ಜೆಡಿಎಸ್ನಲ್ಲೇ ನನ್ನ ರಾಜಕೀಯ ಅಂತ್ಯ" ಎಂದು ಸ್ಪಷ್ಟನೆ ನೀಡಿದ್ದರು.

ದೇವೇಗೌಡ, ಎಚ್ಡಿಕೆ ಹಿತ್ತಾಳೆ ಕಿವಿ
ಕಳೆದ ವಾರ ಎಲ್. ಆರ್. ಶಿವರಾಮೇಗೌಡರು, "ಎಚ್. ಡಿ. ದೇವೇಗೌಡ ಮತ್ತು ಎಚ್. ಡಿ. ಕುಮಾರಸ್ವಾಮಿ ಅವರ ದೇಹವೆಲ್ಲಾ ಬಂಗಾರ. ಆದರೆ, ಕಿವಿ ಮಾತ್ರ ಹಿತ್ತಾಳೆ. ದೇವೇಗೌಡ, ಕುಮಾರಸ್ವಾಮಿ ಮತ್ತು ನನ್ನ ನಡುವೆ ಯಾವುದೇ ಅಸಮಾಧಾನವಿಲ್ಲ. ಅಸಮಾಧಾನ ವಿದ್ದರೆ ಬಗೆ ಹರಿಸಿಕೊಳ್ಳುತ್ತೇವೆ" ಎಂದು ಹೇಳಿದ್ದರು.

ಎಚ್. ಡಿ. ರೇವಣ್ಣ ವಾಗ್ದಾಳಿ
"ಎಚ್. ಡಿ. ದೇವೇಗೌಡ ಮತ್ತು ಎಚ್. ಡಿ. ಕುಮಾರಸ್ವಾಮಿ ಅವರ ದೇಹವೆಲ್ಲಾ ಬಂಗಾರ. ಆದರೆ, ಕಿವಿ ಮಾತ್ರ ಹಿತ್ತಾಳೆ" ಎಂದು ಹೇಳಿದ್ದ ಎಲ್. ಆರ್. ಶಿವರಾಮೇಗೌಡ ವಿರುದ್ಧ ಎಚ್. ಡಿ. ರೇವಣ್ಣ ವಾಗ್ದಾಳಿ ನಡೆಸಿದ್ದರು.
"ಕಸದಬುಟ್ಟಿಯಲ್ಲಿ ಇದ್ದವರನ್ನು ತೆಗೆದುಕೊಂಡು ಗೆಲ್ಲಿಸುತ್ತಾರೆ. ಶಿವರಾಮೇಗೌಡ ಅಂಥವರನ್ನು ಬೆಳೆಸುತ್ತಾರೆ. ಇದು ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ದೌರ್ಭಾಗ್ಯ" ಎಂದು ಹೇಳಿದ್ದರು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications