ಐಷಾರಾಮಿ ಕಾರುಗಳ ತೆರಿಗೆ ವಂಚನೆ ಪ್ರಕರಣಗಳು ಸಿಐಡಿ ತನಿಖೆಗೆ: ಶ್ರೀರಾಮುಲು
ಬೆಂಗಳೂರು, ಮಾ.25: ಐಷಾರಾಮಿ ಕಾರುಗಳ ತೆರಿಗೆ ವಂಚನೆ ಪ್ರಕರಣವನ್ನು ಪತ್ತೆಹಚ್ಚಲು ಸಿಐಡಿ ತನಿಖೆಗೆ ಆದೇಶಿಸಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.
ರಾಜ್ಯದಲ್ಲಿ ಐಷಾರಾಮಿ ಕಾರುಗಳ ತೆರಿಗೆ ವಂಚನೆ ಕುರಿತು ವಿಧಾನ ಪರಿಷತ್ತಿನಲ್ಲಿ ಸದಸ್ಯ ಸಿ.ಎನ್. ಮಂಜೇಗೌಡ ಅವರ ಪ್ರಶ್ನೆಗೆ ಶುಕ್ರವಾರ ಲಿಖಿತ ಉತ್ತರ ನೀಡಿದ ಶ್ರೀರಾಮುಲು ಅವರು ಬಳಿಕ ನಡೆದ ಚರ್ಚೆಯಲ್ಲಿ ಈ ವಿಷಯ ಹೇಳಿದರು.
ಸಾರಿಗೆ ಕಚೇರಿಗಳಲ್ಲಿ 2015ರ ಏಪ್ರಿಲ್ 1ರಿಂದ 2021ರ ನವೆಂಬರ್ 30ರವರೆಗೆ ಹಲವು ಐಷಾರಾಮಿ ಕಾರುಗಳ ನೋಂದಣಿಯಲ್ಲಿ ತೆರಿಗೆ ವಂಚನೆ ಆಗಿರುವ ಪ್ರಕರಣಗಳು ಪತ್ತೆಯಾಗಿವೆ. ಸಿಐಡಿ ತನಿಖೆ ಮೂಲಕ ತೆರೆಗೆ ವಂಚಿಸಿರುವುದು ಖಚಿತವಾದಂತಹ ಕಾರುಗಳನ್ನು ಜಪ್ತಿ ಮಾಡಲಾಗುವುದು ಎಂದು ಶ್ರೀರಾಮುಲು ಸದನಕ್ಕೆ ತಿಳಿಸಿದರು.

ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಇಲಾಖಾ ಮಟ್ಟದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಲಾಗಿತ್ತು. 20 ಲಕ್ಷಕ್ಕೂ ಹೆಚ್ಚು ಬೆಲೆಯ ಕಾರುಗಳ ನೋಂದಣಿ ವೇಳೆ ತೆರಿಗೆ ವಂಚನೆಯಾಗಿರುವ ಹಲವು ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಇದರಿಂದ ಸರ್ಕಾರಕ್ಕೆ ತೆರಿಗೆ ವಂಚನೆಯಾಗಿದೆ. ಸರ್ಕಾರ ಈಗಾಗಲೇ ಕೆಲವು ವಾನಗಳನ್ನು ಜಪ್ತಿ ಮಾಡಿಕೊಂಡು ಸುಮಾರು 1.64 ಕೋಟಿ ರೂ. ವಸೂಲಿ ಮಾಡಿದೆ. ರಾಜ್ಯದಲ್ಲಿ ಸುಮಾರ 124 ಈ ರೀತಿಯ ಪ್ರಕರಣಗಳು ಕಂಡುಬಂದಿವೆ ಎಂದು ಸಚಿವರು ವಿವರಿಸಿದರು.
ಅಲ್ಲದೆ, ತೆರಿಗೆ ಪಾವತಿಸಿಕೊಳ್ಳದೆ ವಾಹನಗಳ ನೋಂದಣಿ ಮಾಡಿರುವ ಪ್ರಕರಣಗಳ ಕುರಿತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೇತೃತ್ವದಲ್ಲಿ ತಂಡವನ್ನು ರಚಿಸಿ, ವಿಚಾರಣೆಯನ್ನೂ ಕೈಗೊಳ್ಳಲಾಗಿದೆ. ಈ ಸಂಬಂದ ಪ್ರಾಥಮಿಕ ವರದಿ ನೀಡಿದ್ದಾರೆ. ಈ ಸಂಬಂಧ ಉನ್ನತ ಮಟ್ಟದ ತನಿಖೆಯ ಅಗತ್ಯತೆಯೂ ಕಂಡುಬಂದಿದೆ. ಶೀಘ್ರದಲ್ಲಿಯೇ ಉನ್ನತಾಧಿಕಾರ ಸಮಿತಿ ರಚಿಸಿ ಅದರ ವರದಿ ಬಂದ ಬಳಿಕ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಶ್ರೀರಾಮುಲು ತಿಳಿಸಿದರು.
Recommended Video
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications