ಸ್ಪಷ್ಟನೆ ಕೋರಿ ಸಿಎಂ ಯಡಿಯೂರಪ್ಪಗೆ ಎಂ.ಬಿ. ಪಾಟೀಲ್ ಪತ್ರ!
ಬೆಂಗಳೂರು, ಅ. 08: ಕೃಷ್ಣಾ ನೀರಿನ ಮರು ಹಂಚಿಕೆ ಕುರಿತು ಹೊಸ ನ್ಯಾಯಾಧೀಕರಣ ರಚನೆ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರು ಹಾಗೂ ಆಂಧ್ರ ಮತ್ತು ತೆಲಂಗಾಣದ ಮುಖ್ಯಮಂತ್ರಿಗಳ ನಡುವಿನ ಸಭೆಯ ಕುರಿತಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರ ಹೇಳಿಕೆ ಗೊಂದಲಮಯವಾಗಿದೆ ಎಂದು ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದು ಈ ವಿಚಾರ ಪ್ರಸ್ತಾಪಿಸಿದ್ದಾರೆ. ಕೃಷ್ಣಾ ನ್ಯಾಯಾಧೀಕರಣ ತೀರ್ಪಿನ ಕುರಿತು ನಮಗೆ ಅನ್ಯಾಯ ಆಗಿದೆ ಎಂದು ರಾಜ್ಯಗಳ ವಿಭಜನೆಯ ನಂತರ ತೆಲಂಗಾಣ ಮತ್ತು ಆಂಧ್ರಪ್ರದೇಶಗಳು ಪರಸ್ಪರ ಸುಪ್ರಿಂ ಕೋರ್ಟ್ ಹಾಗೂ ನ್ಯಾಯಾಧೀಕರಣದಲ್ಲಿ ದಾವೆ ಹೂಡಿವೆ.
ನ್ಯಾಯಾಧೀಕರಣ ಈಗಾಗಲೇ ನಿರ್ಣಯಿಸಿದಂತೆ ಇದು ಆ ಎರಡೂ ರಾಜ್ಯಗಳ ನಡುವಿನ ಆಂತರಿಕ ವ್ಯಾಜ್ಯವಾಗಿದೆ. ರಾಜ್ಯ ಪುನರ್ ವಿಂಗಡನೆ ಕಾಯ್ದೆ ಸೆಕ್ಷನ್ 80ರ ಪ್ರಕಾರ (Matter Between two Successive State) ಎಂದು ಈಗಾಗಲೇ ಬ್ರಿಜೇಶಕುಮಾರ ನೇತೃತ್ವದ ಕೃಷ್ಣಾ ನ್ಯಾಯಾಧೀಕರಣ ತೀರ್ಪು ನೀಡಿದೆ. ಮತ್ತು ಸುಪ್ರೀಂಕೋರ್ಟ್ನಲ್ಲಿ ಕೇಂದ್ರ ಸರ್ಕಾರವು ಕೂಡ ಇದೇ ನಿಲುವನ್ನು ಅಫಿಡವಿಟ್ ಮೂಲಕ ಸಲ್ಲಿಸಿದೆ.

ಆದ್ದರಿಂದ ಕೃಷ್ಣಾ ನ್ಯಾಯಾಧೀಕರಣ ತೀರ್ಪಿನ ನೀರಿನ ಮರು ಹಂಚಿಕೆ ಆ ಎರಡು ರಾಜ್ಯಗಳಿಗೆ ಸೀಮಿತವಾಗಿದ್ದು, ಹೊರತು ಕರ್ನಾಟಕಕ್ಕೆ ಅಲ್ಲ. ಆದರೆ ಈ ಹಂತದಲ್ಲಿ ಕೇಂದ್ರದ ಮಂತ್ರಿಗಳು ಹಾಗೂ ಆಂಧ್ರ ಮತ್ತು ತೆಲಂಗಾಣದ ಮುಖ್ಯಮಂತ್ರಿಗಳ ಸಭೆ ಕರ್ನಾಟಕ ಹಿತಾಸಕ್ತಿಗೆ ಧಕ್ಕೆಯಾಗುವ ಅನುಮಾನಕ್ಕೆ ಎಡೆಮಾಡಿದೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಮಾನ್ಯ ಮುಖ್ಯಮಂತ್ರಿಗಳು ಈ ಕೂಡಲೇ ಸರ್ವಪಕ್ಷ ಸಭೆ ಕರೆದು ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಪರವಾಗಿ ಮನವರಿಕೆ ಮಾಡುವುದರ ಜೊತೆಗೆ ರಾಜ್ಯದ ನೀರಿನ ಹಿತಾಸಕ್ತಿ ಕಾಪಾಡಲು ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು.
ಕರ್ನಾಟಕದ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ಕೂಡಲೇ ಸ್ಪಷ್ಟನೆ ನೀಡಬೇಕು ಎಂದು ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರದಲ್ಲಿ ಎಂ.ಬಿ. ಪಾಟೀಲ್ ಮನವಿ ಮಾಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications