ವಿಧಾನಪರಿಷತ್ ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆ
ಬೆಳಗಾವಿ,ಡಿಸೆಂಬರ್ 23: ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಎಂ.ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ.
ಇಂದು (ಡಿಸೆಂಬರ್ 23) ರಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆದಿದ್ದು, ಎಂ,ಕೆ ಪ್ರಾಣೇಶ್ ನಾಮಪತ್ರ ಸಲ್ಲಿಸಿದ್ದರು. 39 ಮತ ಪಡೆಯುವ ಮೂಲಕ ಸಭಾಪತಿಯಾಗಿ ಎಂ,ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ.
ಇನ್ನೂ, ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅರವಿಂದ ಅರಳಿ 26 ಮತ ಪಡೆದಿದ್ದರೆ, ಕೂಡ ಉಪ ಸಭಾಪತಿ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಕೋಟಾ ಶ್ರೀನಿವಾಸ್ ಪೂಜಾರಿ, ಎಸ್. ರುದ್ರೇಗೌಡ,ತಳವಾರ್ ಸಾಬಣ್ಣ, ಅರುಣ್ ಡಿಎಸ್ ಅವರು ಬಿಜೆಪಿಯಿಂದ ಎಂ.ಕೆ ಪ್ರಾಣೇಶ್ ಹೆಸರು ಉಪಸಭಾಪತಿ ಸ್ಥಾನಕ್ಕೆ ಪ್ರಸ್ತಾಪ ಮಾಡಿದರು. ಉಪಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಅರವಿಂದ ಕುಮಾರ್ ಅರಳಿ ಅವರ ಹೆಸರನ್ನು ಬಿ.ಕೆ. ಹರಿಪಸ್ರಾದ್ ಪ್ರಸ್ತಾಪ ಮಾಡಿದರು.

ಇನ್ನೂ ಪರಿಷತ್ ನಲ್ಲಿ ಗದ್ದಲದ ನಡುವೆಯೇ ಚುನಾವಣೆ ಪ್ರಕ್ರಿಯೆ ಮುಂದುವರಿದಿದೆ. ಸದಸ್ಯರು ಎದ್ದು ನಿಂತು ಮತ ಹಾಕುವಂತೆ ಸಭಾಪತಿ ಸೂಚನೆ ನೀಡಿದರು. ಪ್ರಾಣೇಶ್ ಪರ ಮತ ಚಲಾಯಿಸುವವರು ಎದ್ದು ನಿಲ್ಲುವಂತೆ ಸೂಚಿಸಿದ್ದು ಪ್ರಾಣೇಶ್ ಪರ 39 ಮತಗಳು ಚಲಾವಣೆಗೊಂಡಿವೆ. ಇನ್ನೂ ಜೆಡಿಎಸ್ ಪಕ್ಷದಿಂದ ಯಾರೊಬ್ಬರೂ ಕೂಡ ಮತ ಚಲಾಯಿಸಿರಲಿಲ್ಲ.
ಪ್ರಸ್ತಾವದ ಪರವಾಗಿ 39 ಮತಗಳು ಬಂದಿವೆ. ಪ್ರಸ್ತಾವದ ವಿರೋಧವಾಗಿ 26 ಮತಗಳು ಬಂದವು. ಅಂತಿಮವಾಗಿ ಪ್ರಾಣೇಶ್ ಅವರು ಉಪಸಭಾಪತಿಯಾಗಿ ಆಯ್ಕೆಯಾಗಿದ್ದಾರೆಂದು ಸಭಾಪತಿ ಬಸವರಾಜ್ ಹೊರಟ್ಟಿ ಘೋಷಣೆ ಮಾಡಿದರು.

ನೂತನ ಉಪ ಸಭಾಪತಿಗಳಿಗೆ ಅಭಿನಂದನೆ
ನೂತನ ಉಪ ಸಭಾಪತಿ ಪ್ರಾಣೇಶ್ ಅವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಎಲ್ಲಾ ನಾಯಕರು ಅಭಿನಂದಿಸಿದರು. ಈ ವೇಳೆ ಮಾತನಾಡಿದ ಸಚಿವ ಮಾಧುಸ್ವಾಮಿ, ಹಳೇ ಬೇರು, ಹೊಸ ಚಿಗುರು ಎನ್ನುವ ರೀತಿಯಲ್ಲಿದೆ. ಒಳ್ಳೆಯಾದಾಗಲಿ, ಧರ್ಮೇಗೌಡರು ಆಕಾಲಿಕ ನಿಧನದಿಂದ ಪ್ರಾಣೇಶ್ ಅವರನ್ನು ಕೂರಿಸಬೇಕಾಯಿತು. ಅವರು ಚಿಕ್ಕಮಗಳೂರನ್ನ, ಚಿಕ್ಕವಯಸ್ಸಿನಲ್ಲಿ ಸಿಕ್ಕಿದೆ. ವಿಪಕ್ಷಗಳು ಹೇಳಿದ್ದನು ನಾನು ಅನುಮೋದಿಸುತ್ತೇನೆ. ಆದರೆ ಸದಸ್ಯರು ತಮ್ಮ ಜವಾಬ್ದಾರಿ ಅರಿತರೇ ಎಲ್ಲವೂ ಸರಿ ಹೋಗುತ್ತೆ ಎಂದರು.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications