ವಿಧಾನಸಭೆ ಉಪ ಸಭಾಧ್ಯಕ್ಷ ಸ್ಥಾನಕ್ಕೆ ಕೃಷ್ಣಾರೆಡ್ಡಿ ರಾಜೀನಾಮೆ?
ಬೆಂಗಳೂರು, ಸೆಪ್ಟೆಂಬರ್ 05 : ವಿಧಾನಸಭೆಯ ಉಪ ಸಭಾಧ್ಯಕ್ಷ ಎಂ.ಕೃಷ್ಣಾರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಸೆ.12ರಂದು ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಚಿಂತಾಮಣಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಕೃಷ್ಣಾರೆಡ್ಡಿ ಅವರು ಜುಲೈನಲ್ಲಿ ವಿಧಾನಸಭೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆದರೆ, ಉಪಸಭಾಪತಿ ಹುದ್ದೆಗೆ ನಾನು ಸೂಕ್ತವ್ಯಕ್ತಿ ಅಲ್ಲ ಎಂದುಕೊಂಡಿರುವ ಅವರು, ರಾಜೀನಾಮೆಗೆ ಮುಂದಾಗಿದ್ದಾರೆ.
ಪಕ್ಷದ ವಿರುದ್ಧ, ಪಕ್ಷದ ನಾಯಕರ ವಿರುದ್ದ ಯಾವುದೇ ಅಸಮಾಧಾನವಿಲ್ಲ ಎಂದು ಕೃಷ್ಣಾರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ. ಹಿಂದೆ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಕೃಷ್ಣಾರೆಡ್ಡಿ ಅವರು ಅನಿವಾರ್ಯವಾಗಿ ಉಪಸಭಾಧ್ಯಕ್ಷ ಹುದ್ದೆಯನ್ನು ಒಪ್ಪಿಕೊಂಡಿದ್ದರು.

ಉಪಸಭಾಧ್ಯಕ್ಷ ಹುದ್ದೆಯನ್ನು ಹಿರಿಯ ನಾಯಕರಿಗೆ ನೀಡಿ, ಆ ಹುದ್ದೆ ಇಲ್ಲದಿದ್ದರೂ ಕ್ಷೇತ್ರಕ್ಕೆ ಅನುದಾನ ತಂದು ಅಭಿವೃದ್ಧಿ ಮಾಡುವೆ ಎಂಬುದು ಶಾಸಕರ ವಾದ. ಆದ್ದರಿಂದ, ಉಪಸಭಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಜೆಡಿಎಸ್ ಪಕ್ಷದ ಹಿರಿಯ ಶಾಸಕರಾದ ಎಚ್.ವಿಶ್ವನಾಥ್, ಎ.ಟಿ.ರಾಮಸ್ವಾಮಿ, ಎಚ್.ಕೆ.ಕುಮಾರಸ್ವಾಮಿ ಮುಂತಾದ ನಾಯಕರನ್ನು ಉಪಸಭಾಧ್ಯಕ್ಷ ಹುದ್ದೆಗೆ ನೇಮಿಸಬಹುದು ಎಂದು ಕೃಷ್ಣಾರೆಡ್ಡಿ ಸಲಹೆ ನೀಡಿದ್ದಾರೆ.
ವಿಧಾನಸಭೆ ಸ್ಪೀಕರ್ ಸ್ಥಾನ ಕಾಂಗ್ರೆಸ್ ಪಕ್ಷದ ಕೈಯಲ್ಲಿ ಇದೆ. ಶ್ರೀನಿವಾಸಪುರ ಶಾಸಕ ರಮೇಶ್ ಕುಮಾರ್ ಸ್ಪೀಕರ್ ಆಗಿದ್ದಾರೆ. ಆದ್ದರಿಂದ ಉಪಸಭಾಧ್ಯಕ್ಷರ ಸ್ಥಾನ ಜೆಡಿಎಸ್ಗೆ ಒಲಿದಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications