ಎಂ ಕೃಷ್ಣಪ್ಪ, ಪ್ರಿಯಾಕೃಷ್ಣ ಬಿಜೆಪಿ ಸೇರ್ಪಡೆ ಸಾಧ್ಯತೆ; ಆರ್. ಅಶೋಕ್ ಅಸಮಾಧಾನ
Recommended Video

ಬೆಂಗಳೂರು, ಜನವರಿ 22: ವಸತಿ ಸಚಿವ ಎಂ. ಕೃಷ್ಣಪ್ಪ ಹಾಗೂ ಅವರ ಪುತ್ರ, ಶ್ರೀಮಂತ ಶಾಸಕ ಪ್ರಿಯಾಕೃಷ್ಣ ಬಿಜೆಪಿ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಈ ಬಗ್ಗೆ ಮಾತುಕತೆಗಳು ಚಾಲ್ತಿಯಲ್ಲಿವೆ.
ಇಬ್ಬರನ್ನೂ ಪಕ್ಷಕ್ಕೆ ಸೇರಿಸಿಕೊಂಡು ಎರಡು ಕ್ಷೇತ್ರಗಳನ್ನು ಗೆಲ್ಲುವುದು ಜತೆಗೆ ಒಕ್ಕಲಿಗ ಸಮುದಾಯದ ಒಂದಷ್ಟು ಮತಗಳನ್ನು ಬುಟ್ಟಿಗೆ ಹಾಕಿಕೊಳ್ಳುವುದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ತಂತ್ರವಾಗಿದೆ.
ಆದರೆ, ಒಕ್ಕಲಿಗ ನಾಯಕರಾದ ತಂದೆ-ಮಗನನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಬಗ್ಗೆ ಪಕ್ಷದಲ್ಲೇ ಅಸಮಾಧಾನ ಹೊಗೆಯಾಡುತ್ತಿದೆ. ಮುಖ್ಯವಾಗಿ ಬಿಜೆಪಿಯ ಪ್ರಬಲ ಒಕ್ಕಲಿಗ ನಾಯಕ, ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಈ ನಿರ್ಧಾರದ ಬಗ್ಗೆ ಬೇಸರಗೊಂಡಿದ್ದಾರೆ.

ಒಂದು ಕಲ್ಲು, ಎರಡು ಹಕ್ಕಿ
ಪ್ರಿಯಾಕೃಷ್ಣ ಮತ್ತು ಎಂ.ಕೃಷ್ಣಪ್ಪರನ್ನು ಬಿಜೆಪಿಗೆ ಸೇರಿಸುವುದರಿಂದ ಎರಡು ಕ್ಷೇತ್ರಗಳನ್ನು ಸುಲಭವಾಗಿ ಗೆಲ್ಲಬಹುದು ಎಂಬುದು ಬಿಜೆಪಿ ಸರಳ ಲೆಕ್ಕಾಚಾರ. ಕೃಷ್ಣಪ್ಪ ಪ್ರತಿನಿಧಿಸುವ ವಿಜಯನಗರ ಹಾಗೂ ಪ್ರಿಯಾಕೃಷ್ಣಪ್ರತಿನಿಧಿಸುವ ಗೋವಿಂದರಾಜನಗರದಲ್ಲಿ ಇಬ್ಬರೂ ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿರುವುದೇ ಇದಕ್ಕೆ ಕಾರಣ.

ಒಕ್ಕಲಿಗ ಮತಗಳ ಮೇಲೆ ಕಣ್ಣು
ಇಬ್ಬರೂ ತಮ್ಮ ತಮ್ಮ ಕ್ಷೇತ್ರವನ್ನು ಗೆಲ್ಲುವುದಲ್ಲದೆ ಒಕ್ಕಲಿಗ ಮತಗಳನ್ನೂ ಸೆಳೆಯುವ ಶಕ್ತಿ ಹೊಂದಿದ್ದಾರೆ. ಮುಖ್ಯವಾಗಿ ಎಂ.ಕೃಷ್ಣಪ್ಪ ಮಂಡ್ಯ ಮತ್ತು ರಾಮನಗರ ಭಾಗದಲ್ಲಿ ಪ್ರಭಾವಿಯಾಗಿದ್ದಾರೆ. ಹೀಗೆ ಇವರನ್ನು ಬಳಸಿಕೊಂಡು ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನ ಮತಗಳನ್ನು ಛಿದ್ರಗೊಳಿಸುವುದು ಬಿಜೆಪಿಯ ಇನ್ನೊಂದು ಉಪಯೋಜನೆ.

ಡಿಕೆಶಿ ಜತೆ ವೈಮನಸ್ಸು
ಕಾಂಗ್ರೆಸ್ ಪಕ್ಷದಲ್ಲಿ ಡಿಕೆ ಶಿವಕುಮಾರ್ ಜತೆ ಉಭಯ ನಾಯಕರಿಗೆ ಅಸಮಾಧಾನವಿದೆ ಎನ್ನಲಾಗಿದ್ದು ಈ ಕಾರಣಕ್ಕೆ ಕಾಂಗ್ರೆಸ್ ಬಿಡಲು ತೀರ್ಮಾನಿಸಿದ್ದಾರಂತೆ. ಎಂ. ಕೃಷ್ಣಪ್ಪರನ್ನು ಹಿಂದಕ್ಕೆ ಬಿಟ್ಟು ಪಕ್ಷದಲ್ಲಿ ಡಿಕೆಶಿ ನಾಗಾಲೋಟ ಮುಂದುವರಿದಿದ್ದು ತಂದೆ-ಮಗನ ವೈಮನಸ್ಸಿಗೆ ಕಾರಣವಾಗಿದೆ.
ಆದರೆ ಇಬ್ಬರೂ ಬಿಜೆಪಿ ಸೇರುವುದನ್ನು ಇನ್ನೂ ಖಚಿತಪಡಿಸಿಲ್ಲ. ಬಿಜೆಪಿ ಮೂಲಗಳ ಪ್ರಕಾರ 2018-19ರ ಬಜೆಟ್ ನಂತರ ಬಿಜೆಪಿ ಸೇರುವ ಬಗ್ಗೆ ಇಬ್ಬರೂ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಯಡಿಯೂರಪ್ಪ ಆಪ್ತ ಅಶೋಕ್ ಅಸಮಾಧಾನ
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಜತೆ ಗಟ್ಟಿಯಾಗಿ ಗುರುತಿಸಿಕೊಂಡಿದ್ದ ಪದ್ಮನಾಭನಗರ ಶಾಸಕ ಆರ್.ಅಶೋಕ್ ಸದ್ಯಕ್ಕೆ ಬಿಜೆಪಿಯಲ್ಲಿರುವ ಪ್ರಬಲ ಒಕ್ಕಲಿಗ ನಾಯಕ. ಅದರಲ್ಲೂ ಬೆಂಗಳೂರು ಭಾಗದಲ್ಲಿ ಮತಗಳನ್ನು ಹಿಡಿದಿಡುವ ರಾಜಕಾರಣಿ.
ಸದ್ಯ ಕೃಷ್ಣಪ್ಪ ಮತ್ತು ಪ್ರಿಯಾಕೃಷ್ಣರನ್ನು ಬಿಜೆಪಿಗೆ ಕರೆತರುವ ಬಿಎಸ್ ವೈ ನಿರ್ಧಾರ ಅಶೋಕ್ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕಾರಣಕ್ಕೆ ಅಶೋಕ್ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಯವರನ್ನು ಬೆಂಬಲಿಸುತ್ತಿದ್ದು ಯಡಿಯೂರಪ್ಪನವರಿಂದ ದೂರವಾಗಿದ್ದಾರೆ ಎನ್ನಲಾಗುತ್ತಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications