'ಬೆಂಕಿ' ಹೇಳಿಕೆಗೆ ಕ್ಷಮೆ ಕೋರಿದ ಸಂಸದ ನಳಿನ್ ಕುಮಾರ್
ಕಾರ್ತಿಕ್ ರಾಜ್ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಶೀಘ್ರದಲ್ಲಿ ಬಂಧಿಸಬೇಕು. ಇಲ್ಲದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚುತ್ತೇವೆ ಎಂದು ಹೇಳಿಕೆ ನೀಡಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಕ್ಷಮೆ ಕೋರಿದ್ದಾರೆ
ಮಂಗಳೂರು, ಜನವರಿ 3: ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚುತ್ತೇನೆ ಎಂಬ ವಿವಾದಾತ್ಮಕ ಹೇಳಿಕೆಗೆ ಸಂಸದ ನಳೀನ್ ಕುಮಾರ್ ಕಟೀಲ್ ಕ್ಷಮೆ ಕೇಳಿದ್ದಾರೆ. ಕಾರ್ತಿಕ್ರಾಜ್ ಹತ್ಯೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಭಾನುವಾರ ಕೊಣಾಜೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಯಾವುದೇ ಪ್ರಚೋದನಾಕಾರಿ ಹೇಳಿಕೆ ನೀಡಿಲ್ಲ ಎಂದು ಕಟೀಲ್ ತಿಳಿಸಿದ್ದಾರೆ.
ಜಿಲ್ಲೆಯ ಶಾಂತಿ ಕದಡುವ ಯಾವುದೇ ದುರುದ್ದೇಶ ನನ್ನ ಹೇಳಿಕೆಯಲ್ಲಿ ಇರಲಿಲ್ಲ. ಆದರೂ ನೋವಿನಿಂದ ಮಾತಿನ ಭರದಲ್ಲಿ ವ್ಯಕ್ತವಾದ ಕೆಲವು ಶಬ್ದಗಳ ಬಗ್ಗೆ ಈಗಾಗಲೇ ಮಾಧ್ಯಮಗಳ ಮೂಲಕ ವಿಷಾದ ವ್ಯಕ್ತಪಡಿಸಿದ್ದೇನೆ. ಅಮಾಯಕ ಹಿಂದೂ ಯುವಕರ ಹತ್ಯೆಯಿಂದ ಜನತೆ ಆತಂಕಕ್ಕೀಡಾಗಿದ್ದಾರೆ. ಕಾರ್ತಿಕ್ರಾಜ್ ಹತ್ಯೆ ನಡೆದು ಎರಡು ತಿಂಗಳಾದರೂ ಆರೋಪಿಗಳ ಬಂಧನವಾಗಿಲ್ಲ. ಇದರಿಂದ ಸಹಜವಾಗಿಯೇ ಕಾರ್ಯಕರ್ತರಿಗೆ ನೋವಿದೆ.[ಸಂಸದ ನಳಿನ್ ಕುಮಾರ್ ವಿರುದ್ದ ಕಾನೂನು ಕ್ರಮ : ಸಚಿವ ರೈ]

ಪೊಲೀಸ್ ಇಲಾಖೆಯನ್ನು ಎಚ್ಚರಿಸಲು ಪ್ರತಿಭಟನೆ ನಡೆಸಲಾಗಿತ್ತು. ಉದ್ದೇಶಪೂರ್ವಕವಾಗಿ ಯಾವುದೇ ಮಾತು ಆಡಿಲ್ಲ. ಜನತೆ ಭಾವನೆಯನ್ನು ಮಾತಿನ ಮೂಲಕ ವ್ಯಕ್ತಪಡಿಸಿದ್ದೇನೆ. ಮನಸ್ಸಿನ ನೋವು ವ್ಯಕ್ತಪಡಿಸುವಾಗ ಕೆಲವು ಶಬ್ದಗಳು ತಪ್ಪಾಗಿರಬಹುದು. ಇದಕ್ಕೆ ತಪ್ಪು ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.[ದಕ್ಷಿಣ ಕನ್ನಡಕ್ಕೆ ಬೆಂಕಿ ಹಚ್ಚುತ್ತೇವೆ: ಸಂಸದ ಕಟೀಲ್]
ಕ್ಷೇತ್ರದ ಸಂಸದನಾಗಿ ನನ್ನ ಜವಾಬ್ದಾರಿಯ ಪೂರ್ಣ ಅರಿವಿದೆ. ಜಿಲ್ಲೆಯ ಶಾಂತಿ ಕಾಪಾಡುವುದು ನಮ್ಮೆಲ್ಲರ ಹೊಣೆಗಾರಿಕೆ. ಅದೇ ರೀತಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಸರಕಾರದ ಜವಾಬ್ದಾರಿ. ಕಾರ್ತಿಕ್ರಾಜ್ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಿ ಎನ್ನುವುದಷ್ಟೇ ನಮ್ಮ ಆಗ್ರಹ. ನ್ಯಾಯ ಸಿಗದಿದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ಅನಿವಾರ್ಯ ಎಂದಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications