ಮಡೆಸ್ನಾನದ ವಿರುದ್ಧ ಸುಪ್ರೀಂಕೋರ್ಟ್ಗೆ ಮೊರೆ
ಬೆಂಗಳೂರು, ನ.28 : ಕರ್ನಾಟಕ ಸರ್ಕಾರ ಮಡೆಸ್ನಾನದ ವಿರುದ್ಧ ಕಾನೂನು ಸಮರ ಆರಂಭಿಸಿದೆ. ಮಡೆಸ್ನಾನ ಮುಂದುವರೆಸಲು ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಮಡೆಸ್ನಾನ ಆಚರಣೆಗೆ ವೈಯಕ್ತಿಕವಾಗಿ ನನ್ನ ವಿರೋಧವಿದೆ. ಇಂದಿನ ಯುಗದಲ್ಲೂ ಇಂತಹ ಆಚರಣೆ ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕುಕ್ಕೆ ಸುಬ್ರಮಣ್ಯದಲ್ಲಿ ಮಡೆಸ್ನಾನ ನಡೆಸುವ ಕುರಿತು ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಮಡೆಸ್ನಾನ ನಿಷೇಧಿಸಬೇಕೆಂಬ ಸರ್ಕಾರದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ. [ಮಡೆಸ್ನಾನ ನಿಲ್ಲಿಸಿ, ಮಂಗಳೂರಲ್ಲಿ ಪ್ರತಿಭಟನೆ]

ನನ್ನ ವಿರೋಧವಿದೆ : ತುಮಕೂರಿನಲ್ಲಿ ಗುರವಾರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಮಡೆಸ್ನಾನದ ಆಚರಣೆಗೆ ನನ್ನ ವೈಯಕ್ತಿಕ ವಿರೋಧವಿದೆ. ಇಂದಿನ ಯುಗದಲ್ಲೂ ಮಡೆಸ್ನಾನದಂತಹ ಮೌಢ್ಯವನ್ನು ಆಚರಿಸಿಕೊಂಡು ಬರುತ್ತಿರುವುದು ಸರಿಯಲ್ಲ' ಎಂದು ಹೇಳಿದ್ದರು. [ಮಡೆ ಮಡೆಸ್ನಾನಕ್ಕೆ ಹೈಕೋರ್ಟಿನಿಂದ ಗ್ರೀನ್ ಸಿಗ್ನಲ್]
ಇದು ಅಮಾನವೀಯ : ಮಡೆಸ್ನಾನಕ್ಕೆ ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ನಮ್ಮ ಯಾವುದೇ ಆಚರಣೆಗಳು ನೈತಿಕತೆ ಮತ್ತು ಸಭ್ಯತೆಗೆ ಧಕ್ಕೆ ತರುವಂತೆ ಇರಬಾರದು. ಮಡೆಸ್ನಾನ ಕುರಿತು ಹೈಕೋರ್ಟ್ ತೀರ್ಪು ವ್ಯಕ್ತಿಯ ಘನತೆಗೆ ಧಕ್ಕೆ ತರುತ್ತದೆ ಎಂದು ತಿಳಿಸಿದ್ದರೆ.
ಅಂದಹಾಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯಾದ ಚಂಪಾಷಷ್ಠಿ ಪ್ರಯುಕ್ತ ನಡೆಯುವ ಮಡೆಸ್ನಾನ ಹರಕೆ ಸೇವೆಯು ನ.25ರಿಂದ 27ರವರೆಗೆ ನಡೆದಿದೆ. ಮಡೆಸ್ನಾನ ಪದ್ಧತಿಯನ್ನು ನಿಲ್ಲಿಸಬೇಕೆಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಹಿಂದೆ ಎತ್ತಿ ಹಿಡಿದಿತ್ತು. ಆದರೆ, ಹೈಕೋರ್ಟ್ ವಿಭಾಗೀಯ ಪೀಠ ತಡೆಯಾಜ್ಞೆಯನ್ನು ಕೆಲವು ದಿನಗಳ ಹಿಂದೆ ತೆರವುಗೊಳಿಸಿತ್ತು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications