Madhu Bangarappa: ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಪಡೆದ ಮಧು ಬಂಗಾರಪ್ಪ
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಶಿವಮೊಗ್ಗದ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಸ್ಥಾನ ಪಡೆದಿದರು. ಇಂದು(ಮೇ.27) ರಾಜಭವನದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುತ್ರರಾದ ಮಧು ಬಂಗಾರಪ್ಪ ಕಾಂಗ್ರೆಸ್ ಪಾಳಯದಲ್ಲಿ ಉತ್ತಮ ವರ್ಚಸ್ಸು ಹೊಂದಿದ್ದಾರೆ. ಸೊರಬ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ಮಧು ಬಂಗಾರಪ್ಪ 2023ರ ವಿಧಾನಸಭಾ ಚುನಾವಣೆಯಲ್ಲಿ 44,262ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಹಾಗೂ ಅವರ ಸಹೋದರ ಕುಮಾರ್ ಬಂಗಾರಪ್ಪ ಅವರನ್ನು ಸೋಲಿಸಿದರು.
ಮಧು ಬಂಗಾರಪ್ಪ ಕರ್ನಾಟಕ ಕಾಂಗ್ರೆಸ್ನ ಹಿಂದುಳಿದ ವರ್ಗಗಳ ವಿಭಾಗದ (ಒಬಿಸಿ) ಕಾರ್ಯಾಧ್ಯಕ್ಷರು. ಕನ್ನಡ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಸಹೋದರ ಆಗಿದ್ದಾರೆ. ರಾಜಕೀಯ ಹೊರತುಪಡಿಸಿ 'ಕಲ್ಲರಳಿ ಹೂವಾಗಿ' ಕನ್ನಡ ಚಿತ್ರ ನಿರ್ಮಾಣಕ್ಕಾಗಿ ರಾಷ್ಟ್ರಪತಿಗಳಿಂದ ಪದಕ ಪಡೆದಿದ್ದಾರೆ. ಚಲನಚಿತ್ರ ನಟರಾಗಿ, ನಿರ್ಮಾಪಕರಾಗಿ, ವಿತರಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.

ವೈಯಕ್ತಿಕ ಜೀವನ
ಮಧು ಬಂಗಾರಪ್ಪ 2013ರಲ್ಲಿ ಸೊರಬ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಮೊದಲ ಬಾರಿಗೆ ಚುನಾವಣೆಯಲ್ಲಿ ಗೆಲುವು ಸಾಧಿಸಿದರು. 4/9/1966ರಲ್ಲಿ ಸೊರಬ ತಾಲೂಕಿನ ಕುಬಟೂರು ಎಂಬಲ್ಲಿ ಜನಿಸಿದ ಮಧು ಬಂಗಾರಪ್ಪ ಪದವೀಧರರು. ತಂದೆ ಎಸ್. ಬಂಗಾರಪ್ಪ ತಾಯಿ ಶಕುಂತಲಾ ಬಂಗಾರಪ್ಪ. ವ್ಯಾಪಾರೋದ್ಯಮಿಯಾದ ಇವರು ರಾಜಕೀಯಕ್ಕೆ ಬರುವ ಮೊದಲು ಸಿನಿಮಾ ಆಡಿಯೋ ಕ್ಷೇತ್ರದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.
ರಾಜಕೀಯ ಜೀವನ
2013ರ ಚುನಾವಣೆಯಲ್ಲಿ 58,541 ಮತಗಳನ್ನು ಪಡೆದು 37,316 ಮತ ಪಡೆದ ಕೆಜೆಪಿ ಪಕ್ಷದ ಹೆಚ್. ಹಾಲಪ್ಪರನ್ನು ಸೋಲಿಸಿ ಮೊದಲ ಬಾರಿಗೆ ಶಾಸಕರಾದರು. ಈ ಚುನಾವಣೆಯಲ್ಲಿ ಮಧು ಬಂಗಾರಪ್ಪಗೆ ಕಾಂಗ್ರೆಸ್ನಿಂದ ಸಹೋದರ ಕುಮಾರ್ ಬಂಗಾರಪ್ಪ ಎದುರಾಳಿಯಾಗಿದ್ದರು. 33,176 ಮತಗಳನ್ನು ಪಡೆದು ಕುಮಾರ್ ಬಂಗಾರಪ್ಪ ಸೋಲು ಕಂಡರು.

2018ರ ಚುನಾವಣೆಯಲ್ಲಿ ಸೊರಬದ ರಾಜಕೀಯ ಚಿತ್ರಣ ಬದಲಾಯಿತು. ಕುಮಾರ್ ಬಂಗಾರಪ್ಪ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು 72,091 ಮತಗಳನ್ನು ಪಡೆದು ಜಯಗಳಿಸಿದರು. ಮಧು ಬಂಗಾರಪ್ಪ ಜೆಡಿಎಸ್ನಿಂದ ಕಣಕ್ಕಿಳಿದು 58,805 ಮತಗಳನ್ನು ಪಡೆದು ಸೋಲೊಪ್ಪಿಕೊಂಡರು.
2013ರಲ್ಲಿ ಸೊರಬದಲ್ಲಿ ಸೋಲು ಕಂಡಿದ್ದ ಹೆಚ್. ಹಾಲಪ್ಪ ಪ್ರಸ್ತುತ ಸಾಗರ ಕ್ಷೇತ್ರದ ಬಿಜೆಪಿ ಶಾಸಕರು. ಸೊರಬ ರಾಜಕೀಯ ಸಹೋದರರ ಸವಾಲ್ ಎಂದೇ ಖ್ಯಾತಿ ಪಡೆದಿದೆ. ಕುಮಾರ್ ಬಂಗಾರಪ್ಪ ಮತ್ತು ಮಧು ಬಂಗಾರಪ್ಪ ಇವರಲ್ಲಿ ಯಾರು ಗೆಲ್ಲುತ್ತಾರೆ? ಎಂಬುದು ಚುನಾವಣೆ ಸಂದರ್ಭದಲ್ಲಿ ಬಹುದೊಡ್ಡ ಚರ್ಚೆಯ ವಿಷಯವಾಗುತ್ತದೆ.
2013, 2014ರಲ್ಲಿ ಮಧು ಬಂಗಾರಪ್ಪ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತರಕಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ. 2018ರ ಚುನಾವಣೆಯಲ್ಲಿ ಸೋತ ಬಳಿಕವೂ ಅವರನ್ನು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷರಾಗಿ ಪಕ್ಷ ನೇಮಕ ಮಾಡಿತ್ತು. 2019ರ ಲೋಕಸಭೆ ಚುನಾವಣೆಯಲ್ಲಿ ಮಧು ಬಂಗಾರಪ್ಪ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 506512 ಮತಗಳನ್ನು ಪಡೆದು ಬಿಜೆಪಿಯ ಬಿ. ವೈ. ರಾಘವೇಂದ್ರ ಎದುರು ಸೋಲುಕಂಡರು.
ಲೋಕಸಭೆ ಚುನಾವಣೆ ಸೋಲಿನ ಬಳಿಕ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮಧು ಬಂಗಾರಪ್ಪ ಕಾಂಗ್ರೆಸ್ ಸೇರಿದರು. 2021ರ ಜುಲೈ 30ರಂದು ಹುಬ್ಬಳ್ಳಿಯಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮುಂತಾದ ನಾಯಕರ ಸಮ್ಮುಖದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೊಂಡರು.
2023ರ ವಿಧಾಸಭಾ ಚುನಾವಣೆಯಲ್ಲಿ 98,912ಮತಗಳನ್ನು ಪಡೆಯುವ ಮೂಲಕ ಸೊರಬದಲ್ಲಿ ಭರ್ಜರಿ ಗೆಲುವು ಸಾಧಿಸಿದರು. 44,262ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಹಾಗೂ ಅವರ ಸಹೋದರ ಕುಮಾರ್ ಬಂಗಾರಪ್ಪ ಅವರನ್ನು ಸೋಲಿಸಿದರು. 2023ರ ವಿಧಾನಸಭಾ ಚುನಾವಣೆಗೆ ಮಧು ಬಂಗಾರಪ್ಪ ಪರ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಇಬ್ಬರೂ ಸೊರಬದಲ್ಲಿ ಪ್ರಚಾರ ನಡೆಸಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications