ಸದಾಶಿವ ವರದಿ: ಸಿದ್ದರಾಮಯ್ಯ ಮೊರೆ ಹೋಗಲು ಮಾದಿಗರ ತೀರ್ಮಾನ
Recommended Video

ಬೆಂಗಳೂರು, ಅಕ್ಟೋಬರ್ 5: ಒಳಮೀಸಲಾತಿಗೆ ಸಂಬಂಧಿಸಿದ ಸದಾಶಿವ ಆಯೋಗ ವರದಿ ಸಿದ್ಧವಾಗಿದ್ದು ಈ ಕುರಿತು ಸಿದ್ದರಾಮಯ್ಯ ಮೊರೆ ಹೋಗಲು ಮಾದಿಗರು ತೀರ್ಮಾನಿಸಿದ್ದಾರೆ.
ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ನಿರ್ಧರಿಸಿದ್ದಾರೆ, ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊರೆ ಹೋಗಲು ತೀರ್ಮಾನಿಸಿದ್ದಾರೆ.
ಅಕ್ಟೋಬರ್ 12ರಂದು ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಉದ್ಘಾಟನಾ ಸಮಾರಂಭಕ್ಕೆ ಸಮುದಾಯವನ್ನು ಸಂಘಟಿಸುವ ಸಲುವಾಗಿ ನಗರದ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ರಾಜ್ಯ ಮಾದಿಗ ಸಮುದಾಯದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಮಾಜಿ ಸಚಿವ ಎಚ್ ಆಂಜನೇಯ ನೇತೃತ್ವದಲ್ಲಿ ಸಭೆ
ಮಾದಿಗರ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸುವ ನ್ಯಾ. ಎಜೆ ಸದಾಶಿವ ಆಯೋಗ ವರದಿಯನ್ನು ಜಾರಿಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸುವ ಕುರಿತು ಚರ್ಚೆ ನಡೆಸಲು ಮಾಜಿ ಸಚಿವ ಎಚ್ ಆಂಜನೇಯ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಪರಿಶಿಷ್ಟ ಜಾತಿಯಲ್ಲಿ ಸೌಲಭ್ಯ ವಂಚಿತ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸುವ ಶಿಫಾರಸ್ಸುಗಳನ್ನೊಳಗೊಂಡಿರುವ ನ್ಯಾ. ಎಜೆ ಸದಾಶಿವ ಆಯೋಗ ವರದಿಯನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಯಿತು.

ಸಿದ್ದರಾಮಯ್ಯಗೆ ಕೃತಜ್ಞತೆ ಸಲ್ಲಿಸಿದ ಮಾದಿಗರು
ಸೌಲಭ್ಯ ವಂಚಿತರಾಗಿ ಹಿಂದುಳಿದಿರುವ ಮಾದಿಗ ಸಮಾಜವನ್ನು ಮೇಲೆತ್ತಲು ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮವನ್ನು ಮಂಜೂರು ಮಾಡಿದ ಹಿಂದಿನ ಕಾಂಗ್ರೆಸ್ ಸರ್ಕಾರ ಮತ್ತು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ನಿಗಮ ಬೇಡ, ವರದಿ ಜಾರಿ ಮಾಡಿ
ಸಭೆಯ ಆರಂಭದಲ್ಲಿ ಕೆಲವರು ಆದಿ ಜಾಂಬವ ಅಭಿವೃದ್ಧಿ ನಿಗಮ ಸ್ಥಾಪನೆ ಕಣ್ಣೊರೆಸುವ ತಂತ್ರ ಇದರಿಂದ ಮಾದಿಗ ಸಮುದಾಯಕ್ಕೆ ಅಭಿವೃದ್ಧಿ ಸಾಧ್ಯವಿಲ್ಲ, ಇಷ್ಟು ದಿನ ಆಗಿರುವ ಅನ್ಯಾಯ ಸರಿಪಡಿಸಲೂ ಸಾಧ್ಯವಿಲ್ಲ, ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸುವುದು ಸಭೆಯ ಗುರಿಯಾಗಬೇಕು ಎಂದು ಆಗ್ರಹಿಸಿದರು.

ಪ್ರತ್ಯೇಕ ಸೌಲಭ್ಯಕ್ಕೆ ನಿಗಮ ಅಗತ್ಯ
ಸರ್ಕಾರದಿಂದ ಮಾದಿಗ ಸಮುದಾಯಕ್ಕೆ ಒಂದಷ್ಟು ಸೌಲಭ್ಯಗಳು ದೊರೆಯಬೇಕಾದರೆ ಪ್ರತ್ಯೇಕ ನಿಗಮ ಮಂಡಳಿ ಅಗತ್ಯವಿದೆ. ಹಾಗಾಘಿ ಅ.12ರಂದು ನಡೆಯುವ ನಿಗಮದ ಉದ್ಘಾಟನಾ ಸಮಾರಂಭಕ್ಕೆ ಸಮುದಾಯದ ಹೆಚ್ಚು ಜನರು ಭಾಗವಹಿಸಬೇಕೆಂದು ಕರೆ ನೀಡಿದರು.
-
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ











Click it and Unblock the Notifications