ಸದಾಶಿವ ವರದಿ: ಸಿದ್ದರಾಮಯ್ಯ ಮೊರೆ ಹೋಗಲು ಮಾದಿಗರ ತೀರ್ಮಾನ
Recommended Video

ಬೆಂಗಳೂರು, ಅಕ್ಟೋಬರ್ 5: ಒಳಮೀಸಲಾತಿಗೆ ಸಂಬಂಧಿಸಿದ ಸದಾಶಿವ ಆಯೋಗ ವರದಿ ಸಿದ್ಧವಾಗಿದ್ದು ಈ ಕುರಿತು ಸಿದ್ದರಾಮಯ್ಯ ಮೊರೆ ಹೋಗಲು ಮಾದಿಗರು ತೀರ್ಮಾನಿಸಿದ್ದಾರೆ.
ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ನಿರ್ಧರಿಸಿದ್ದಾರೆ, ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊರೆ ಹೋಗಲು ತೀರ್ಮಾನಿಸಿದ್ದಾರೆ.
ಅಕ್ಟೋಬರ್ 12ರಂದು ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಉದ್ಘಾಟನಾ ಸಮಾರಂಭಕ್ಕೆ ಸಮುದಾಯವನ್ನು ಸಂಘಟಿಸುವ ಸಲುವಾಗಿ ನಗರದ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ರಾಜ್ಯ ಮಾದಿಗ ಸಮುದಾಯದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಮಾಜಿ ಸಚಿವ ಎಚ್ ಆಂಜನೇಯ ನೇತೃತ್ವದಲ್ಲಿ ಸಭೆ
ಮಾದಿಗರ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸುವ ನ್ಯಾ. ಎಜೆ ಸದಾಶಿವ ಆಯೋಗ ವರದಿಯನ್ನು ಜಾರಿಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸುವ ಕುರಿತು ಚರ್ಚೆ ನಡೆಸಲು ಮಾಜಿ ಸಚಿವ ಎಚ್ ಆಂಜನೇಯ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಪರಿಶಿಷ್ಟ ಜಾತಿಯಲ್ಲಿ ಸೌಲಭ್ಯ ವಂಚಿತ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸುವ ಶಿಫಾರಸ್ಸುಗಳನ್ನೊಳಗೊಂಡಿರುವ ನ್ಯಾ. ಎಜೆ ಸದಾಶಿವ ಆಯೋಗ ವರದಿಯನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಯಿತು.

ಸಿದ್ದರಾಮಯ್ಯಗೆ ಕೃತಜ್ಞತೆ ಸಲ್ಲಿಸಿದ ಮಾದಿಗರು
ಸೌಲಭ್ಯ ವಂಚಿತರಾಗಿ ಹಿಂದುಳಿದಿರುವ ಮಾದಿಗ ಸಮಾಜವನ್ನು ಮೇಲೆತ್ತಲು ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮವನ್ನು ಮಂಜೂರು ಮಾಡಿದ ಹಿಂದಿನ ಕಾಂಗ್ರೆಸ್ ಸರ್ಕಾರ ಮತ್ತು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ನಿಗಮ ಬೇಡ, ವರದಿ ಜಾರಿ ಮಾಡಿ
ಸಭೆಯ ಆರಂಭದಲ್ಲಿ ಕೆಲವರು ಆದಿ ಜಾಂಬವ ಅಭಿವೃದ್ಧಿ ನಿಗಮ ಸ್ಥಾಪನೆ ಕಣ್ಣೊರೆಸುವ ತಂತ್ರ ಇದರಿಂದ ಮಾದಿಗ ಸಮುದಾಯಕ್ಕೆ ಅಭಿವೃದ್ಧಿ ಸಾಧ್ಯವಿಲ್ಲ, ಇಷ್ಟು ದಿನ ಆಗಿರುವ ಅನ್ಯಾಯ ಸರಿಪಡಿಸಲೂ ಸಾಧ್ಯವಿಲ್ಲ, ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸುವುದು ಸಭೆಯ ಗುರಿಯಾಗಬೇಕು ಎಂದು ಆಗ್ರಹಿಸಿದರು.

ಪ್ರತ್ಯೇಕ ಸೌಲಭ್ಯಕ್ಕೆ ನಿಗಮ ಅಗತ್ಯ
ಸರ್ಕಾರದಿಂದ ಮಾದಿಗ ಸಮುದಾಯಕ್ಕೆ ಒಂದಷ್ಟು ಸೌಲಭ್ಯಗಳು ದೊರೆಯಬೇಕಾದರೆ ಪ್ರತ್ಯೇಕ ನಿಗಮ ಮಂಡಳಿ ಅಗತ್ಯವಿದೆ. ಹಾಗಾಘಿ ಅ.12ರಂದು ನಡೆಯುವ ನಿಗಮದ ಉದ್ಘಾಟನಾ ಸಮಾರಂಭಕ್ಕೆ ಸಮುದಾಯದ ಹೆಚ್ಚು ಜನರು ಭಾಗವಹಿಸಬೇಕೆಂದು ಕರೆ ನೀಡಿದರು.
-
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್












Click it and Unblock the Notifications