ಚಿತ್ರಗಳಲ್ಲಿ ನೋಡಿ : ಮಡಿಕೇರಿಯಲ್ಲಿ ಮಳೆ ತಂದ ಅವಾಂತರ
ಮಡಿಕೇರಿ, ಮೇ 17: ಮಡಿಕೇರಿ ಪಟ್ಟಣ ಸೇರಿದಂತೆ ಸುತ್ತಮುತ್ತ ಸುರಿದ ಮಳೆಗೆ ಭಾರೀ ಲಕ್ಷಾಂತರ ರೂ. ಹಾನಿ ಸಂಭವಿಸಿದೆ. ನಗರದ ವಿವಿಧೆಡೆಗಳಲ್ಲಿ ಮನೆ, ವಸತಿ ಗೃಹಗಳು ನೆಲಕಚ್ಚಿವೆ. ಕೆಲವೆಡೆಗಳಲ್ಲಿ ರಸ್ತೆಗಳ ಮೇಲೆ ಮರಗಳು ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಮಡಿಕೇರಿ ಸುತ್ತ ಮುತ್ತಾ ಸುರಿದಿರುವ ಮುಂಗಾರು ಪೂರ್ವ ಮಳೆ ಅವಾಂತರದ ಚಿತ್ರಗಳು ಇಲ್ಲಿವೆ
ಮನೆಗಳಿಗೆ, ವಸತಿ ಗೃಹಗಳಿಗೆ ಬಹಳಷ್ಟು ಹಾನಿಯುಂಟಾಗಿ ನಷ್ಟ ಸಂಭವಿಸಿದ್ದರೂ ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ.[ಮಲೆನಾಡಿನಲ್ಲೂ ಜಲಕ್ಷಾಮ! ಇದಕ್ಕೆ ಕಾರಣಗಳು ಇಲ್ಲಿವೆ]
ನಗರದ ಜಿಲ್ಲಾ ಪೊಲೀಸ್ ಕಚೇರಿ ಬಳಿಯ ವಸತಿ ಗೃಹ ಹಾಗೂ ಕೆಲವು ಮನೆಗಳ ಹೆಂಚುಗಳು ಮತ್ತು ಸೀಟುಗಳು ಹಾರಿ ಹೋಗಿವೆ. ರಾಣಿ ಪೇಟೆಯ ಮನೆಯೊಂದರ ಹೆಂಚುಗಳು ಕೆಳ ಬಿದ್ದುದರಿಂದ ಮನೆಯೊಳಗಿನ ಸಾಮಗ್ರಿಗಳು ಸಂಪೂರ್ಣವಾಗಿ ಒಡೆದು ಹಾನಿಗೊಳಗಾಗಿದೆ.[ಮಳೆಗಾಗಿ ತಲಕಾವೇರಿಯಲ್ಲಿ ವಿಶೇಷ ಪೂಜೆ]

ಕೆಲವು ಕಡೆಗಳಲ್ಲಿ ಬೀಸಿದ ಗಾಳಿಯ ರಭಸಕ್ಕೆ ಮನೆಗಳ ಮೇಲೆ ಹೊದಿಸಿದ ಸೀಟುಗಳು ಮೇಲಕ್ಕೆ ಹಾರಿ ಅಕ್ಕಪಕ್ಕದ ಮರಗಳ ಮೇಲೆ ಸಿಕ್ಕಿ ಹಾಕಿಕೊಂಡಿವೆ. ಮತ್ತೆ ಕೆಲವು ಸೀಟುಗಳು ಬೇರೊಬ್ಬರ ಮನೆಗಳ ಮೇಲೆ, ಅಂಗಳಗಳಲ್ಲಿ ಬಿದ್ದಿವೆ.[ಮಂಡ್ಯದಲ್ಲಿ ಬತ್ತಿದ ನದಿ, ಕೆರೆಗಳು]
ರಾಣಿಪೇಟೆಯಲ್ಲಿ ಬರೆ ಜರಿದು ಮನೆಗಳ ಮೇಲೆ ಬಿದ್ದು ಅಪಾಯದ ಸ್ಥಿತಿಯುಂಟಾಗಿದೆ, ನಗರದಿಂದ ಅಬ್ಬಿಫಾಲ್ಸ್ನತ್ತ ತೆರಳುವ ರಸ್ತೆ ಮೇಲೆ ಮರಗಳು ಬಿದ್ದುದರಿಂದ ಆ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.[ಕಾವೇರಿ ತವರಲ್ಲೂ ಬತ್ತಿದ ಜೀವಸೆಲೆ, ನೀರಿಗೆ ಬರ]
ಮಡಿಕೇರಿಯಲ್ಲಿ ಮಳೆ ತಂದ ಅವಾಂತರ
ನಗರದ ವಿವಿಧೆಡೆಗಳಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದ್ದರಿಂದ ಕಾವೇರಿ ಬಡಾವಣೆ, ಭಗವತಿನಗರ, ಗದ್ದಿಗೆ, ಆಜಾದ್ ನಗರ, ತ್ಯಾಗರಾಜಕಾಲೋನಿ, ರಾಣಿಪೇಟೆ ಮುಂತಾದೆಡೆಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲದೆ ಆ ಪ್ರದೇಶಗಳು ಕತ್ತಲ ಕೂಪದಲ್ಲಿ ಮುಳುಗಿವೆ.
ನಗರದ ನಾಗರಿಕರಿಗೆ ವಿದ್ಯುತ್ ನೀಡಲು ಸೆಸ್ಕ್ ಇಲಾಖೆಯವರು ಹರಸಾಹಸ ಪಡುತ್ತಿದ್ದಾರೆ. ಮುರಿದ ಕಂಬಗಳನ್ನು ಮತ್ತೆ ಹೊಸ ಕಂಬಗಳನ್ನು ನೆಟ್ಟು ವಿದ್ಯುತ್ ಸಂಪರ್ಕಗಳನ್ನು ಕಲ್ಪಿಸಲು ಪ್ರಯತ್ನ ಪಡುತ್ತಿದ್ದಾರೆ.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications