Madras Eye: ಹೆಚ್ಚುತ್ತಿರುವ ಮದ್ರಾಸ್ ಐ ಪ್ರಕರಣ: ರೋಗ ಲಕ್ಷಣ ಹಾಗೂ ಮುಂಜಾಗ್ರತಾ ಕ್ರಮಗಳು
ರಾಜ್ಯದಲ್ಲಿ ಮದ್ರಾಸ್ ಐ ಅಥವಾ ಕಂಜಕ್ಟಿವೈಟಿಸ್ (Conjunctivitis) ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಧಾರವಾಡ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರಕರಣಗಳು ಹೆಚ್ಚಾಗಿವೆ.
ಪ್ರಕರಣಗಳ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಮದ್ರಾಸ್ ಐ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ ಮತ್ತು ನಿರ್ವಹಣೆ ಬಗ್ಗೆ ಸಲಹೆ ನೀಡಿದೆ. ರೋಗ ಲಕ್ಷಣಗಳನ್ನು ಗುರುತಿಸಲಾಗಿದ್ದು ಅದರ ಪಟ್ಟಿಯನ್ನು ಇಲಾಖೆ ಬಿಡುಗಡೆ ಮಾಡಿದ್ದು, ಈ ಲಕ್ಷಣಗಳು ಕಂಡು ಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಲು ಕೋರಿದೆ.

ಮಳೆಗಾದಲ್ಲಿ ಸಾಮಾನ್ಯವಾಗಿ ಮದ್ರಾಸ್ ಐ ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಅದರಲ್ಲೂ ಹವಾಮಾನ ಬದಲಾವಣೆ ಕಾರಣ ಈ ಬಾರಿ ಹೆಚ್ಚಾಗಿ ಕಾಡುತ್ತಿದೆ ಎಂದು ತಜ್ಞರು ಹೇಳಿದ್ದಾರೆ.
ಮದ್ರಾಸ್ ಐ ರೋಗ ಲಕ್ಷಣಗಳು
1) ಅತಿಯಾಗಿ ಕಣ್ಣೀರು ಬರುವುದು
2) ಕಣ್ಣಿನಲ್ಲಿ ತುರಿಕೆ
3) ಕಣ್ಣಿನ ಬಣ್ಣ ಕೆಂಪು ಅಥವಾ ಗುಲಾಬಿ ಬಣ್ಣಕ್ಕೆ ತಿರುಗುವುದು. ನೀರು ಸೋರುತ್ತಿರುವುದು
4) ಸತತವಾಗಿ ಕಣ್ಣು ನೋವು ಮತ್ತು ಚುಚ್ಚಿದ ಅನುಭವ ಆಗುವುದು
5) ಬೆಳಕನ್ನು ನೋಡಲು ಆಗದೇ ಇರುವುದು
6) ದೃಷ್ಟಿ ಮಂಜಾಗುವುದು
7) ಕಣ್ಣಿನ ರೆಪ್ಪೆಗಳಲ್ಲಿ ಕೀವು ಮಿಶ್ರತವಾಗಿರುವುದು
8) ಕಣ್ಣುಗುಡ್ಡೆ ಊದಿಕೊಳ್ಳುವುದು
ಈ ಮೇಲಿನ ಲಕ್ಷಣಗಳು ಕಾಣಿಸಿಕೊಂಡರೆ ಅದು ಮದ್ರಾಸ್ ಐ ಎಂದು ಪರಿಗಣಿಸಬಹುದು. ಮದ್ರಾಸ್ ಐ ಬಂದಾಗ ಆತಂಕಪಡುವ ಅಗತ್ಯವಿಲ್ಲ, ಹಾಗೆಂದು ನಿರ್ಲಕ್ಷ್ಯ ಮಾಡುವಂತೆಯೂ ಇಲ್ಲ, ರೋಗ ಲಕ್ಷಣ ಕಂಡುಬಂದ ತಕ್ಷಣ ವೈದ್ಯರನ್ನು ಭೇಟಿ ಮಾಡಿ ಪರೀಕ್ಷೆ ಮಾಡಿಸಿಕೊಳ್ಳಬೇಕು, ಸರಿಯಾದ ಚಿಕಿತ್ಸೆ ಪಡೆಯಬೇಕು.
ಮುಂಜಾಗ್ರತಾ ಕ್ರಮ ಪಾಲಿಸಿ
ಕಣ್ಣಿಗೆ ಸಂಬಂಧಿಸಿದ (ಮದ್ರಾಸ್ ಐ) ಇತರೆ ಸಾಂಕ್ರಾಮಿಕ ರೋಗಗಳು ಉಂಟಾಗುವ ಸಂಭವ ಇರುವದರಿಂದ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವ ಮೂಲಕ ರೋಗ ಹರಡುವುದನ್ನು ತಡೆಬಹುದು ಎಂದು ಆರೋಗ್ಯ ಇಲಾಖೆ ಹೇಳಿದೆ.
1) ಮದ್ರಾಸ್- ಐ ರೋಗದಿಂದ ಕಾಪಾಡಿ ಕೊಳ್ಳಲು ಜನ ದಟ್ಟಣೆ ಇರುವ ಕಡೆಗಳಲ್ಲಿ ಹೋಗುವುದನ್ನು ತಪ್ಪಿಸಬೇಕು.
2) ನೀರನ್ನು ಕುದಿಸಿ, ಆರಿಸಿ ಕುಡಿಯುವದು.
3) ಮನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ನಿಲ್ಲದಂತೆ, ಸೊಳ್ಳೆಗಳು ಉತ್ಪತ್ತಿ ಯಾಗದಂತೆ ನೋಡಿಕೊಳ್ಳುವದು.
4) ಕೈಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು.
5) ಕಣ್ಣು ಮತ್ತು ಕೈಗಳ ನಡುವಿನ ಸಂಪರ್ಕವನ್ನು ತಪ್ಪಿಸಬೇಕು.
6) ಕಣ್ಣುಗಳ ಆಯಾಸ ತಡೆಯಲು ಟಿ.ವಿ. ಮತ್ತು ಮೊಬೈಲ್ ವೀಕ್ಷಣೆ ಕಡಿಮೆ ಮಾಡಬೇಕು.
7) ಸೋಂಕಿತರು ಬಳಸಿದ ಟವೆಲ್ ಬಳಕೆಯನ್ನು ತಪ್ಪಿಸುವುದು.
8) ಸೋಂಕಿತ ವ್ಯಕ್ತಿಗಳು ಮನೆಯಲ್ಲೇ ಇರುವುದು.
9) ವೈದ್ಯರ ಸಲಹೆ ಪಡೆದು ಕಣ್ಣಿನ ಔಷಧಗಳನ್ನು ಬಳಕೆ ಮಾಡುವುದು.
-
Vastu Tips: ವಾಸ್ತು ಪ್ರಕಾರ ನಮ್ಮ ಮನೆಯ ಸುತ್ತಮುತ್ತಲಿನ ವಿನ್ಯಾಸ ಹೇಗಿರಬೇಕು -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ನಿಂಗ್ ವಾಕ್ vs ಈವಿನಿಂಗ್ ವಾಕ್: ಯಾವುದು ಉತ್ತಮ? -
Pomegranate Juice Benefits: 6 ದಿನಗಳಲ್ಲಿ ಕಾಣುವ ಆರೋಗ್ಯ ಬದಲಾವಣೆಗಳು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ











Click it and Unblock the Notifications